AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧಾಶ್ರಮದ ಮೇಲೆ ದಾಳಿ ಮಾಡಿದ ಸಚಿವ, ಮಹಿಳಾ ಆಯೋಗದ ಅಧ್ಯಕ್ಷೆಗೆ ಶಾಕ್​!

ದೆಹಲಿ: ನಿನ್ನೆ ರಾತ್ರಿ ಖಚಿತ ಮಾಹಿತಿ ಮೇರೆಗೆ ದೆಹಲಿಯ ನಾಂಗ್ಲೋಯಿನ ವೃದ್ಧಾಶ್ರಮವೊಂದರ ಮೇಲೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್​ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ರಾಜ್ರೇಂದ್ರ ಗೌತಮ್​ಗೆ ದಾಳಿ ಮಾಡಿದರು. ಈ ವೇಳೆ 19 ಹಿರಿಯ ವಿಶೇಷಚೇತನ ವೃದ್ಧರು ವಾಸಿಸುತ್ತಿದ್ದ ದಾರುಣ ಸ್ಥಿತಿಯನ್ನ ಕಂಡು ಒಂದು ಕ್ಷಣ ದಂಗಾಗಿ ಬಿಟ್ಟರು. ಸಾಮಾಜಿಕ ಅಂತರವಿರಬೇಕಾದ ಇಂದಿನ ಪರಿಸ್ಥಿತಿಯಲ್ಲಿ ವೃದ್ಧರನ್ನ ಸರಿಯಾದ ಗಾಳಿ ಬೆಳಕಿಲ್ಲದ ಸಣ್ಣ ಕೋಣೆಯೊಂದರಲ್ಲಿ ಕೂಡಿಹಾಕಲಾಗಿತ್ತು. ಸರ್ಕಾರೇತರ ಸಂಸ್ಥೆಯೊಂದು ನಿರ್ವಹಿಸುತ್ತಿದ್ದ ಈ […]

ವೃದ್ಧಾಶ್ರಮದ ಮೇಲೆ ದಾಳಿ ಮಾಡಿದ ಸಚಿವ, ಮಹಿಳಾ ಆಯೋಗದ ಅಧ್ಯಕ್ಷೆಗೆ ಶಾಕ್​!
KUSHAL V
| Edited By: |

Updated on:Aug 01, 2020 | 5:21 PM

Share

ದೆಹಲಿ: ನಿನ್ನೆ ರಾತ್ರಿ ಖಚಿತ ಮಾಹಿತಿ ಮೇರೆಗೆ ದೆಹಲಿಯ ನಾಂಗ್ಲೋಯಿನ ವೃದ್ಧಾಶ್ರಮವೊಂದರ ಮೇಲೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್​ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ರಾಜ್ರೇಂದ್ರ ಗೌತಮ್​ಗೆ ದಾಳಿ ಮಾಡಿದರು. ಈ ವೇಳೆ 19 ಹಿರಿಯ ವಿಶೇಷಚೇತನ ವೃದ್ಧರು ವಾಸಿಸುತ್ತಿದ್ದ ದಾರುಣ ಸ್ಥಿತಿಯನ್ನ ಕಂಡು ಒಂದು ಕ್ಷಣ ದಂಗಾಗಿ ಬಿಟ್ಟರು.

ಸಾಮಾಜಿಕ ಅಂತರವಿರಬೇಕಾದ ಇಂದಿನ ಪರಿಸ್ಥಿತಿಯಲ್ಲಿ ವೃದ್ಧರನ್ನ ಸರಿಯಾದ ಗಾಳಿ ಬೆಳಕಿಲ್ಲದ ಸಣ್ಣ ಕೋಣೆಯೊಂದರಲ್ಲಿ ಕೂಡಿಹಾಕಲಾಗಿತ್ತು. ಸರ್ಕಾರೇತರ ಸಂಸ್ಥೆಯೊಂದು ನಿರ್ವಹಿಸುತ್ತಿದ್ದ ಈ ವೃದ್ಧಾಶ್ರಮದ ನಿವಾಸಿಗಳಿಗೆ ಸರಿಯಾದ ಊಟ ಹಾಗೂ ಶೌಚಾಲಯದ ವ್ಯವಸ್ಥೆ ಸಹ ಇರಲಿಲ್ಲವಂತೆ.

ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಕೋಣೆಗಳಿಲ್ಲದೆ ಶೌಚಾಲಯದ ದುರ್ವಾಸನೆ ತುಂಬಿಕೊಂಡಿದ್ದ ಒಂದೇ ಕೋಣೆಯಲ್ಲಿ ವಾಸವಿರಬೇಕಿತ್ತು. ಕೆಲವೊಮ್ಮೆ ದುರ್ನಾಥ ತಡೆಯೋಕಾಗದೆ ವಿಶೇಷಚೇತನ ವೃದ್ಧರು ತಾವೇ ಪ್ರಯಾಸಪಟ್ಟು ಶೌಚಾಲಯ ಮತ್ತು ಹೊಲಸು ಮಾಡಿಕೊಂಡ ಇತರರ ಹಾಸಿಗೆಯನ್ನ ಶುಚಿಗೊಳಿಸುತ್ತಿದ್ದರಂತೆ.

ದಿನದಲ್ಲಿ ನಾಲ್ಕೈದು ಗಂಟೆ ಕರೆಂಟ್​ ಕಟ್​ ಇಷ್ಟೇ ಅಲ್ಲ, ಸಂಸ್ಥೆಯು ವಿದ್ಯುತ್​ ಬಿಲ್ ಉಳಿಸಲು ದಿನದಲ್ಲಿ ನಾಲ್ಕೈದು ಗಂಟೆಗಳ ಕರೆಂಟ್​ ಸಹ ಆಫ್​ ಮಾಡುತ್ತಿದ್ದರಂತೆ. ವೃದ್ಧರಿಗೆ ಫ್ಯಾನ್ ಏಕೆ ಎಂದ ನೆಪವೊಡ್ಡಿ ಅದೂ ಸಹ ಕಸಿದುಕೊಂಡಿದ್ದರು. ಹಲವಾರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಹಿರಿಯರಿಗೆ ಅನ್ನ ಮತ್ತು ಸಾರು ಮಾತ್ರ ನೀಡುತ್ತಿದ್ದರಂತೆ. ಇದನ್ನು ಪ್ರಶ್ನಿಸಿದ್ದಕ್ಕೆ ಸಂಸ್ಥೆಯ ಸಿಬ್ಬಂದಿ ಕೆಲ ಹಿರಿಯರಿಗೆ ಥಳಿಸಿಯೂ ಇದ್ದಾರೆ ಎಂದು ತಿಳಿದುಬಂದಿದೆ.

ಇನ್ನು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಗೌತಮ್ ತನಿಖೆ ನಡೆಸಲು ಸೂಚಿಸಿದ್ದಾರೆ. ಜೊತೆಗೆ, ವೃದ್ಧಾಶ್ರಮ ನಡೆಸುತ್ತಿದ್ದ ಮಾಲೀಕ ಮತ್ತು ಸರ್ಕಾರೇತರ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಜರುಗಿಸಲು ಅಧ್ಯಕ್ಷೆ ಸ್ವಾತಿ ಮಲಿವಾಲ್​ ಆಗ್ರಹಿಸಿದ್ದಾರೆ.

Published On - 5:19 pm, Sat, 1 August 20

Follow Us
KUSHAL V
KUSHAL V
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು