AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧಾಶ್ರಮದ ಮೇಲೆ ದಾಳಿ ಮಾಡಿದ ಸಚಿವ, ಮಹಿಳಾ ಆಯೋಗದ ಅಧ್ಯಕ್ಷೆಗೆ ಶಾಕ್​!

ದೆಹಲಿ: ನಿನ್ನೆ ರಾತ್ರಿ ಖಚಿತ ಮಾಹಿತಿ ಮೇರೆಗೆ ದೆಹಲಿಯ ನಾಂಗ್ಲೋಯಿನ ವೃದ್ಧಾಶ್ರಮವೊಂದರ ಮೇಲೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್​ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ರಾಜ್ರೇಂದ್ರ ಗೌತಮ್​ಗೆ ದಾಳಿ ಮಾಡಿದರು. ಈ ವೇಳೆ 19 ಹಿರಿಯ ವಿಶೇಷಚೇತನ ವೃದ್ಧರು ವಾಸಿಸುತ್ತಿದ್ದ ದಾರುಣ ಸ್ಥಿತಿಯನ್ನ ಕಂಡು ಒಂದು ಕ್ಷಣ ದಂಗಾಗಿ ಬಿಟ್ಟರು. ಸಾಮಾಜಿಕ ಅಂತರವಿರಬೇಕಾದ ಇಂದಿನ ಪರಿಸ್ಥಿತಿಯಲ್ಲಿ ವೃದ್ಧರನ್ನ ಸರಿಯಾದ ಗಾಳಿ ಬೆಳಕಿಲ್ಲದ ಸಣ್ಣ ಕೋಣೆಯೊಂದರಲ್ಲಿ ಕೂಡಿಹಾಕಲಾಗಿತ್ತು. ಸರ್ಕಾರೇತರ ಸಂಸ್ಥೆಯೊಂದು ನಿರ್ವಹಿಸುತ್ತಿದ್ದ ಈ […]

ವೃದ್ಧಾಶ್ರಮದ ಮೇಲೆ ದಾಳಿ ಮಾಡಿದ ಸಚಿವ, ಮಹಿಳಾ ಆಯೋಗದ ಅಧ್ಯಕ್ಷೆಗೆ ಶಾಕ್​!
KUSHAL V
| Edited By: |

Updated on:Aug 01, 2020 | 5:21 PM

Share

ದೆಹಲಿ: ನಿನ್ನೆ ರಾತ್ರಿ ಖಚಿತ ಮಾಹಿತಿ ಮೇರೆಗೆ ದೆಹಲಿಯ ನಾಂಗ್ಲೋಯಿನ ವೃದ್ಧಾಶ್ರಮವೊಂದರ ಮೇಲೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್​ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ರಾಜ್ರೇಂದ್ರ ಗೌತಮ್​ಗೆ ದಾಳಿ ಮಾಡಿದರು. ಈ ವೇಳೆ 19 ಹಿರಿಯ ವಿಶೇಷಚೇತನ ವೃದ್ಧರು ವಾಸಿಸುತ್ತಿದ್ದ ದಾರುಣ ಸ್ಥಿತಿಯನ್ನ ಕಂಡು ಒಂದು ಕ್ಷಣ ದಂಗಾಗಿ ಬಿಟ್ಟರು.

ಸಾಮಾಜಿಕ ಅಂತರವಿರಬೇಕಾದ ಇಂದಿನ ಪರಿಸ್ಥಿತಿಯಲ್ಲಿ ವೃದ್ಧರನ್ನ ಸರಿಯಾದ ಗಾಳಿ ಬೆಳಕಿಲ್ಲದ ಸಣ್ಣ ಕೋಣೆಯೊಂದರಲ್ಲಿ ಕೂಡಿಹಾಕಲಾಗಿತ್ತು. ಸರ್ಕಾರೇತರ ಸಂಸ್ಥೆಯೊಂದು ನಿರ್ವಹಿಸುತ್ತಿದ್ದ ಈ ವೃದ್ಧಾಶ್ರಮದ ನಿವಾಸಿಗಳಿಗೆ ಸರಿಯಾದ ಊಟ ಹಾಗೂ ಶೌಚಾಲಯದ ವ್ಯವಸ್ಥೆ ಸಹ ಇರಲಿಲ್ಲವಂತೆ.

ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಕೋಣೆಗಳಿಲ್ಲದೆ ಶೌಚಾಲಯದ ದುರ್ವಾಸನೆ ತುಂಬಿಕೊಂಡಿದ್ದ ಒಂದೇ ಕೋಣೆಯಲ್ಲಿ ವಾಸವಿರಬೇಕಿತ್ತು. ಕೆಲವೊಮ್ಮೆ ದುರ್ನಾಥ ತಡೆಯೋಕಾಗದೆ ವಿಶೇಷಚೇತನ ವೃದ್ಧರು ತಾವೇ ಪ್ರಯಾಸಪಟ್ಟು ಶೌಚಾಲಯ ಮತ್ತು ಹೊಲಸು ಮಾಡಿಕೊಂಡ ಇತರರ ಹಾಸಿಗೆಯನ್ನ ಶುಚಿಗೊಳಿಸುತ್ತಿದ್ದರಂತೆ.

ದಿನದಲ್ಲಿ ನಾಲ್ಕೈದು ಗಂಟೆ ಕರೆಂಟ್​ ಕಟ್​ ಇಷ್ಟೇ ಅಲ್ಲ, ಸಂಸ್ಥೆಯು ವಿದ್ಯುತ್​ ಬಿಲ್ ಉಳಿಸಲು ದಿನದಲ್ಲಿ ನಾಲ್ಕೈದು ಗಂಟೆಗಳ ಕರೆಂಟ್​ ಸಹ ಆಫ್​ ಮಾಡುತ್ತಿದ್ದರಂತೆ. ವೃದ್ಧರಿಗೆ ಫ್ಯಾನ್ ಏಕೆ ಎಂದ ನೆಪವೊಡ್ಡಿ ಅದೂ ಸಹ ಕಸಿದುಕೊಂಡಿದ್ದರು. ಹಲವಾರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಹಿರಿಯರಿಗೆ ಅನ್ನ ಮತ್ತು ಸಾರು ಮಾತ್ರ ನೀಡುತ್ತಿದ್ದರಂತೆ. ಇದನ್ನು ಪ್ರಶ್ನಿಸಿದ್ದಕ್ಕೆ ಸಂಸ್ಥೆಯ ಸಿಬ್ಬಂದಿ ಕೆಲ ಹಿರಿಯರಿಗೆ ಥಳಿಸಿಯೂ ಇದ್ದಾರೆ ಎಂದು ತಿಳಿದುಬಂದಿದೆ.

ಇನ್ನು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಗೌತಮ್ ತನಿಖೆ ನಡೆಸಲು ಸೂಚಿಸಿದ್ದಾರೆ. ಜೊತೆಗೆ, ವೃದ್ಧಾಶ್ರಮ ನಡೆಸುತ್ತಿದ್ದ ಮಾಲೀಕ ಮತ್ತು ಸರ್ಕಾರೇತರ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಜರುಗಿಸಲು ಅಧ್ಯಕ್ಷೆ ಸ್ವಾತಿ ಮಲಿವಾಲ್​ ಆಗ್ರಹಿಸಿದ್ದಾರೆ.

Published On - 5:19 pm, Sat, 1 August 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ