AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಥಾಣೆಯಲ್ಲಿ ಎನ್‌ಸಿಸಿ ಕೆಡೆಟ್‌ಗಳಿಗೆ ಹಿರಿಯ ವಿದ್ಯಾರ್ಥಿಗಳು ಕೋಲಿನಿಂದ ಥಳಿಸುತ್ತಿರುವ ವಿಡಿಯೊ ವೈರಲ್

ಇಂತಹ ವರ್ತನೆಯನ್ನು ನಾವು ಸಹಿಸುವುದಿಲ್ಲ ಹಿರಿಯ ವಿದ್ಯಾರ್ಥಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲೆ ಸುಚಿತ್ರಾ ನಾಯ್ಕ್ ತಿಳಿಸಿದ್ದಾರೆ.

ಮಹಾರಾಷ್ಟ್ರ: ಥಾಣೆಯಲ್ಲಿ ಎನ್‌ಸಿಸಿ ಕೆಡೆಟ್‌ಗಳಿಗೆ ಹಿರಿಯ ವಿದ್ಯಾರ್ಥಿಗಳು ಕೋಲಿನಿಂದ ಥಳಿಸುತ್ತಿರುವ ವಿಡಿಯೊ ವೈರಲ್
ವೈರಲ್ ವಿಡಿಯೊದ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Aug 03, 2023 | 9:03 PM

Share

ಮುಂಬೈ  ಆಗಸ್ಚ್ 03: ಮುಂಬೈ(Mumbai) ಸಮೀಪದ ಥಾಣೆಯ ಕೆಜಿ ಜೋಶಿ ಕಾಲೇಜ್ ಆಫ್ ಆರ್ಟ್ಸ್ ಮತ್ತು ಎನ್‌ಜಿ ಬೇಡಕರ್ ಕಾಲೇಜ್ ಆಫ್ ಕಾಮರ್ಸ್ (ಸ್ವಾಯತ್ತ)ದಲ್ಲಿ ನ್ಯಾಷನಲ್ ಕೆಡೆಟ್ ಕಾರ್ಪ್ಸ್ (NCC) ತರಬೇತಿ ವೇಳೆ ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ಕೋಲಿನಿಂದ ಥಳಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮುಂಬೈನಲ್ಲಿ ಸುರಿಯುತ್ತಿರುವ ಮಳೆಯ ನಡುವೆ, ಎಂಟು ಯುವಕರನ್ನು ಕೆಸರು ನೀರಿನಲ್ಲಿ ಪುಶ್-ಅಪ್‌ ಮಾಡುವಂತೆ ಒತ್ತಾಯಿಸಲಾಗುತ್ತದೆ. ಆ ಹುಡುಗರ ಮುಖವನ್ನು ನೀರಲ್ಲಿ ಮುಳುಗಿಸಿ ಆಮೇಲೆ ಯುವಕನೊಬ್ಬ ದೊಡ್ಡ ಕೋಲಿನಿಂದ ಅವರ ಬೆನ್ನಿಗೆ ಬಾರಿಸುತ್ತಿರುವುದು ವಿಡಿಯೊದಲ್ಲಿದೆ.

ಕೋಲು ಹಿಡಿದು ಬಾರಿಸುತ್ತಿರುವವ ಹಿರಿಯ ಎನ್‌ಸಿಸಿ ಕೆಡೆಟ್. ಕಠಿಣ ಕಸರತ್ತನ್ನು ಪೂರ್ಣಗೊಳಿಸಲು ವಿಫಲರಾದ ಎನ್‌ಸಿಸಿ ಕೆಡೆಟ್‌ಗಳಿಗೆ ಈ ರೀತಿ ಶಿಕ್ಷೆ ನೀಡಲಾಗಿದ್ದು, ಇದನ್ನು ಕಾಲೇಜಿನ ವಿದ್ಯಾರ್ಥಿಯೊಬ್ಬ ಮೊಬೈಲ್ ಫೋನ್ ನಲ್ಲಿ ಚಿತ್ರೀಕರಿಸಿದ್ದಾನೆ.

ಇಂತಹ ವರ್ತನೆಯನ್ನು ನಾವು ಸಹಿಸುವುದಿಲ್ಲ ಹಿರಿಯ ವಿದ್ಯಾರ್ಥಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲೆ ಸುಚಿತ್ರಾ ನಾಯ್ಕ್ ತಿಳಿಸಿದ್ದಾರೆ.

ಇದನ್ನೂ ಓದಿ: ಲೋಕಸಭೆಯಲ್ಲಿ ದೆಹಲಿ ಸೇವಾ ಮಸೂದೆ ಅಂಗೀಕಾರ: ಮತದಾನದ ವೇಳೆ ವಿಪಕ್ಷ ಸಂಸದರಿಂದ ಸಭಾತ್ಯಾಗ

ಎನ್‌ಸಿಸಿ ಇಲ್ಲಿ ಸಾಕಷ್ಟು ಉತ್ತಮ ಕೆಲಸಗಳಲ್ಲಿ ತೊಡಗಿದೆ. ಸುಮಾರು 40 ವರ್ಷಗಳಿಂದ ಇಲ್ಲಿ ಎನ್‌ಸಿಸಿ ತರಬೇತಿ ನಡೆಯುತ್ತಿದೆ. ಶಿಕ್ಷಕರ ಅನುಪಸ್ಥಿತಿಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿ ಮಾಡಿದ್ದನ್ನು ಮಾನಸಿಕ ಅಸ್ವಸ್ಥರು ಮಾತ್ರ ಮಾಡಬಲ್ಲರು ಎಂಬುದು ಈ ಕೃತ್ಯದಿಂದ ಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ