AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಥಾಣೆಯಲ್ಲಿ ಎನ್‌ಸಿಸಿ ಕೆಡೆಟ್‌ಗಳಿಗೆ ಹಿರಿಯ ವಿದ್ಯಾರ್ಥಿಗಳು ಕೋಲಿನಿಂದ ಥಳಿಸುತ್ತಿರುವ ವಿಡಿಯೊ ವೈರಲ್

ಇಂತಹ ವರ್ತನೆಯನ್ನು ನಾವು ಸಹಿಸುವುದಿಲ್ಲ ಹಿರಿಯ ವಿದ್ಯಾರ್ಥಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲೆ ಸುಚಿತ್ರಾ ನಾಯ್ಕ್ ತಿಳಿಸಿದ್ದಾರೆ.

ಮಹಾರಾಷ್ಟ್ರ: ಥಾಣೆಯಲ್ಲಿ ಎನ್‌ಸಿಸಿ ಕೆಡೆಟ್‌ಗಳಿಗೆ ಹಿರಿಯ ವಿದ್ಯಾರ್ಥಿಗಳು ಕೋಲಿನಿಂದ ಥಳಿಸುತ್ತಿರುವ ವಿಡಿಯೊ ವೈರಲ್
ವೈರಲ್ ವಿಡಿಯೊದ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on: Aug 03, 2023 | 9:03 PM

Share

ಮುಂಬೈ  ಆಗಸ್ಚ್ 03: ಮುಂಬೈ(Mumbai) ಸಮೀಪದ ಥಾಣೆಯ ಕೆಜಿ ಜೋಶಿ ಕಾಲೇಜ್ ಆಫ್ ಆರ್ಟ್ಸ್ ಮತ್ತು ಎನ್‌ಜಿ ಬೇಡಕರ್ ಕಾಲೇಜ್ ಆಫ್ ಕಾಮರ್ಸ್ (ಸ್ವಾಯತ್ತ)ದಲ್ಲಿ ನ್ಯಾಷನಲ್ ಕೆಡೆಟ್ ಕಾರ್ಪ್ಸ್ (NCC) ತರಬೇತಿ ವೇಳೆ ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ಕೋಲಿನಿಂದ ಥಳಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮುಂಬೈನಲ್ಲಿ ಸುರಿಯುತ್ತಿರುವ ಮಳೆಯ ನಡುವೆ, ಎಂಟು ಯುವಕರನ್ನು ಕೆಸರು ನೀರಿನಲ್ಲಿ ಪುಶ್-ಅಪ್‌ ಮಾಡುವಂತೆ ಒತ್ತಾಯಿಸಲಾಗುತ್ತದೆ. ಆ ಹುಡುಗರ ಮುಖವನ್ನು ನೀರಲ್ಲಿ ಮುಳುಗಿಸಿ ಆಮೇಲೆ ಯುವಕನೊಬ್ಬ ದೊಡ್ಡ ಕೋಲಿನಿಂದ ಅವರ ಬೆನ್ನಿಗೆ ಬಾರಿಸುತ್ತಿರುವುದು ವಿಡಿಯೊದಲ್ಲಿದೆ.

ಕೋಲು ಹಿಡಿದು ಬಾರಿಸುತ್ತಿರುವವ ಹಿರಿಯ ಎನ್‌ಸಿಸಿ ಕೆಡೆಟ್. ಕಠಿಣ ಕಸರತ್ತನ್ನು ಪೂರ್ಣಗೊಳಿಸಲು ವಿಫಲರಾದ ಎನ್‌ಸಿಸಿ ಕೆಡೆಟ್‌ಗಳಿಗೆ ಈ ರೀತಿ ಶಿಕ್ಷೆ ನೀಡಲಾಗಿದ್ದು, ಇದನ್ನು ಕಾಲೇಜಿನ ವಿದ್ಯಾರ್ಥಿಯೊಬ್ಬ ಮೊಬೈಲ್ ಫೋನ್ ನಲ್ಲಿ ಚಿತ್ರೀಕರಿಸಿದ್ದಾನೆ.

ಇಂತಹ ವರ್ತನೆಯನ್ನು ನಾವು ಸಹಿಸುವುದಿಲ್ಲ ಹಿರಿಯ ವಿದ್ಯಾರ್ಥಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲೆ ಸುಚಿತ್ರಾ ನಾಯ್ಕ್ ತಿಳಿಸಿದ್ದಾರೆ.

ಇದನ್ನೂ ಓದಿ: ಲೋಕಸಭೆಯಲ್ಲಿ ದೆಹಲಿ ಸೇವಾ ಮಸೂದೆ ಅಂಗೀಕಾರ: ಮತದಾನದ ವೇಳೆ ವಿಪಕ್ಷ ಸಂಸದರಿಂದ ಸಭಾತ್ಯಾಗ

ಎನ್‌ಸಿಸಿ ಇಲ್ಲಿ ಸಾಕಷ್ಟು ಉತ್ತಮ ಕೆಲಸಗಳಲ್ಲಿ ತೊಡಗಿದೆ. ಸುಮಾರು 40 ವರ್ಷಗಳಿಂದ ಇಲ್ಲಿ ಎನ್‌ಸಿಸಿ ತರಬೇತಿ ನಡೆಯುತ್ತಿದೆ. ಶಿಕ್ಷಕರ ಅನುಪಸ್ಥಿತಿಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿ ಮಾಡಿದ್ದನ್ನು ಮಾನಸಿಕ ಅಸ್ವಸ್ಥರು ಮಾತ್ರ ಮಾಡಬಲ್ಲರು ಎಂಬುದು ಈ ಕೃತ್ಯದಿಂದ ಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ