AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಥಾಣೆಯಲ್ಲಿ ಎನ್‌ಸಿಸಿ ಕೆಡೆಟ್‌ಗಳಿಗೆ ಹಿರಿಯ ವಿದ್ಯಾರ್ಥಿಗಳು ಕೋಲಿನಿಂದ ಥಳಿಸುತ್ತಿರುವ ವಿಡಿಯೊ ವೈರಲ್

ಇಂತಹ ವರ್ತನೆಯನ್ನು ನಾವು ಸಹಿಸುವುದಿಲ್ಲ ಹಿರಿಯ ವಿದ್ಯಾರ್ಥಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲೆ ಸುಚಿತ್ರಾ ನಾಯ್ಕ್ ತಿಳಿಸಿದ್ದಾರೆ.

ಮಹಾರಾಷ್ಟ್ರ: ಥಾಣೆಯಲ್ಲಿ ಎನ್‌ಸಿಸಿ ಕೆಡೆಟ್‌ಗಳಿಗೆ ಹಿರಿಯ ವಿದ್ಯಾರ್ಥಿಗಳು ಕೋಲಿನಿಂದ ಥಳಿಸುತ್ತಿರುವ ವಿಡಿಯೊ ವೈರಲ್
ವೈರಲ್ ವಿಡಿಯೊದ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Aug 03, 2023 | 9:03 PM

Share

ಮುಂಬೈ  ಆಗಸ್ಚ್ 03: ಮುಂಬೈ(Mumbai) ಸಮೀಪದ ಥಾಣೆಯ ಕೆಜಿ ಜೋಶಿ ಕಾಲೇಜ್ ಆಫ್ ಆರ್ಟ್ಸ್ ಮತ್ತು ಎನ್‌ಜಿ ಬೇಡಕರ್ ಕಾಲೇಜ್ ಆಫ್ ಕಾಮರ್ಸ್ (ಸ್ವಾಯತ್ತ)ದಲ್ಲಿ ನ್ಯಾಷನಲ್ ಕೆಡೆಟ್ ಕಾರ್ಪ್ಸ್ (NCC) ತರಬೇತಿ ವೇಳೆ ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ಕೋಲಿನಿಂದ ಥಳಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮುಂಬೈನಲ್ಲಿ ಸುರಿಯುತ್ತಿರುವ ಮಳೆಯ ನಡುವೆ, ಎಂಟು ಯುವಕರನ್ನು ಕೆಸರು ನೀರಿನಲ್ಲಿ ಪುಶ್-ಅಪ್‌ ಮಾಡುವಂತೆ ಒತ್ತಾಯಿಸಲಾಗುತ್ತದೆ. ಆ ಹುಡುಗರ ಮುಖವನ್ನು ನೀರಲ್ಲಿ ಮುಳುಗಿಸಿ ಆಮೇಲೆ ಯುವಕನೊಬ್ಬ ದೊಡ್ಡ ಕೋಲಿನಿಂದ ಅವರ ಬೆನ್ನಿಗೆ ಬಾರಿಸುತ್ತಿರುವುದು ವಿಡಿಯೊದಲ್ಲಿದೆ.

ಕೋಲು ಹಿಡಿದು ಬಾರಿಸುತ್ತಿರುವವ ಹಿರಿಯ ಎನ್‌ಸಿಸಿ ಕೆಡೆಟ್. ಕಠಿಣ ಕಸರತ್ತನ್ನು ಪೂರ್ಣಗೊಳಿಸಲು ವಿಫಲರಾದ ಎನ್‌ಸಿಸಿ ಕೆಡೆಟ್‌ಗಳಿಗೆ ಈ ರೀತಿ ಶಿಕ್ಷೆ ನೀಡಲಾಗಿದ್ದು, ಇದನ್ನು ಕಾಲೇಜಿನ ವಿದ್ಯಾರ್ಥಿಯೊಬ್ಬ ಮೊಬೈಲ್ ಫೋನ್ ನಲ್ಲಿ ಚಿತ್ರೀಕರಿಸಿದ್ದಾನೆ.

ಇಂತಹ ವರ್ತನೆಯನ್ನು ನಾವು ಸಹಿಸುವುದಿಲ್ಲ ಹಿರಿಯ ವಿದ್ಯಾರ್ಥಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲೆ ಸುಚಿತ್ರಾ ನಾಯ್ಕ್ ತಿಳಿಸಿದ್ದಾರೆ.

ಇದನ್ನೂ ಓದಿ: ಲೋಕಸಭೆಯಲ್ಲಿ ದೆಹಲಿ ಸೇವಾ ಮಸೂದೆ ಅಂಗೀಕಾರ: ಮತದಾನದ ವೇಳೆ ವಿಪಕ್ಷ ಸಂಸದರಿಂದ ಸಭಾತ್ಯಾಗ

ಎನ್‌ಸಿಸಿ ಇಲ್ಲಿ ಸಾಕಷ್ಟು ಉತ್ತಮ ಕೆಲಸಗಳಲ್ಲಿ ತೊಡಗಿದೆ. ಸುಮಾರು 40 ವರ್ಷಗಳಿಂದ ಇಲ್ಲಿ ಎನ್‌ಸಿಸಿ ತರಬೇತಿ ನಡೆಯುತ್ತಿದೆ. ಶಿಕ್ಷಕರ ಅನುಪಸ್ಥಿತಿಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿ ಮಾಡಿದ್ದನ್ನು ಮಾನಸಿಕ ಅಸ್ವಸ್ಥರು ಮಾತ್ರ ಮಾಡಬಲ್ಲರು ಎಂಬುದು ಈ ಕೃತ್ಯದಿಂದ ಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ