AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಥಾಣೆಯಲ್ಲಿ ಎನ್‌ಸಿಸಿ ಕೆಡೆಟ್‌ಗಳಿಗೆ ಹಿರಿಯ ವಿದ್ಯಾರ್ಥಿಗಳು ಕೋಲಿನಿಂದ ಥಳಿಸುತ್ತಿರುವ ವಿಡಿಯೊ ವೈರಲ್

ಇಂತಹ ವರ್ತನೆಯನ್ನು ನಾವು ಸಹಿಸುವುದಿಲ್ಲ ಹಿರಿಯ ವಿದ್ಯಾರ್ಥಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲೆ ಸುಚಿತ್ರಾ ನಾಯ್ಕ್ ತಿಳಿಸಿದ್ದಾರೆ.

ಮಹಾರಾಷ್ಟ್ರ: ಥಾಣೆಯಲ್ಲಿ ಎನ್‌ಸಿಸಿ ಕೆಡೆಟ್‌ಗಳಿಗೆ ಹಿರಿಯ ವಿದ್ಯಾರ್ಥಿಗಳು ಕೋಲಿನಿಂದ ಥಳಿಸುತ್ತಿರುವ ವಿಡಿಯೊ ವೈರಲ್
ವೈರಲ್ ವಿಡಿಯೊದ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on: Aug 03, 2023 | 9:03 PM

Share

ಮುಂಬೈ  ಆಗಸ್ಚ್ 03: ಮುಂಬೈ(Mumbai) ಸಮೀಪದ ಥಾಣೆಯ ಕೆಜಿ ಜೋಶಿ ಕಾಲೇಜ್ ಆಫ್ ಆರ್ಟ್ಸ್ ಮತ್ತು ಎನ್‌ಜಿ ಬೇಡಕರ್ ಕಾಲೇಜ್ ಆಫ್ ಕಾಮರ್ಸ್ (ಸ್ವಾಯತ್ತ)ದಲ್ಲಿ ನ್ಯಾಷನಲ್ ಕೆಡೆಟ್ ಕಾರ್ಪ್ಸ್ (NCC) ತರಬೇತಿ ವೇಳೆ ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ಕೋಲಿನಿಂದ ಥಳಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮುಂಬೈನಲ್ಲಿ ಸುರಿಯುತ್ತಿರುವ ಮಳೆಯ ನಡುವೆ, ಎಂಟು ಯುವಕರನ್ನು ಕೆಸರು ನೀರಿನಲ್ಲಿ ಪುಶ್-ಅಪ್‌ ಮಾಡುವಂತೆ ಒತ್ತಾಯಿಸಲಾಗುತ್ತದೆ. ಆ ಹುಡುಗರ ಮುಖವನ್ನು ನೀರಲ್ಲಿ ಮುಳುಗಿಸಿ ಆಮೇಲೆ ಯುವಕನೊಬ್ಬ ದೊಡ್ಡ ಕೋಲಿನಿಂದ ಅವರ ಬೆನ್ನಿಗೆ ಬಾರಿಸುತ್ತಿರುವುದು ವಿಡಿಯೊದಲ್ಲಿದೆ.

ಕೋಲು ಹಿಡಿದು ಬಾರಿಸುತ್ತಿರುವವ ಹಿರಿಯ ಎನ್‌ಸಿಸಿ ಕೆಡೆಟ್. ಕಠಿಣ ಕಸರತ್ತನ್ನು ಪೂರ್ಣಗೊಳಿಸಲು ವಿಫಲರಾದ ಎನ್‌ಸಿಸಿ ಕೆಡೆಟ್‌ಗಳಿಗೆ ಈ ರೀತಿ ಶಿಕ್ಷೆ ನೀಡಲಾಗಿದ್ದು, ಇದನ್ನು ಕಾಲೇಜಿನ ವಿದ್ಯಾರ್ಥಿಯೊಬ್ಬ ಮೊಬೈಲ್ ಫೋನ್ ನಲ್ಲಿ ಚಿತ್ರೀಕರಿಸಿದ್ದಾನೆ.

ಇಂತಹ ವರ್ತನೆಯನ್ನು ನಾವು ಸಹಿಸುವುದಿಲ್ಲ ಹಿರಿಯ ವಿದ್ಯಾರ್ಥಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲೆ ಸುಚಿತ್ರಾ ನಾಯ್ಕ್ ತಿಳಿಸಿದ್ದಾರೆ.

ಇದನ್ನೂ ಓದಿ: ಲೋಕಸಭೆಯಲ್ಲಿ ದೆಹಲಿ ಸೇವಾ ಮಸೂದೆ ಅಂಗೀಕಾರ: ಮತದಾನದ ವೇಳೆ ವಿಪಕ್ಷ ಸಂಸದರಿಂದ ಸಭಾತ್ಯಾಗ

ಎನ್‌ಸಿಸಿ ಇಲ್ಲಿ ಸಾಕಷ್ಟು ಉತ್ತಮ ಕೆಲಸಗಳಲ್ಲಿ ತೊಡಗಿದೆ. ಸುಮಾರು 40 ವರ್ಷಗಳಿಂದ ಇಲ್ಲಿ ಎನ್‌ಸಿಸಿ ತರಬೇತಿ ನಡೆಯುತ್ತಿದೆ. ಶಿಕ್ಷಕರ ಅನುಪಸ್ಥಿತಿಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿ ಮಾಡಿದ್ದನ್ನು ಮಾನಸಿಕ ಅಸ್ವಸ್ಥರು ಮಾತ್ರ ಮಾಡಬಲ್ಲರು ಎಂಬುದು ಈ ಕೃತ್ಯದಿಂದ ಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ