AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ಸಾವಿರ ಗಡಿ ದಾಟಿಯೇ ಬಿಟ್ಟಿತು ಭಾರತೀಯ ಷೇರು ಮಾರುಕಟ್ಟೆ ಸೂಚ್ಯಂಕ..! ರಿಲಯನ್ಸ್​, ಇನ್ಪೋಸಿಸ್​ ಷೇರುಗಳಿಗೆ ಹೆಚ್ಚು ಲಾಭ

ಮಹಾಮಾರಿ ಕೊರೊನಾ ನಡುವೆಯೂ ಷೇರುಪೇಟೆ ಸೂಚ್ಯಂಕ 50 ಸಾವಿರದ ಗಡಿ ದಾಟುವ ಮೂಲಕ ದಾಖಲೆ ಬರೆದಿದೆ. ಷೇರುಪೇಟೆ ಸೂಚ್ಯಂಕ 50,096ಕ್ಕೆ ಏರಿಕೆಯಾಗಿದ್ದು ಭಾರತೀಯ ಷೇರು ಮಾರುಕಟ್ಟೆಯಲ್ಲಿ ಹೊಸ ದಾಖಲೆ ಸೃಷ್ಟಿಸಿದೆ.

50 ಸಾವಿರ ಗಡಿ ದಾಟಿಯೇ ಬಿಟ್ಟಿತು ಭಾರತೀಯ ಷೇರು ಮಾರುಕಟ್ಟೆ ಸೂಚ್ಯಂಕ..! ರಿಲಯನ್ಸ್​, ಇನ್ಪೋಸಿಸ್​ ಷೇರುಗಳಿಗೆ ಹೆಚ್ಚು ಲಾಭ
ಷೇರು ಮಾರುಕಟ್ಟೆಯಲ್ಲಿ ಭಾರಿ ದಾಖಲೆ
ಆಯೇಷಾ ಬಾನು
| Edited By: |

Updated on:Jan 21, 2021 | 9:41 AM

Share

ಬೆಂಗಳೂರು: ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರಿ ದಾಖಲೆ ಕಂಡು ಬಂದಿದೆ. ಷೇರುಪೇಟೆ ಸೂಚ್ಯಂಕ 50 ಸಾವಿರದ ಗಡಿ ದಾಟಿದೆ. ಕೊವಿಡ್ ಹೊಡೆತದ ನಡುವೆಯೂ ಷೇರುಪೇಟೆ ಹೊಸ ಮೈಲುಗಲ್ಲು ದಾಟಿದೆ.

ಮಹಾಮಾರಿ ಕೊರೊನಾ ನಡುವೆಯೂ ಷೇರುಪೇಟೆ ಸೂಚ್ಯಂಕ 50 ಸಾವಿರದ ಗಡಿ ದಾಟುವ ಮೂಲಕ ದಾಖಲೆ ಬರೆದಿದೆ. ಷೇರುಪೇಟೆ ಸೂಚ್ಯಂಕ 50,096ಕ್ಕೆ ಏರಿಕೆಯಾಗಿದ್ದು ಭಾರತೀಯ ಷೇರು ಮಾರುಕಟ್ಟೆಯಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ನರೇಂದ್ರ ಮೋದಿ 2019ರಲ್ಲಿ ಅಧಿಕಾರಕ್ಕೇರಿದಾಗ 38,000 ಸೂಚ್ಯಂಕ ಇತ್ತು. ಈಗ ಕೊವಿಡ್ ಸಂಕಟದ ಮಧ್ಯೆಯೂ ಷೇರುಪೇಟೆ ಚಿಗುರಿದೆ.

ಜೋ ಬೈಡೆನ್​ ಅತ್ತ ಅಮೆರಿಕಾದ ನೂತನ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇಂದು ಭಾರತೀಯ ಷೇರು ಪೇಟೆಯಲ್ಲಿ ನವ ಚೈತನ್ಯ ಪುಟಿದೆದ್ದಿದೆ. ಜೋ ಬೈಡೆನ್ ಅಧ್ಯಕ್ಷರಾಗುವ ಮೂಲಕ ಅಮೆರಿಕದಲ್ಲಿ ಅಸ್ಥಿರತೆ ದೂರವಾಗಿದ್ದು, ಹೊಸ ಯುಗಕ್ಕೆ ನಾಂದಿ ಹಾಡಿದಂತಿದೆ. ಇದೂ ಭಾರತದ ಷೇರುಪೇಟೆ ಮೇಲೆ ಪರಿಣಾಮ ಬೀರಿದೆ.

ಇದೇ ವೇಳೆ ನಿಫ್ಟಿ NIFTY ಸೂಚ್ಯಂಕ ಸಹ ಏರಿದ್ದು, 14,700ಕ್ಕೆ ಜಿಗಿದಿದೆ. ರಿಲಯನ್ಸ್​ ಇಂಡಸ್ಟ್ರೀಸ್ ಮತ್ತು ಇನ್ಪೋಸಿಸ್ ಕಂಪನಿಯ ಷೇರುಗಳು ಇದರ ಹೆಚ್ಚಿನ ಲಾಭ ಪಡೆದುಕೊಂಡಿವೆ.

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ಇದು ಸೂಕ್ತ ಸಮಯವೇ? ಇಲ್ಲಿದೆ ಸಂಪೂರ್ಣ ಮಾಹಿತಿ

Published On - 9:33 am, Thu, 21 January 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ