AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Senthil Balaji: ಮದ್ರಾಸ್ ಹೈಕೋರ್ಟ್​ನ ವಿಭಜಿತ ಆದೇಶದ ವಿರುದ್ಧ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ ಸಚಿವ ಸೆಂಥಿಲ್ ಬಾಲಾಜಿ

ಸಚಿವ ವಿ ಸೆಂಥಿಲ್ ಬಾಲಾಜಿ ಮತ್ತು ಅವರ ಪತ್ನಿ ಮೇಗಾಲಾ ಅವರನ್ನು ಇ.ಡಿ ಕಸ್ಟಡಿಯಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಆದೇಶ ನೀಡಿದ ಮದ್ರಾಸ್ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್​ಗೆ ಸಚಿವ ವಿ ಸೆಂಥಿಲ್ ಬಾಲಾಜಿ ಮೇಲ್ಮನವಿ ಸಲ್ಲಿಸಿದ್ದಾರೆ.

Senthil Balaji: ಮದ್ರಾಸ್ ಹೈಕೋರ್ಟ್​ನ ವಿಭಜಿತ ಆದೇಶದ ವಿರುದ್ಧ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ ಸಚಿವ ಸೆಂಥಿಲ್ ಬಾಲಾಜಿ
ಸೆಂಥಿಲ್ ಬಾಲಾಜಿImage Credit source: Zee news
ಅಕ್ಷಯ್​ ಪಲ್ಲಮಜಲು​​
|

Updated on:Jul 18, 2023 | 2:20 PM

Share

ಚೆನ್ನೈ, ಜು.18: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಬಂಧನದಲ್ಲಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ (Senthil Balaji) ಮತ್ತು ಅವರ ಪತ್ನಿ ಮೇಗಾಲಾ ಅವರನ್ನು ಇ.ಡಿ ಕಸ್ಟಡಿಯಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ವಿಭಜಿತ ತೀರ್ಪು ನೀಡಿದ ಮದ್ರಾಸ್ ಹೈಕೋರ್ಟ್​ನ ವಿರುದ್ಧ ಸುಪ್ರೀಂ ಕೋರ್ಟ್​ಗೆ ಸಚಿವ ವಿ ಸೆಂಥಿಲ್ ಬಾಲಾಜಿ ಮೇಲ್ಮನವಿ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿಗಳಾದ ನಿಶಾ ಬಾನು ಮತ್ತು ಡಿ ಭರತ ಚಕ್ರವರ್ತಿ ಅವರು ವಿಭಜಿತ ತೀರ್ಪು ನೀಡಿದರು. ನ್ಯಾಯಮೂರ್ತಿ ನಿಶಾ ಬಾನು ಅವರು ಬಾಲಾಜಿ ಬಿಡುಗಡೆಗಾಗಿ ಸಲ್ಲಿಸಲಾದ ಹೇಬಿಯಸ್ ಕಾರ್ಪಸ್ ಮನವಿಯನ್ನು ಸಮರ್ಥನೀಯವಾಗಿದೆ, ಅವರನ್ನು ಬಿಡುಗಡೆ ಮಾಡಬಹುದು ಎಂದು ತಿಳಿಸಿದ್ದಾರೆ, ಆದರೆ ನ್ಯಾಯಮೂರ್ತಿ ಡಿ ಭರತ ಚಕ್ರವರ್ತಿ ಅವರು ನ್ಯಾಯಮೂರ್ತಿ ಬಾನು ಅವರ ಅಭಿಪ್ರಾಯವನ್ನು ಒಪ್ಪಲು ಸಾಧ್ಯವಿಲ್ಲ, ಎದೆನೋವಿಗೆ ಚಿಕಿತ್ಸೆ ಪಡೆಯುತ್ತಿರುವ ಬಾಲಾಜಿ ಆಸ್ಪತ್ರೆಯಲ್ಲಿರುವಷ್ಟು ದಿನ ಇಡಿ ಕಸ್ಟಡಿಯಿಂದ ಹೊರಗಿರಲಿದ್ದಾರೆ. ಅಷ್ಟರೊಳಗೆ ಬಾಲಾಜಿ ಫಿಟ್ ಆಗಿದ್ದರೆ ಹತ್ತು ದಿನಗಳಲ್ಲಿ ಮತ್ತೆ ಇಡಿ ಕಸ್ಟಡಿಗೆ ತೆರಳಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಸೆಂಥಿಲ್ ಬಾಲಾಜಿ ಬಿಡುಗಡೆ ಕೋರಿ ಅರ್ಜಿ, ಮದ್ರಾಸ್ ಹೈಕೋರ್ಟ್​ನಿಂದ ವಿಭಜಿತ ತೀರ್ಪು

ಸೋಮವಾರ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಸೆಂಥಿಲ್ ಬಾಲಾಜಿ ಅವರನ್ನು ಚೆನ್ನೈನ ಪುಝಲ್ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಯಿದೆ. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಇಡಿ ಬಾಲಾಜಿ ಅವರನ್ನು ಬಂಧಿಸಿತ್ತು. ಇತ್ತೀಚೆಗೆ ನ್ಯಾಯಾಲಯ ಅವರ ಬಂಧನವನ್ನು ಜುಲೈ 26 ರವರೆಗೆ ವಿಸ್ತರಿಸಿತ್ತು.

ಜೂನ್​​ 12ರಂದು ಜಾರಿ ನಿರ್ದೇಶನಾಲಯ ಸಚಿವ ವಿ ಸೆಂಥಿಲ್ ಬಾಲಾಜಿ ಮನೆ ಮತ್ತು ಅವರ ಆಪ್ತರ ಮೇಲೆ ದಾಳಿ ನಡೆಸಿತ್ತು, ನಂತರ ಎಐಎಡಿಎಂಕೆ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದಾಗ ನಡೆದ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸುಮಾರು 19 ಗಂಟೆಗಳ ಕಾಲ ವಿಚಾರಣೆ ನಡೆಸಿದ ಇ.ಡಿ ಅಧಿಕಾರಿಗಳು ಅವರನ್ನು ಬಂಧಿಸಿದರು.

Published On - 1:50 pm, Tue, 18 July 23

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!