ಸೀರಿಯಲ್ ಕಿಲ್ಲರ್ಸ್​: 14 ತಿಂಗಳಲ್ಲಿ 9 ಮಹಿಳೆಯರ ಹತ್ಯೆ, ಮೂವರು ಶಂಕಿತರ ಬಂಧನ

ಕೇವಲ 25 ಕಿ.ಮೀ ವ್ಯಾಕ್ತಿಯಲ್ಲಿ ಕಳೆದ 14 ತಿಂಗಳಲ್ಲಿ 9 ಮಹಿಳೆಯರ ಹತ್ಯೆ ನಡೆದಿರುವುದು ಪೊಲೀಸರನ್ನು ಚಿಂತೆಗೀಡು ಮಾಡಿದೆ. ಬರೇಲಿಯಲ್ಲಿ ನಡೆದಿರುವ ಈ ಪ್ರಕರಣಗಳ ಹಿಂದೆ ಸೀರಿಯಲ್ ಕಿಲ್ಲರ್ಸ್​ ಕೈವಾಡವಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಸೀರಿಯಲ್ ಕಿಲ್ಲರ್ಸ್​: 14 ತಿಂಗಳಲ್ಲಿ 9 ಮಹಿಳೆಯರ ಹತ್ಯೆ, ಮೂವರು ಶಂಕಿತರ ಬಂಧನ
ಸಾವು
Follow us
|

Updated on: Aug 08, 2024 | 9:41 AM

ಬರೇಲಿಯಲ್ಲಿ ಸರಣಿ ಹಂತಕರ ಅಟ್ಟಹಾಸ ಹೆಚ್ಚಾಗಿದೆ, 14 ತಿಂಗಳಲ್ಲಿ 9 ಮಹಿಳೆಯರನ್ನು ಹತ್ಯೆ ಮಾಡಿದ್ದು, ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಶಂಕಿತರನ್ನು ಬಂಧಿಸಿದ್ದಾರೆ. ಈ ಎಲ್ಲಾ ಕೊಲೆಗಳು ಕೇವಲ 25 ಕಿ.ಮೀ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಎಲ್ಲಾ ಕೊಲೆಯ ಹಿಂದೆ ಒಂದೇ ಗುಂಪಿನ ಕೈವಾಡವಿದೆ ಎಂದು ಅಂದಾಜಿಸಲಾಗಿದೆ.

45 ರಿಂದ 55 ವರ್ಷ ವಯಸ್ಸಿನ ಎಲ್ಲಾ ಮಹಿಳೆಯರು, ಮಧ್ಯಾಹ್ನದ ಸುಮಾರಿಗೆ ಹೊಲಗಳಲ್ಲಿ ಕತ್ತು ಹಿಸುಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಬಟ್ಟೆಗಳು ಎಲ್ಲವೂ ಸರಿಯಾಗೇ ಇದ್ದವು ಹಾಗಾಗಿ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಆರು ತಿಂಗಳಿನಿಂದ ಪೊಲೀಸರು ಈ ಪ್ರಕರಣಗಳ ತನಿಖೆ ನಡೆಸುತ್ತಿದ್ದಾರೆ ಎಂದು ಯುಪಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಪ್ರಶಾಂತ್ ಕುಮಾರ್ ಖಚಿತಪಡಿಸಿದ್ದಾರೆ.

ಹಾಗಾದರೆ ಆಭರಣಗಳನ್ನು ದೋಚುವುದೇ ಅವರ ಗುರಿಯಾಗಿದೆ ಎಂದು ಆಲೋಚಿಸಲಾಗಿದೆ. ಇದೆಲ್ಲವೂ ಒಂದೇ ವ್ಯಾಪ್ತಿಯಲ್ಲಿ ನಡೆದಿರುವ ಕಾರಣ ಸೀರಿಯಲ್ ಕಿಲ್ಲರ್ಸ್​ ಕೃತ್ಯವಿರಬಹುದು ಎಂದು ಅಂದಾಜಿಸಲಾಗಿದೆ. ಕೊಲೆಗಳ ಪುನರಾವರ್ತಿತ ಮಾದರಿಯು ಭಾರತದಲ್ಲಿನ ಇತರ ಕುಖ್ಯಾತ ಸೀರಿಯಲ್ ಕಿಲ್ಲರ್​​​ಪ್ರಕರಣಗಳಿಗೆ ಹೋಲಿಕೆಗಳನ್ನು ಮಾಡಿದೆ.

ಮತ್ತಷ್ಟು ಓದಿ: Crime News: ಕೊಲೆ ಮಾಡಿ ಸೂಟ್​ಕೇಸ್​ನಲ್ಲಿ ಶವ ತುಂಬಿ ರೈಲಿನಲ್ಲಿ ಸಾಗಿಸಿದ ಹಂತಕರು

ತೀರಾ ಇತ್ತೀಚಿನವರಲ್ಲಿ ಒಬ್ಬರು ರವೀಂದರ್ ಕುಮಾರ್, 2015 ರಲ್ಲಿ ಆರು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಮಾಡಿ ಬಂಧಿಸಲ್ಪಟ್ಟಿದ್ದರು. ಎಂಟು ವರ್ಷಗಳ ಅವಧಿಯಲ್ಲಿ ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶದಾದ್ಯಂತ ಕನಿಷ್ಠ 30 ಮಕ್ಕಳನ್ನು ಅತ್ಯಾಚಾರ ಮಾಡಿ ಕೊಂದಿರುವುದಾಗಿ ಕುಮಾರ್ ನಂತರ ಒಪ್ಪಿಕೊಂಡಿದ್ದರು.

ಬರೇಲಿಯಲ್ಲಿ ತನಿಖೆ ಮುಂದುವರೆದಿದ್ದು, ಅಪರಾಧಿಯನ್ನು ಪತ್ತೆಹಚ್ಚಲು ಮತ್ತು ಹೆಚ್ಚಿನ ಜೀವಹಾನಿಯನ್ನು ತಡೆಯಲು ಪೊಲೀಸರು ಪ್ರಯತ್ನಗಳನ್ನು ತೀವ್ರಗೊಳಿಸುತ್ತಿದ್ದಾರೆ. ಸ್ಥಳೀಯ ಸಮುದಾಯಗಳು ಹೆಚ್ಚಿನ ಅಲರ್ಟ್‌ನಲ್ಲಿವೆ ಮತ್ತು ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ವರದಿ ಮಾಡುವಂತೆ ಅಧಿಕಾರಿಗಳು ನಿವಾಸಿಗಳನ್ನು ಒತ್ತಾಯಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ