AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರಿಯಲ್ ಕಿಲ್ಲರ್ಸ್​: 14 ತಿಂಗಳಲ್ಲಿ 9 ಮಹಿಳೆಯರ ಹತ್ಯೆ, ಮೂವರು ಶಂಕಿತರ ಬಂಧನ

ಕೇವಲ 25 ಕಿ.ಮೀ ವ್ಯಾಕ್ತಿಯಲ್ಲಿ ಕಳೆದ 14 ತಿಂಗಳಲ್ಲಿ 9 ಮಹಿಳೆಯರ ಹತ್ಯೆ ನಡೆದಿರುವುದು ಪೊಲೀಸರನ್ನು ಚಿಂತೆಗೀಡು ಮಾಡಿದೆ. ಬರೇಲಿಯಲ್ಲಿ ನಡೆದಿರುವ ಈ ಪ್ರಕರಣಗಳ ಹಿಂದೆ ಸೀರಿಯಲ್ ಕಿಲ್ಲರ್ಸ್​ ಕೈವಾಡವಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಸೀರಿಯಲ್ ಕಿಲ್ಲರ್ಸ್​: 14 ತಿಂಗಳಲ್ಲಿ 9 ಮಹಿಳೆಯರ ಹತ್ಯೆ, ಮೂವರು ಶಂಕಿತರ ಬಂಧನ
ಸಾವು
ನಯನಾ ರಾಜೀವ್
|

Updated on: Aug 08, 2024 | 9:41 AM

Share

ಬರೇಲಿಯಲ್ಲಿ ಸರಣಿ ಹಂತಕರ ಅಟ್ಟಹಾಸ ಹೆಚ್ಚಾಗಿದೆ, 14 ತಿಂಗಳಲ್ಲಿ 9 ಮಹಿಳೆಯರನ್ನು ಹತ್ಯೆ ಮಾಡಿದ್ದು, ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಶಂಕಿತರನ್ನು ಬಂಧಿಸಿದ್ದಾರೆ. ಈ ಎಲ್ಲಾ ಕೊಲೆಗಳು ಕೇವಲ 25 ಕಿ.ಮೀ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಎಲ್ಲಾ ಕೊಲೆಯ ಹಿಂದೆ ಒಂದೇ ಗುಂಪಿನ ಕೈವಾಡವಿದೆ ಎಂದು ಅಂದಾಜಿಸಲಾಗಿದೆ.

45 ರಿಂದ 55 ವರ್ಷ ವಯಸ್ಸಿನ ಎಲ್ಲಾ ಮಹಿಳೆಯರು, ಮಧ್ಯಾಹ್ನದ ಸುಮಾರಿಗೆ ಹೊಲಗಳಲ್ಲಿ ಕತ್ತು ಹಿಸುಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಬಟ್ಟೆಗಳು ಎಲ್ಲವೂ ಸರಿಯಾಗೇ ಇದ್ದವು ಹಾಗಾಗಿ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಆರು ತಿಂಗಳಿನಿಂದ ಪೊಲೀಸರು ಈ ಪ್ರಕರಣಗಳ ತನಿಖೆ ನಡೆಸುತ್ತಿದ್ದಾರೆ ಎಂದು ಯುಪಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಪ್ರಶಾಂತ್ ಕುಮಾರ್ ಖಚಿತಪಡಿಸಿದ್ದಾರೆ.

ಹಾಗಾದರೆ ಆಭರಣಗಳನ್ನು ದೋಚುವುದೇ ಅವರ ಗುರಿಯಾಗಿದೆ ಎಂದು ಆಲೋಚಿಸಲಾಗಿದೆ. ಇದೆಲ್ಲವೂ ಒಂದೇ ವ್ಯಾಪ್ತಿಯಲ್ಲಿ ನಡೆದಿರುವ ಕಾರಣ ಸೀರಿಯಲ್ ಕಿಲ್ಲರ್ಸ್​ ಕೃತ್ಯವಿರಬಹುದು ಎಂದು ಅಂದಾಜಿಸಲಾಗಿದೆ. ಕೊಲೆಗಳ ಪುನರಾವರ್ತಿತ ಮಾದರಿಯು ಭಾರತದಲ್ಲಿನ ಇತರ ಕುಖ್ಯಾತ ಸೀರಿಯಲ್ ಕಿಲ್ಲರ್​​​ಪ್ರಕರಣಗಳಿಗೆ ಹೋಲಿಕೆಗಳನ್ನು ಮಾಡಿದೆ.

ಮತ್ತಷ್ಟು ಓದಿ: Crime News: ಕೊಲೆ ಮಾಡಿ ಸೂಟ್​ಕೇಸ್​ನಲ್ಲಿ ಶವ ತುಂಬಿ ರೈಲಿನಲ್ಲಿ ಸಾಗಿಸಿದ ಹಂತಕರು

ತೀರಾ ಇತ್ತೀಚಿನವರಲ್ಲಿ ಒಬ್ಬರು ರವೀಂದರ್ ಕುಮಾರ್, 2015 ರಲ್ಲಿ ಆರು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಮಾಡಿ ಬಂಧಿಸಲ್ಪಟ್ಟಿದ್ದರು. ಎಂಟು ವರ್ಷಗಳ ಅವಧಿಯಲ್ಲಿ ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶದಾದ್ಯಂತ ಕನಿಷ್ಠ 30 ಮಕ್ಕಳನ್ನು ಅತ್ಯಾಚಾರ ಮಾಡಿ ಕೊಂದಿರುವುದಾಗಿ ಕುಮಾರ್ ನಂತರ ಒಪ್ಪಿಕೊಂಡಿದ್ದರು.

ಬರೇಲಿಯಲ್ಲಿ ತನಿಖೆ ಮುಂದುವರೆದಿದ್ದು, ಅಪರಾಧಿಯನ್ನು ಪತ್ತೆಹಚ್ಚಲು ಮತ್ತು ಹೆಚ್ಚಿನ ಜೀವಹಾನಿಯನ್ನು ತಡೆಯಲು ಪೊಲೀಸರು ಪ್ರಯತ್ನಗಳನ್ನು ತೀವ್ರಗೊಳಿಸುತ್ತಿದ್ದಾರೆ. ಸ್ಥಳೀಯ ಸಮುದಾಯಗಳು ಹೆಚ್ಚಿನ ಅಲರ್ಟ್‌ನಲ್ಲಿವೆ ಮತ್ತು ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ವರದಿ ಮಾಡುವಂತೆ ಅಧಿಕಾರಿಗಳು ನಿವಾಸಿಗಳನ್ನು ಒತ್ತಾಯಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ