ಸೀರಿಯಲ್ ಕಿಲ್ಲರ್ಸ್​: 14 ತಿಂಗಳಲ್ಲಿ 9 ಮಹಿಳೆಯರ ಹತ್ಯೆ, ಮೂವರು ಶಂಕಿತರ ಬಂಧನ

ಕೇವಲ 25 ಕಿ.ಮೀ ವ್ಯಾಕ್ತಿಯಲ್ಲಿ ಕಳೆದ 14 ತಿಂಗಳಲ್ಲಿ 9 ಮಹಿಳೆಯರ ಹತ್ಯೆ ನಡೆದಿರುವುದು ಪೊಲೀಸರನ್ನು ಚಿಂತೆಗೀಡು ಮಾಡಿದೆ. ಬರೇಲಿಯಲ್ಲಿ ನಡೆದಿರುವ ಈ ಪ್ರಕರಣಗಳ ಹಿಂದೆ ಸೀರಿಯಲ್ ಕಿಲ್ಲರ್ಸ್​ ಕೈವಾಡವಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಸೀರಿಯಲ್ ಕಿಲ್ಲರ್ಸ್​: 14 ತಿಂಗಳಲ್ಲಿ 9 ಮಹಿಳೆಯರ ಹತ್ಯೆ, ಮೂವರು ಶಂಕಿತರ ಬಂಧನ
ಸಾವು

Updated on: Aug 08, 2024 | 9:41 AM

ಬರೇಲಿಯಲ್ಲಿ ಸರಣಿ ಹಂತಕರ ಅಟ್ಟಹಾಸ ಹೆಚ್ಚಾಗಿದೆ, 14 ತಿಂಗಳಲ್ಲಿ 9 ಮಹಿಳೆಯರನ್ನು ಹತ್ಯೆ ಮಾಡಿದ್ದು, ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಶಂಕಿತರನ್ನು ಬಂಧಿಸಿದ್ದಾರೆ. ಈ ಎಲ್ಲಾ ಕೊಲೆಗಳು ಕೇವಲ 25 ಕಿ.ಮೀ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಎಲ್ಲಾ ಕೊಲೆಯ ಹಿಂದೆ ಒಂದೇ ಗುಂಪಿನ ಕೈವಾಡವಿದೆ ಎಂದು ಅಂದಾಜಿಸಲಾಗಿದೆ.

45 ರಿಂದ 55 ವರ್ಷ ವಯಸ್ಸಿನ ಎಲ್ಲಾ ಮಹಿಳೆಯರು, ಮಧ್ಯಾಹ್ನದ ಸುಮಾರಿಗೆ ಹೊಲಗಳಲ್ಲಿ ಕತ್ತು ಹಿಸುಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಅವರ ಬಟ್ಟೆಗಳು ಎಲ್ಲವೂ ಸರಿಯಾಗೇ ಇದ್ದವು ಹಾಗಾಗಿ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಆರು ತಿಂಗಳಿನಿಂದ ಪೊಲೀಸರು ಈ ಪ್ರಕರಣಗಳ ತನಿಖೆ ನಡೆಸುತ್ತಿದ್ದಾರೆ ಎಂದು ಯುಪಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಪ್ರಶಾಂತ್ ಕುಮಾರ್ ಖಚಿತಪಡಿಸಿದ್ದಾರೆ.

ಹಾಗಾದರೆ ಆಭರಣಗಳನ್ನು ದೋಚುವುದೇ ಅವರ ಗುರಿಯಾಗಿದೆ ಎಂದು ಆಲೋಚಿಸಲಾಗಿದೆ. ಇದೆಲ್ಲವೂ ಒಂದೇ ವ್ಯಾಪ್ತಿಯಲ್ಲಿ ನಡೆದಿರುವ ಕಾರಣ ಸೀರಿಯಲ್ ಕಿಲ್ಲರ್ಸ್​ ಕೃತ್ಯವಿರಬಹುದು ಎಂದು ಅಂದಾಜಿಸಲಾಗಿದೆ. ಕೊಲೆಗಳ ಪುನರಾವರ್ತಿತ ಮಾದರಿಯು ಭಾರತದಲ್ಲಿನ ಇತರ ಕುಖ್ಯಾತ ಸೀರಿಯಲ್ ಕಿಲ್ಲರ್​​​ಪ್ರಕರಣಗಳಿಗೆ ಹೋಲಿಕೆಗಳನ್ನು ಮಾಡಿದೆ.

ಮತ್ತಷ್ಟು ಓದಿ: Crime News: ಕೊಲೆ ಮಾಡಿ ಸೂಟ್​ಕೇಸ್​ನಲ್ಲಿ ಶವ ತುಂಬಿ ರೈಲಿನಲ್ಲಿ ಸಾಗಿಸಿದ ಹಂತಕರು

ತೀರಾ ಇತ್ತೀಚಿನವರಲ್ಲಿ ಒಬ್ಬರು ರವೀಂದರ್ ಕುಮಾರ್, 2015 ರಲ್ಲಿ ಆರು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಮಾಡಿ ಬಂಧಿಸಲ್ಪಟ್ಟಿದ್ದರು. ಎಂಟು ವರ್ಷಗಳ ಅವಧಿಯಲ್ಲಿ ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶದಾದ್ಯಂತ ಕನಿಷ್ಠ 30 ಮಕ್ಕಳನ್ನು ಅತ್ಯಾಚಾರ ಮಾಡಿ ಕೊಂದಿರುವುದಾಗಿ ಕುಮಾರ್ ನಂತರ ಒಪ್ಪಿಕೊಂಡಿದ್ದರು.

ಬರೇಲಿಯಲ್ಲಿ ತನಿಖೆ ಮುಂದುವರೆದಿದ್ದು, ಅಪರಾಧಿಯನ್ನು ಪತ್ತೆಹಚ್ಚಲು ಮತ್ತು ಹೆಚ್ಚಿನ ಜೀವಹಾನಿಯನ್ನು ತಡೆಯಲು ಪೊಲೀಸರು ಪ್ರಯತ್ನಗಳನ್ನು ತೀವ್ರಗೊಳಿಸುತ್ತಿದ್ದಾರೆ. ಸ್ಥಳೀಯ ಸಮುದಾಯಗಳು ಹೆಚ್ಚಿನ ಅಲರ್ಟ್‌ನಲ್ಲಿವೆ ಮತ್ತು ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ವರದಿ ಮಾಡುವಂತೆ ಅಧಿಕಾರಿಗಳು ನಿವಾಸಿಗಳನ್ನು ಒತ್ತಾಯಿಸುತ್ತಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us