AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಕೇಸ್ ದಾಖಲಿಸದಿರಲು ಬದ್ಧ; ಸುಪ್ರೀಂ ಕೋರ್ಟ್‌ಗೆ ಸರ್ಕಾರ ಸ್ಪಷ್ಟನೆ

ಪರೀಕ್ಷೆ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳ ವಿರುದ್ಧ ಯಾವುದೇ ರೀತಿಯ ಕೇಸ್ (FIR) ದಾಖಲಿಸುವುದಿಲ್ಲ ಅಥವಾ ಕಾನೂನು ಕ್ರಮ ಜರುಗಿಸುವುದಿಲ್ಲ ಎಂಬ ಭರವಸೆಗೆ ಸಂಪೂರ್ಣ ಬದ್ಧವಾಗಿರುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಈ ವೇಳೆ ಪ್ರತಿಭಟನೆಯ ಸಮಯದಲ್ಲಿ ಪೊಲೀಸರು ಅತಿಯಾದ ಬಲಪ್ರಯೋಗ ನಡೆಸಿದ್ದಾರೆ ಎಂಬ ಆರೋಪದ ಕುರಿತಾಗಿಯೂ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿತು.

ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಕೇಸ್ ದಾಖಲಿಸದಿರಲು ಬದ್ಧ; ಸುಪ್ರೀಂ ಕೋರ್ಟ್‌ಗೆ ಸರ್ಕಾರ ಸ್ಪಷ್ಟನೆ
Supreme Court Image Credit source: TV9
ಸುಷ್ಮಾ ಚಕ್ರೆ
|

Updated on: Aug 03, 2026 | 3:25 PM

Share

ನವದೆಹಲಿ, ಆಗಸ್ಟ್ 3: ಪ್ರಶ್ನೆ ಪತ್ರಿಕೆ ಸೋರಿಕೆ (NEET Paper Leak) ಖಂಡಿಸಿ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳ ವಿರುದ್ಧ ಯಾವುದೇ ರೀತಿಯ ಕ್ರಿಮಿನಲ್ ಅಥವಾ ಕಾನೂನು ಕ್ರಮ ಜರುಗಿಸುವುದಿಲ್ಲ ಎಂಬ ತನ್ನ ಆಶ್ವಾಸನೆಗೆ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಕೇಂದ್ರ ಸರ್ಕಾರ ಇಂದು ಸುಪ್ರೀಂ ಕೋರ್ಟ್‌ಗೆ (Supreme Court) ತಿಳಿಸಿದೆ. ಆದರೆ, ಗಂಭೀರ ಹಾಗೂ ಘೋರ ಅಪರಾಧಗಳಲ್ಲಿ ಭಾಗಿಯಾದವರಿಗೆ ಯಾವುದೇ ರೀತಿಯ ವಿನಾಯಿತಿ ನೀಡಲಾಗುವುದಿಲ್ಲ ಎಂದು ಕೂಡ ಸ್ಪಷ್ಟಪಡಿಸಿದೆ. ಜುಲೈ 20ರಂದು ನಡೆದ ‘ಸಂಸದ್ ಚಲೋ’ ಮೆರವಣಿಗೆಯ ಸಮಯದಲ್ಲಿ ನಡೆದ ಹಿಂಸಾಚಾರ ಮತ್ತು ಲಾಠಿಚಾರ್ಜ್‌ಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಇಂದು ಭಾರತದ ಮುಖ್ಯ ನ್ಯಾಯಮೂರ್ತಿ (CJI) ನೇತೃತ್ವದ ನ್ಯಾಯಪೀಠ ನಡೆಸಿತು.

ವಿದ್ಯಾರ್ಥಿಗಳಿಗೆ ರಕ್ಷಣೆ:

ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅವರ ಮೇಲೆ ಯಾವುದೇ ಕಠಿಣ ಕ್ರಮಗಳನ್ನು ಕೈಗೊಳ್ಳದಿರಲು ಸರ್ಕಾರ ನಿರ್ಧರಿಸಿದೆ. ಅವರ ಮೇಲಿನ ಕೇಸುಗಳನ್ನು ಹಿಂಪಡೆಯಲು ಅಥವಾ ಮುಕ್ತಾಯಗೊಳಿಸಲು ರಾಜ್ಯ ಸರ್ಕಾರಗಳ ಜೊತೆ ಚರ್ಚಿಸಿ ಸೂಕ್ತ ಮಾರ್ಗ ಕಂಡುಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯುಕ್ತರ ನೇಮಕಾತಿಗೆ ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರ ಸರ್ಕಾರ ಸಮರ್ಥನೆ

“ನಾವು ಅರ್ಜಿದಾರರೊಂದಿಗೆ ಮಾತನಾಡಿದ್ದೇವೆ. ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಿಸಲು ನಮಗೆ ಇಷ್ಟವಿಲ್ಲ. ಇದಕ್ಕೆ ಅಗತ್ಯವಿರುವ ಎಲ್ಲಾ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು. ಆದರೆ, ವಿದ್ಯಾರ್ಥಿ ಪ್ರತಿಭಟನೆಯ ನೆಪದಲ್ಲಿ ನುಸುಳಿರುವ ಕ್ರಿಮಿನಲ್ ಮತ್ತು ಸಮಾಜಘಾತಕ ಶಕ್ತಿಗಳಿಗೆ ಯಾವುದೇ ಕಾರಣಕ್ಕೂ ವಿನಾಯಿತಿ ನೀಡಲು ಸಾಧ್ಯವಿಲ್ಲ. ವಿದ್ಯಾರ್ಥಿಗಳ ವಿರುದ್ಧದ ಎಫ್‌ಐಆರ್‌ಗಳನ್ನು ಹಿಂಪಡೆಯುವ ಕುರಿತು ಹಿರಿಯ ನ್ಯಾಯವಾದಿ ವೃಂದಾ ಗ್ರೋವರ್ ಅವರೊಂದಿಗೂ ಚರ್ಚೆ ನಡೆಸಲಾಗಿದೆ” ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೋರ್ಟ್‌ಗೆ ತಿಳಿಸಿದರು.

ಸಮಾಜಘಾತಕ ಶಕ್ತಿಗಳಿಗೆ ವಿನಾಯಿತಿ ಇಲ್ಲ:

ಸರ್ಕಾರದ ಈ ಭರವಸೆ ವಿದ್ಯಾರ್ಥಿ ಪ್ರತಿಭಟನಾಕಾರರಿಗೆ ಮಾತ್ರ ಅನ್ವಯವಾಗುತ್ತದೆ. ಆದರೆ, ಪ್ರತಿಭಟನೆಯ ನೆಪದಲ್ಲಿ ನುಸುಳಿ ಹಿಂಸಾಚಾರ ನಡೆಸಿದ, ಗಂಭೀರ ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಸಮಾಜಘಾತಕ ಶಕ್ತಿಗಳಿಗೆ ಯಾವುದೇ ಕಾರಣಕ್ಕೂ ರಕ್ಷಣೆ ಅಥವಾ ವಿನಾಯಿತಿ ನೀಡಲಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಲಾಗಿದೆ.

ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನೈಜ ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ಪ್ರಕರಣಗಳು ಮತ್ತು ಕ್ರಿಮಿನಲ್​​ಗಳ ಮೇಲಿನ ಪ್ರಕರಣಗಳನ್ನು ತಕ್ಷಣವೇ ಪ್ರತ್ಯೇಕಿಸಿ ತನಿಖೆ ನಡೆಸುವಂತೆ ಸೂಚನೆ ನೀಡಿದೆ. ಹಾಗೇ, ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಅತಿಯಾದ ಬಲಪ್ರಯೋಗ ಹಾಗೂ ಲಾಠಿಚಾರ್ಜ್ ಕುರಿತು ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಇದರ ತನಿಖೆಗೆ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ಅಥವಾ ತನಿಖಾ ತಂಡ (SIT) ರಚಿಸುವ ಕುರಿತು ನ್ಯಾಯಾಲಯ ಚಿಂತಿಸುತ್ತಿದೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ಗೆ ಮತ್ತಷ್ಟು ಶಕ್ತಿ: ನ್ಯಾಯಮೂರ್ತಿಗಳ ಸಂಖ್ಯೆ 38ಕ್ಕೆ ಹೆಚ್ಚಿಸಲು ಲೋಕಸಭೆಯಲ್ಲಿ ಮಸೂದೆ ಮಂಡನೆ

ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿ, ‘ಅಪರಾಧ ಹಿನ್ನೆಲೆ’ ಎಂಬ ಪದದ ವ್ಯಾಪ್ತಿಯನ್ನು ಸ್ಪಷ್ಟಪಡಿಸಬೇಕು, ಇಲ್ಲವಾದಲ್ಲಿ ಸಣ್ಣಪುಟ್ಟ ರಾಜಕೀಯ ಪ್ರತಿಭಟನೆಗಳು ಅಥವಾ ಕ್ಷುಲ್ಲಕ ಪ್ರಕರಣಗಳನ್ನೂ ಅಪರಾಧ ಹಿನ್ನೆಲೆ ಎಂದು ಪರಿಗಣಿಸುವ ಅಪಾಯವಿದೆ ಎಂದರು.

ಇದಕ್ಕೆ ಸ್ಪಷ್ಟನೆ ನೀಡಿದ ಸುಪ್ರೀಂ ಕೋರ್ಟ್ ‘ಅಪರಾಧ ಹಿನ್ನೆಲೆ’ ಎಂದರೆ ಕೊಲೆ ಅಥವಾ ಇತರೆ ಘೋರ ಅಪರಾಧ ಎದುರಿಸುತ್ತಿರುವವರು ಮಾತ್ರ. ಸಣ್ಣಪುಟ್ಟ ರಾಜಕೀಯ ಪ್ರತಿಭಟನೆಗಳು ಅಥವಾ ಕ್ಷುಲ್ಲಕ ಪ್ರಕರಣಗಳು ಇದರಲ್ಲಿ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿತು.

ಪ್ರತಿಭಟನೆಯ ಸಮಯದಲ್ಲಿ ಪೊಲೀಸರು ಅತಿಯಾದ ಬಲಪ್ರಯೋಗ ನಡೆಸಿದ್ದಾರೆ ಎಂಬ ಆರೋಪದ ಕುರಿತಾಗಿಯೂ ನ್ಯಾಯಾಲಯ ಕಳವಳ ವ್ಯಕ್ತಪಡಿಸಿತು. ಅರ್ಜಿದಾರರ ಪರ ವಕೀಲ ಗೋಪಾಲ್ ಶಂಕರನಾರಾಯಣನ್ ಅವರು, ಲಾಠಿಚಾರ್ಜ್ ಮಾಡಲು ಆದೇಶಿಸಿದ ಮತ್ತು ನಡೆಸಿದ ಅಧಿಕಾರಿಗಳ ಗುರುತಿನ ಕುರಿತು ಪ್ರಶ್ನಿಸಿದರು.

ಪೊಲೀಸ್ ಅಧಿಕಾರಿಗಳ ಅತಿಯಾದ ವರ್ತನೆಯನ್ನು ಎಂದಿಗೂ ಸಮರ್ಥಿಸಿಕೊಳ್ಳಲು ಅಥವಾ ರಕ್ಷಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪೊಲೀಸರ ವರ್ತನೆ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (SIT) ರಚಿಸಬೇಕೇ ಅಥವಾ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಸಮಿತಿಯನ್ನು ರಚಿಸಬೇಕೇ ಎಂಬುದನ್ನು ನ್ಯಾಯಾಲಯ ಪರಿಶೀಲಿಸುತ್ತಿದೆ ಎಂದು ತಿಳಿಸಿದೆ.

ಆಗಸ್ಟ್ 18ಕ್ಕೆ ಮುಂದಿನ ವಿಚಾರಣೆ:

ಇಂದು ಈ ಪ್ರಕರಣದ ವಿಚಾರಣೆಯ ಕೊನೆಯಲ್ಲಿ ಮುಖ್ಯ ನ್ಯಾಯಮೂರ್ತಿಗಳು ಮುಂದಿನ ವಿಚಾರಣೆಯನ್ನು ಆಗಸ್ಟ್ 18ಕ್ಕೆ ನಿಗದಿಪಡಿಸಿದರು. ಅಂದು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಪ್ರಸ್ತಾವಿತ ಸಮಿತಿಯ ರಚನೆ ಮತ್ತು ಅದರ ವ್ಯಾಪ್ತಿಯ ಬಗ್ಗೆ ನಿರ್ಧರಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದ್ದು, ಸಂಬಂಧಪಟ್ಟ ಎಲ್ಲಾ ಕಡೆಯವರು ತಮ್ಮ ಪ್ರತ್ಯುತ್ತರ ಅಥವಾ ಅಫಿಡವಿಟ್‌ಗಳನ್ನು ಮುಂದಿನ ವಿಚಾರಣೆಯೊಳಗೆ ಸಲ್ಲಿಸುವಂತೆ ಕೋರ್ಟ್ ಆದೇಶಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ