AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಆಕ್ಸಿಜನ್​, ರೆಮ್​ಡಿಸಿವಿರ್ ಔಷಧ​​ಗಳ ತೀವ್ರ ಕೊರತೆ: ಆತಂಕ ವ್ಯಕ್ತಪಡಿಸಿದ ಸಿಎಂ ಅರವಿಂದ್ ಕೇಜ್ರಿವಾಲ್​

ದೆಹಲಿಯಲ್ಲಿ ಸೀಮಿತ ಸಂಖ್ಯೆಯಲ್ಲಿ ಐಸಿಯು ಬೆಡ್​ಗಳಿವೆ. ಈಗಂತೂ ಕೊವಿಡ್​ ರೋಗಿಗಳು ಹೆಚ್ಚುತ್ತಿರುವುದರಿಂದ ಆಕ್ಸಿಜನ್​, ಐಸಿಯು ಬೆಡ್​ಗಳು, ರೆಮ್​ಡಿಸಿವಿರ್ ಔಷಧಗಳು ಶೀಘ್ರವಾಗಿ ಕಡಿಮೆಯಾಗುತ್ತಿವೆ ಎಂದು ಅರವಿಂದ್ ಕೇಜ್ರಿವಾಲ್​ ತಿಳಿಸಿದ್ದಾರೆ.

ದೆಹಲಿಯಲ್ಲಿ ಆಕ್ಸಿಜನ್​, ರೆಮ್​ಡಿಸಿವಿರ್ ಔಷಧ​​ಗಳ ತೀವ್ರ ಕೊರತೆ: ಆತಂಕ ವ್ಯಕ್ತಪಡಿಸಿದ ಸಿಎಂ ಅರವಿಂದ್ ಕೇಜ್ರಿವಾಲ್​
ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​
Lakshmi Hegde
|

Updated on: Apr 18, 2021 | 9:27 AM

Share

ದೆಹಲಿ: ಆಸ್ಪತ್ರೆಗಳಲ್ಲಿ ಆಕ್ಸಿಜನ್​ ಕೊರತೆ ವಿಷಯ ದೊಡ್ಡಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಮಧ್ಯೆ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್ ಕೂಡ ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಕೊರೊನಾ ರೋಗಿಗಳ ಚಿಕಿತ್ಸೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಆಕ್ಸಿಜನ್​ ಮತ್ತು ರೆಮ್​ಡಿಸಿವಿರ್ ಔಷಧ​​ಗಳ ತೀವ್ರ ಕೊರತೆ ಎದುರಾಗಿದೆ ಎಂದು ಹೇಳಿದ್ದಾರೆ. ದೆಹಲಿಯಲ್ಲಿಯೂ ಸಹ ಕೊರೊನಾ ದಿನೇದಿನೆ ಹೆಚ್ಚಾಗುತ್ತಿದ್ದು, ಒಂದು ದಿನದಲ್ಲಿ 24ಸಾವಿರದ ಆಸುಪಾಸು ಕೇಸ್​ಗಳು ದಾಖಲಾಗುತ್ತಿವೆ ಎಂದು ತಿಳಿಸಿದ್ದಾರೆ.

ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅರವಿಂದ್ ಕೇಜ್ರಿವಾಲ್​, ದೆಹಲಿಯಲ್ಲಿ ಒಂದೇ ದಿನ 24 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್​ಗಳು ದಾಖಲಾಗುತ್ತಿವೆ. ಆದರೆ ಅವರಿಗೆ ಸೂಕ್ತ ಚಿಕಿತ್ಸೆ ನೀಡಲು ಆಕ್ಸಿಜನ್​, ರೆಮ್​ಡಿಸಿವಿರ್ ಔಷಧಗಳು ಸಾಕಾಗುತ್ತಿಲ್ಲ. ತೀವ್ರತರನಾದ ಕೊರತೆ ಎದುರಾಗಿದೆ. ಇನ್ನು ಬ್ಲಾಕ್​ ಮಾರ್ಕೆಟ್​​ನಲ್ಲಿ ಔಷಧ ಮಾರಾಟ ಮಾಡುವ ದಂಧೆಯೂ ಶುರುವಾಗಿದ್ದು, ಅವರ ವಿರುದ್ಧ ಕ್ರಮಕ್ಕೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದರು.

ದೆಹಲಿಯಲ್ಲಿ ಸೀಮಿತ ಸಂಖ್ಯೆಯಲ್ಲಿ ಐಸಿಯು ಬೆಡ್​ಗಳಿವೆ. ಈಗಂತೂ ಕೊವಿಡ್​ ರೋಗಿಗಳು ಹೆಚ್ಚುತ್ತಿರುವುದರಿಂದ ಆಕ್ಸಿಜನ್​, ಐಸಿಯು ಬೆಡ್​ಗಳು, ರೆಮ್​ಡಿಸಿವಿರ್ ಔಷಧಗಳು ಶೀಘ್ರವಾಗಿ ಕಡಿಮೆಯಾಗುತ್ತಿವೆ. ಇನ್ನು 2-3ದಿನಗಳಲ್ಲಿ 6000 ಬೆಡ್​ಗಳನ್ನು ಹೆಚ್ಚಿಸುತ್ತೇವೆ. ಈ ಕೊರೊನಾ ಇನ್ನೆಷ್ಟು ಉತ್ತುಂಗಕ್ಕೆ ಹೋಗುತ್ತದೆ ಎಂಬ ಅಂದಾಜು ಮಾಡಲು ಸಾಧ್ಯವಾಗುತ್ತಿಲ್ಲ ಎಂದರು. ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅರವಿಂದ್ ಕೇಜ್ರಿವಾಲ್, ಕಳೆದ ನವೆಂಬರ್​ನಲ್ಲಿ ಕೇಂದ್ರ ಸರ್ಕಾರ 4100 ಬೆಡ್​ಗಳನ್ನು ನೀಡಿತ್ತು. ಆದರೆ ಈ ಬಾರಿ ಕೇವಲ 1800 ಹಾಸಿಗೆಗಳ ವ್ಯವಸ್ಥೆ ಮಾಡಿದೆ. ಶೇ.50ರಷ್ಟು ಬೆಡ್​ಗಳನ್ನು ಕೊವಿಡ್ ರೋಗಿಗಳಿಗೆ ಮೀಸಲಿಡಿ ಎಂದು ಆರೋಗ್ಯ ಸಚಿವ ಹರ್ಷವರ್ಧನ್​ ಅವರಿಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ದೆಹಲಿಯಲ್ಲಿ ಕೆಲವು ಲ್ಯಾಬ್​ಗಳು ಕೊವಿಡ್ 19 ರಿಪೋರ್ಟ್ ನೀಡಲು 2-3ದಿನ ವಿಳಂಬ ಮಾಡುತ್ತಿವೆ. ಈ ಬಗ್ಗೆ ದೂರು ಬಂದಿದ್ದು ಅದರ ಬಗ್ಗೆ ಗಮನ ಹರಿಸುತ್ತೇವೆ. ಅಂಥ ಪ್ರಯೋಗಾಲಯಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಭಾರತದಲ್ಲಿ ಇಂದು 2 ಲಕ್ಷದ 60 ಸಾವಿರ ಮಂದಿಗೆ ಸೋಂಕು, 1,495 ಮಂದಿ ಬಲಿ

ಆಳಂಗಾ ಗ್ರಾಮದ 60 ಜನರಿಗೆ ಕೊರೊನಾ, ಭಾಗವತ ಪುರಾಣ ಓದಲು ಮಹಾರಾಷ್ಟ್ರದಿಂದ ಬಂದವರ ಮೇಲೆ ಶಂಕೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ