AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆಯಿಂದ 1.1 ಕೋಟಿ ಡೋಸ್ ಕೊರೊನಾ ಲಸಿಕೆ ರವಾನೆ: ವಿವಿಧ ರಾಜ್ಯಗಳಿಗೆ ಹೊರಟ ಕೊವಿಶೀಲ್ಡ್

ಪುಣೆಯಿಂದ 1.1 ಕೋಟಿ ಡೋಸ್​ಗಳಷ್ಟು ಕೊವಿಶೀಲ್ಡ್ ಲಸಿಕೆ ವಿವಿಧ ರಾಜ್ಯಗಳಿಗೆ ರವಾನೆಯಾಗಿದೆ. ಲಸಿಕೆಯು ರಾತ್ರಿ ವೇಳೆಗೆ ಬೆಂಗಳೂರಿಗೆ ತಲುಪುವ ಸಾಧ್ಯತೆ ಅಂದಾಜಿಸಲಾಗಿದೆ.

ಪುಣೆಯಿಂದ 1.1 ಕೋಟಿ ಡೋಸ್ ಕೊರೊನಾ ಲಸಿಕೆ ರವಾನೆ: ವಿವಿಧ ರಾಜ್ಯಗಳಿಗೆ ಹೊರಟ ಕೊವಿಶೀಲ್ಡ್
ಕೊವಿಶೀಲ್ಡ್​ ಲಸಿಕೆ
TV9 Web
| Edited By: |

Updated on:Apr 06, 2022 | 9:09 PM

Share

ದೆಹಲಿ: ಬಹುನಿರೀಕ್ಷಿತ ಕೊರೊನಾ ಲಸಿಕೆ, ಪುಣೆಯ ಸೆರಮ್ ಇನ್ಸ್‌ಟಿಟ್ಯೂಟ್‌ನಿಂದ ರವಾನೆಯಾಗಿದೆ. ಪುಣೆಯಿಂದ 1.1 ಕೋಟಿ ಡೋಸ್​ಗಳಷ್ಟು ಕೊವಿಶೀಲ್ಡ್ ಲಸಿಕೆ ವಿವಿಧ ರಾಜ್ಯಗಳಿಗೆ ರವಾನೆಯಾಗಿದೆ. ಲಸಿಕೆಯು ರಾತ್ರಿ ವೇಳೆಗೆ ಬೆಂಗಳೂರಿಗೆ ತಲುಪುವ ಸಾಧ್ಯತೆ ಅಂದಾಜಿಸಲಾಗಿದೆ.

ಇಂದು ಸಂಜೆಯಷ್ಟೇ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ್ದರು. ಲಸಿಕೆ ಹಂಚಿಕೆ ಹಾಗೂ ವಿತರಣೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದ್ದರು. ಸೂಕ್ತ ಕ್ರಮಗಳನ್ನು ಕೈಗೊಂಡು, ವ್ಯವಸ್ಥಿತವಾಗಿ ಲಸಿಕೆ ವಿತರಣೆಯಾಗುವಂತೆ ನೋಡಿಕೊಳ್ಳಲು ಕ್ರಮಗಳನ್ನು ವಿವರಿಸಿದ್ದರು.

ಕೊವ್ಯಾಕ್ಸಿನ್ ಹಾಗೂ ಕೊವಿಶೀಲ್ಡ್ ಲಸಿಕೆಗಳು ಭಾರತದ್ದೇ ಆಗಿವೆ. ಲಸಿಕೆಗಾಗಿ ವಿದೇಶದ ಮೇಲೆ ಭಾರತ ಅವಲಂಬಿತವಾಗಿದ್ದರೆ ಕಷ್ಟವಾಗುತ್ತಿತ್ತು. ಭಾರತ ಸ್ವಾವಲಂಬಿಯಾಗಿ ಲಸಿಕೆ ತಯಾರಿಸಿದೆ ಎಂದು ಭಾರತ ಲಸಿಕೆ ತಯಾರಿಸಿರುವ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದರು. ಕೊರೊನಾ ಲಸಿಕೆಯನ್ನು ಮೊದಲು 3 ಕೋಟಿ ಕೊರೊನಾ ವಾರಿಯರ್ಸ್​ಗೆ ನೀಡಲಾಗುವುದು. ಅಷ್ಟೂ ಮಂದಿಗೆ ಉಚಿತವಾಗಿ ಲಸಿಕೆ ವಿತರಿಸಲಾಗುವುದು ಎಂದು ಹೇಳಿದ್ದರು.

ಬಳಿಕ, ರಾಜ್ಯ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ರಾಜ್ಯದಲ್ಲಿ ಲಸಿಕೆ ವಿತರಣೆಯ ಕ್ರಮಗಳ ಬಗ್ಗೆ ವಿವರಣೆ ನೀಡಿದ್ದರು. ರಾಜ್ಯದಲ್ಲಿ 16 ಲಕ್ಷಕ್ಕೂ ಅಧಿಕ ಮೊದಲ ಸಾಲಿನ ಕೊವಿಡ್ ಕಾರ್ಯಕರ್ತರಿಗೆ ಲಸಿಕೆ ಲಭ್ಯವಾಗುವ ಬಗ್ಗೆ ಮಾಹಿತಿ ನೀಡಿದ್ದರು. ಜನವರಿ 16ರ ಬಳಿಕ ಲಸಿಕೆ ವಿತರಣೆ ನಡೆಯುವುದನ್ನು ಖಚಿತಪಡಿಸಿದ್ದರು.

ಲಸಿಕೆ ಸಂಗ್ರಹಣೆಗೆ ರಾಜ್ಯದಲ್ಲಿ ತಯಾರಿ ನಡೆಯುತ್ತಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಬೆಳಗಾವಿಯಲ್ಲಿ ಕೊರೊನಾ ಲಸಿಕೆ ಏರ್​ಲಿಫ್ಟ್​ಗೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಲಸಿಕೆ ಸಂಗ್ರಹಿಸಿಡಲು ವ್ಯವಸ್ಥೆ ಮಾಡಲಾಗಿದೆ. ಜೊತೆಗೆ, ಲಸಿಕೆ ಹಂಚಿಕೆ ಹಾಗೂ ವಿತರಣೆಗೂ ಸೂಕ್ತ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ಹೇಳಲಾಗುತ್ತಿದೆ.

ಇದೀಗ ಎರಡು ಸುತ್ತಿನ ಲಸಿಕೆ ತಾಲೀಮು (ಡ್ರೈ ರನ್) ಬಳಿಕ, ಕೊರೊನಾ ಲಸಿಕೆ ಪುಣೆಯ ಸೆರಮ್ ಸಂಸ್ಥೆಯಿಂದ ದೇಶದ ವಿವಿಧ ರಾಜ್ಯಗಳಿಗೆ ರವಾನೆಯಾಗಿದೆ. ದೇಶದ ಲಸಿಕೆ ವಿತರಣಾ ಕಾರ್ಯಕ್ರಮ ಶೀಘ್ರದಲ್ಲೇ ಆರಂಭಗೊಳ್ಳಲಿದೆ.

ರಾಜ್ಯದಲ್ಲಿ ಕೊರೊನಾ ಲಸಿಕೆ ವಿತರಣೆ: ಪ್ರಧಾನಿ ಸಭೆಯ ಬಳಿಕ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ

Published On - 11:27 pm, Mon, 11 January 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ