AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ತಯಾರಿಕೆ ಕಂಪನಿಗಳಿಗೆ ಕಾನೂನು ರಕ್ಷಣೆ ನೀಡಿ: ಸೀರಮ್​ ಸಂಸ್ಥೆ ಸಿಇಓ ಮನವಿ

ಕೊರೊನಾ ಲಸಿಕೆ ತಯಾರಿಸುತ್ತಿರುವ ಸಂಸ್ಥೆಗಳಿಗೆ ನೈತಿಕ ಬೆಂಬಲ ಮತ್ತು ಮಾನಸಿಕ ಸ್ಥೈರ್ಯ ಅತ್ಯಗತ್ಯ. ಹೀಗಾಗಿ ಕೊವಿಡ್​ ಸೋಂಕಿತರಿಗೆ ಲಸಿಕೆಗಳಿಂದ ಯಾವುದೇ ಅಡ್ಡಪರಿಣಾಮಗಳಾದರೂ ಅದಕ್ಕೆ ಕಾನೂನು ರಕ್ಷಣೆ ನೀಡಬೇಕು

ಕೊರೊನಾ ಲಸಿಕೆ ತಯಾರಿಕೆ ಕಂಪನಿಗಳಿಗೆ ಕಾನೂನು ರಕ್ಷಣೆ ನೀಡಿ: ಸೀರಮ್​ ಸಂಸ್ಥೆ ಸಿಇಓ ಮನವಿ
SII CEO ಅದರ್​ ಪೂನಾವಾಲ (ಸಂಗ್ರಹ ಚಿತ್ರ)
Skanda
| Edited By: ಸಾಧು ಶ್ರೀನಾಥ್​|

Updated on: Dec 21, 2020 | 11:40 AM

Share

ದೆಹಲಿ: ಕೊರೊನಾ ಲಸಿಕೆ ಕುರಿತು ಎಲ್ಲಾ ದೇಶಗಳು ಒಂದಿಲ್ಲೊಂದು ಚಿಂತೆಯಲ್ಲಿವೆ. ಕೆಲವು ದೇಶಗಳಿಗೆ ಕೊರೊನಾ ಲಸಿಕೆ ಬಳಸಲು ಅನುಮತಿಯೇ ಸಿಕ್ಕಿಲ್ಲ ಎಂಬ ಚಿಂತೆಯಾದರೆ, ಅನುಮತಿ ಪಡೆದ ದೇಶಗಳಿಗೆ ಲಸಿಕೆಯ ಅಡ್ಡಪರಿಣಾಮಗಳನ್ನು ನಿಯಂತ್ರಿಸುವುದು ಹೇಗೆ ಎಂಬ ಚಿಂತೆ. ಈ ನಡುವೆ ಪುಣೆಯಲ್ಲಿರುವ ಭಾರತೀಯ ಔಷಧ ತಯಾರಿಕಾ ಸಂಸ್ಥೆ ಸೀರಮ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾದ ಸಿಇಓ ಅದರ್​ ಪೂನಾವಾಲ ಔಷಧ ತಯಾರಕರಿಗೆ ಕಾನೂನು ಕಟ್ಟಳೆಗಳಿಂದ ವಿನಾಯಿತಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.

ಕೊರೊನಾ ಲಸಿಕೆ ತಯಾರಿಸುತ್ತಿರುವ ಸಂಸ್ಥೆಗಳಿಗೆ ನೈತಿಕ ಬೆಂಬಲ ಮತ್ತು ಮಾನಸಿಕ ಸ್ಥೈರ್ಯ ಅತ್ಯಗತ್ಯ. ಹೀಗಾಗಿ ಕೊವಿಡ್​ ಸೋಂಕಿತರಿಗೆ ಲಸಿಕೆಗಳಿಂದ ಯಾವುದೇ ಅಡ್ಡಪರಿಣಾಮಗಳಾದರೂ ಅದಕ್ಕೆ ಕಾನೂನು ರಕ್ಷಣೆ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಹಿಂದೆ ಕೊರೊನಾ ಲಸಿಕೆ ಪ್ರಯೋಗ ಸಂದರ್ಭದಲ್ಲಿ ಪ್ರಯೋಗಕ್ಕೆ ಒಳಪಟ್ಟವರೊಬ್ಬರು ಅಡ್ಡಪರಿಣಾಮದ ಆರೋಪ ಹೊರಿಸಿ ಸೀರಮ್​ ಸಂಸ್ಥೆಯಿಂದ 5 ಕೋಟಿ ಪರಿಹಾರ ಕೇಳಿದ್ದರು. ಇದೇ ಪ್ರಕರಣವನ್ನು ಉದಾಹರಣೆಯಾಗಿ ನೀಡಿದ ಪೂನಾವಾಲ ಈಗ ಕಾನೂನು ಕಟ್ಟಳೆಗಳಿಂದ ರಕ್ಷಣೆ ನೀಡಲು ಮನವಿ ಮಾಡಿದ್ದಾರೆ.

ಈ ಕುರಿತು ಸೀರಮ್​ ಸಂಸ್ಥೆ ಶೀಘ್ರದಲ್ಲೇ ಕೇಂದ್ರ ಸರ್ಕಾರದ ಮುಂದೆ ಲಿಖಿತ ರೂಪದ ಬೇಡಿಕೆ ಸಲ್ಲಿಸಲಿದೆ. ವಿಶ್ವದ ಹಲವು ರಾಷ್ಟ್ರಗಳು ಕೊರೊನಾ ಲಸಿಕೆ ತಯಾರಿಕರಿಗೆ ಕಾನೂನು ರಕ್ಷಣೆ ನೀಡಿವೆ. ಇದನ್ನೇ ಮಾದರಿಯಾಗಿರಿಸಿಕೊಂಡು ಭಾರತದಲ್ಲಿಯೂ ನಿಯಮ ಸಡಿಲಿಸಲು ಕೇಂದ್ರ ಸರ್ಕಾರ ಯೋಚಿಸಬೇಕು ಎಂದು ತಿಳಿಸಿದ್ದಾರೆ.

ಕೊರೊನಾ ಲಸಿಕೆ ತಯಾರಿಯಲ್ಲಿ ತೊಡಗಿರುವ ಅದಾರ್ ಪೂನಾವಾಲಾ.. ಏಷಿಯನ್ ಆಫ್ ದಿ ಇಯರ್

Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ