Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ತಯಾರಿಕೆ ಕಂಪನಿಗಳಿಗೆ ಕಾನೂನು ರಕ್ಷಣೆ ನೀಡಿ: ಸೀರಮ್​ ಸಂಸ್ಥೆ ಸಿಇಓ ಮನವಿ

ಕೊರೊನಾ ಲಸಿಕೆ ತಯಾರಿಸುತ್ತಿರುವ ಸಂಸ್ಥೆಗಳಿಗೆ ನೈತಿಕ ಬೆಂಬಲ ಮತ್ತು ಮಾನಸಿಕ ಸ್ಥೈರ್ಯ ಅತ್ಯಗತ್ಯ. ಹೀಗಾಗಿ ಕೊವಿಡ್​ ಸೋಂಕಿತರಿಗೆ ಲಸಿಕೆಗಳಿಂದ ಯಾವುದೇ ಅಡ್ಡಪರಿಣಾಮಗಳಾದರೂ ಅದಕ್ಕೆ ಕಾನೂನು ರಕ್ಷಣೆ ನೀಡಬೇಕು

ಕೊರೊನಾ ಲಸಿಕೆ ತಯಾರಿಕೆ ಕಂಪನಿಗಳಿಗೆ ಕಾನೂನು ರಕ್ಷಣೆ ನೀಡಿ: ಸೀರಮ್​ ಸಂಸ್ಥೆ ಸಿಇಓ ಮನವಿ
SII CEO ಅದರ್​ ಪೂನಾವಾಲ (ಸಂಗ್ರಹ ಚಿತ್ರ)
Follow us
Skanda
| Updated By: ಸಾಧು ಶ್ರೀನಾಥ್​

Updated on: Dec 21, 2020 | 11:40 AM

ದೆಹಲಿ: ಕೊರೊನಾ ಲಸಿಕೆ ಕುರಿತು ಎಲ್ಲಾ ದೇಶಗಳು ಒಂದಿಲ್ಲೊಂದು ಚಿಂತೆಯಲ್ಲಿವೆ. ಕೆಲವು ದೇಶಗಳಿಗೆ ಕೊರೊನಾ ಲಸಿಕೆ ಬಳಸಲು ಅನುಮತಿಯೇ ಸಿಕ್ಕಿಲ್ಲ ಎಂಬ ಚಿಂತೆಯಾದರೆ, ಅನುಮತಿ ಪಡೆದ ದೇಶಗಳಿಗೆ ಲಸಿಕೆಯ ಅಡ್ಡಪರಿಣಾಮಗಳನ್ನು ನಿಯಂತ್ರಿಸುವುದು ಹೇಗೆ ಎಂಬ ಚಿಂತೆ. ಈ ನಡುವೆ ಪುಣೆಯಲ್ಲಿರುವ ಭಾರತೀಯ ಔಷಧ ತಯಾರಿಕಾ ಸಂಸ್ಥೆ ಸೀರಮ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾದ ಸಿಇಓ ಅದರ್​ ಪೂನಾವಾಲ ಔಷಧ ತಯಾರಕರಿಗೆ ಕಾನೂನು ಕಟ್ಟಳೆಗಳಿಂದ ವಿನಾಯಿತಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.

ಕೊರೊನಾ ಲಸಿಕೆ ತಯಾರಿಸುತ್ತಿರುವ ಸಂಸ್ಥೆಗಳಿಗೆ ನೈತಿಕ ಬೆಂಬಲ ಮತ್ತು ಮಾನಸಿಕ ಸ್ಥೈರ್ಯ ಅತ್ಯಗತ್ಯ. ಹೀಗಾಗಿ ಕೊವಿಡ್​ ಸೋಂಕಿತರಿಗೆ ಲಸಿಕೆಗಳಿಂದ ಯಾವುದೇ ಅಡ್ಡಪರಿಣಾಮಗಳಾದರೂ ಅದಕ್ಕೆ ಕಾನೂನು ರಕ್ಷಣೆ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಹಿಂದೆ ಕೊರೊನಾ ಲಸಿಕೆ ಪ್ರಯೋಗ ಸಂದರ್ಭದಲ್ಲಿ ಪ್ರಯೋಗಕ್ಕೆ ಒಳಪಟ್ಟವರೊಬ್ಬರು ಅಡ್ಡಪರಿಣಾಮದ ಆರೋಪ ಹೊರಿಸಿ ಸೀರಮ್​ ಸಂಸ್ಥೆಯಿಂದ 5 ಕೋಟಿ ಪರಿಹಾರ ಕೇಳಿದ್ದರು. ಇದೇ ಪ್ರಕರಣವನ್ನು ಉದಾಹರಣೆಯಾಗಿ ನೀಡಿದ ಪೂನಾವಾಲ ಈಗ ಕಾನೂನು ಕಟ್ಟಳೆಗಳಿಂದ ರಕ್ಷಣೆ ನೀಡಲು ಮನವಿ ಮಾಡಿದ್ದಾರೆ.

ಈ ಕುರಿತು ಸೀರಮ್​ ಸಂಸ್ಥೆ ಶೀಘ್ರದಲ್ಲೇ ಕೇಂದ್ರ ಸರ್ಕಾರದ ಮುಂದೆ ಲಿಖಿತ ರೂಪದ ಬೇಡಿಕೆ ಸಲ್ಲಿಸಲಿದೆ. ವಿಶ್ವದ ಹಲವು ರಾಷ್ಟ್ರಗಳು ಕೊರೊನಾ ಲಸಿಕೆ ತಯಾರಿಕರಿಗೆ ಕಾನೂನು ರಕ್ಷಣೆ ನೀಡಿವೆ. ಇದನ್ನೇ ಮಾದರಿಯಾಗಿರಿಸಿಕೊಂಡು ಭಾರತದಲ್ಲಿಯೂ ನಿಯಮ ಸಡಿಲಿಸಲು ಕೇಂದ್ರ ಸರ್ಕಾರ ಯೋಚಿಸಬೇಕು ಎಂದು ತಿಳಿಸಿದ್ದಾರೆ.

ಕೊರೊನಾ ಲಸಿಕೆ ತಯಾರಿಯಲ್ಲಿ ತೊಡಗಿರುವ ಅದಾರ್ ಪೂನಾವಾಲಾ.. ಏಷಿಯನ್ ಆಫ್ ದಿ ಇಯರ್

ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ