AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ತಯಾರಿಕೆ ಕಂಪನಿಗಳಿಗೆ ಕಾನೂನು ರಕ್ಷಣೆ ನೀಡಿ: ಸೀರಮ್​ ಸಂಸ್ಥೆ ಸಿಇಓ ಮನವಿ

ಕೊರೊನಾ ಲಸಿಕೆ ತಯಾರಿಸುತ್ತಿರುವ ಸಂಸ್ಥೆಗಳಿಗೆ ನೈತಿಕ ಬೆಂಬಲ ಮತ್ತು ಮಾನಸಿಕ ಸ್ಥೈರ್ಯ ಅತ್ಯಗತ್ಯ. ಹೀಗಾಗಿ ಕೊವಿಡ್​ ಸೋಂಕಿತರಿಗೆ ಲಸಿಕೆಗಳಿಂದ ಯಾವುದೇ ಅಡ್ಡಪರಿಣಾಮಗಳಾದರೂ ಅದಕ್ಕೆ ಕಾನೂನು ರಕ್ಷಣೆ ನೀಡಬೇಕು

ಕೊರೊನಾ ಲಸಿಕೆ ತಯಾರಿಕೆ ಕಂಪನಿಗಳಿಗೆ ಕಾನೂನು ರಕ್ಷಣೆ ನೀಡಿ: ಸೀರಮ್​ ಸಂಸ್ಥೆ ಸಿಇಓ ಮನವಿ
SII CEO ಅದರ್​ ಪೂನಾವಾಲ (ಸಂಗ್ರಹ ಚಿತ್ರ)
Skanda
| Edited By: |

Updated on: Dec 21, 2020 | 11:40 AM

Share

ದೆಹಲಿ: ಕೊರೊನಾ ಲಸಿಕೆ ಕುರಿತು ಎಲ್ಲಾ ದೇಶಗಳು ಒಂದಿಲ್ಲೊಂದು ಚಿಂತೆಯಲ್ಲಿವೆ. ಕೆಲವು ದೇಶಗಳಿಗೆ ಕೊರೊನಾ ಲಸಿಕೆ ಬಳಸಲು ಅನುಮತಿಯೇ ಸಿಕ್ಕಿಲ್ಲ ಎಂಬ ಚಿಂತೆಯಾದರೆ, ಅನುಮತಿ ಪಡೆದ ದೇಶಗಳಿಗೆ ಲಸಿಕೆಯ ಅಡ್ಡಪರಿಣಾಮಗಳನ್ನು ನಿಯಂತ್ರಿಸುವುದು ಹೇಗೆ ಎಂಬ ಚಿಂತೆ. ಈ ನಡುವೆ ಪುಣೆಯಲ್ಲಿರುವ ಭಾರತೀಯ ಔಷಧ ತಯಾರಿಕಾ ಸಂಸ್ಥೆ ಸೀರಮ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾದ ಸಿಇಓ ಅದರ್​ ಪೂನಾವಾಲ ಔಷಧ ತಯಾರಕರಿಗೆ ಕಾನೂನು ಕಟ್ಟಳೆಗಳಿಂದ ವಿನಾಯಿತಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.

ಕೊರೊನಾ ಲಸಿಕೆ ತಯಾರಿಸುತ್ತಿರುವ ಸಂಸ್ಥೆಗಳಿಗೆ ನೈತಿಕ ಬೆಂಬಲ ಮತ್ತು ಮಾನಸಿಕ ಸ್ಥೈರ್ಯ ಅತ್ಯಗತ್ಯ. ಹೀಗಾಗಿ ಕೊವಿಡ್​ ಸೋಂಕಿತರಿಗೆ ಲಸಿಕೆಗಳಿಂದ ಯಾವುದೇ ಅಡ್ಡಪರಿಣಾಮಗಳಾದರೂ ಅದಕ್ಕೆ ಕಾನೂನು ರಕ್ಷಣೆ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಹಿಂದೆ ಕೊರೊನಾ ಲಸಿಕೆ ಪ್ರಯೋಗ ಸಂದರ್ಭದಲ್ಲಿ ಪ್ರಯೋಗಕ್ಕೆ ಒಳಪಟ್ಟವರೊಬ್ಬರು ಅಡ್ಡಪರಿಣಾಮದ ಆರೋಪ ಹೊರಿಸಿ ಸೀರಮ್​ ಸಂಸ್ಥೆಯಿಂದ 5 ಕೋಟಿ ಪರಿಹಾರ ಕೇಳಿದ್ದರು. ಇದೇ ಪ್ರಕರಣವನ್ನು ಉದಾಹರಣೆಯಾಗಿ ನೀಡಿದ ಪೂನಾವಾಲ ಈಗ ಕಾನೂನು ಕಟ್ಟಳೆಗಳಿಂದ ರಕ್ಷಣೆ ನೀಡಲು ಮನವಿ ಮಾಡಿದ್ದಾರೆ.

ಈ ಕುರಿತು ಸೀರಮ್​ ಸಂಸ್ಥೆ ಶೀಘ್ರದಲ್ಲೇ ಕೇಂದ್ರ ಸರ್ಕಾರದ ಮುಂದೆ ಲಿಖಿತ ರೂಪದ ಬೇಡಿಕೆ ಸಲ್ಲಿಸಲಿದೆ. ವಿಶ್ವದ ಹಲವು ರಾಷ್ಟ್ರಗಳು ಕೊರೊನಾ ಲಸಿಕೆ ತಯಾರಿಕರಿಗೆ ಕಾನೂನು ರಕ್ಷಣೆ ನೀಡಿವೆ. ಇದನ್ನೇ ಮಾದರಿಯಾಗಿರಿಸಿಕೊಂಡು ಭಾರತದಲ್ಲಿಯೂ ನಿಯಮ ಸಡಿಲಿಸಲು ಕೇಂದ್ರ ಸರ್ಕಾರ ಯೋಚಿಸಬೇಕು ಎಂದು ತಿಳಿಸಿದ್ದಾರೆ.

ಕೊರೊನಾ ಲಸಿಕೆ ತಯಾರಿಯಲ್ಲಿ ತೊಡಗಿರುವ ಅದಾರ್ ಪೂನಾವಾಲಾ.. ಏಷಿಯನ್ ಆಫ್ ದಿ ಇಯರ್

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ