AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ತಯಾರಿಕೆ ಕಂಪನಿಗಳಿಗೆ ಕಾನೂನು ರಕ್ಷಣೆ ನೀಡಿ: ಸೀರಮ್​ ಸಂಸ್ಥೆ ಸಿಇಓ ಮನವಿ

ಕೊರೊನಾ ಲಸಿಕೆ ತಯಾರಿಸುತ್ತಿರುವ ಸಂಸ್ಥೆಗಳಿಗೆ ನೈತಿಕ ಬೆಂಬಲ ಮತ್ತು ಮಾನಸಿಕ ಸ್ಥೈರ್ಯ ಅತ್ಯಗತ್ಯ. ಹೀಗಾಗಿ ಕೊವಿಡ್​ ಸೋಂಕಿತರಿಗೆ ಲಸಿಕೆಗಳಿಂದ ಯಾವುದೇ ಅಡ್ಡಪರಿಣಾಮಗಳಾದರೂ ಅದಕ್ಕೆ ಕಾನೂನು ರಕ್ಷಣೆ ನೀಡಬೇಕು

ಕೊರೊನಾ ಲಸಿಕೆ ತಯಾರಿಕೆ ಕಂಪನಿಗಳಿಗೆ ಕಾನೂನು ರಕ್ಷಣೆ ನೀಡಿ: ಸೀರಮ್​ ಸಂಸ್ಥೆ ಸಿಇಓ ಮನವಿ
SII CEO ಅದರ್​ ಪೂನಾವಾಲ (ಸಂಗ್ರಹ ಚಿತ್ರ)
Skanda
| Edited By: |

Updated on: Dec 21, 2020 | 11:40 AM

Share

ದೆಹಲಿ: ಕೊರೊನಾ ಲಸಿಕೆ ಕುರಿತು ಎಲ್ಲಾ ದೇಶಗಳು ಒಂದಿಲ್ಲೊಂದು ಚಿಂತೆಯಲ್ಲಿವೆ. ಕೆಲವು ದೇಶಗಳಿಗೆ ಕೊರೊನಾ ಲಸಿಕೆ ಬಳಸಲು ಅನುಮತಿಯೇ ಸಿಕ್ಕಿಲ್ಲ ಎಂಬ ಚಿಂತೆಯಾದರೆ, ಅನುಮತಿ ಪಡೆದ ದೇಶಗಳಿಗೆ ಲಸಿಕೆಯ ಅಡ್ಡಪರಿಣಾಮಗಳನ್ನು ನಿಯಂತ್ರಿಸುವುದು ಹೇಗೆ ಎಂಬ ಚಿಂತೆ. ಈ ನಡುವೆ ಪುಣೆಯಲ್ಲಿರುವ ಭಾರತೀಯ ಔಷಧ ತಯಾರಿಕಾ ಸಂಸ್ಥೆ ಸೀರಮ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾದ ಸಿಇಓ ಅದರ್​ ಪೂನಾವಾಲ ಔಷಧ ತಯಾರಕರಿಗೆ ಕಾನೂನು ಕಟ್ಟಳೆಗಳಿಂದ ವಿನಾಯಿತಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.

ಕೊರೊನಾ ಲಸಿಕೆ ತಯಾರಿಸುತ್ತಿರುವ ಸಂಸ್ಥೆಗಳಿಗೆ ನೈತಿಕ ಬೆಂಬಲ ಮತ್ತು ಮಾನಸಿಕ ಸ್ಥೈರ್ಯ ಅತ್ಯಗತ್ಯ. ಹೀಗಾಗಿ ಕೊವಿಡ್​ ಸೋಂಕಿತರಿಗೆ ಲಸಿಕೆಗಳಿಂದ ಯಾವುದೇ ಅಡ್ಡಪರಿಣಾಮಗಳಾದರೂ ಅದಕ್ಕೆ ಕಾನೂನು ರಕ್ಷಣೆ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಹಿಂದೆ ಕೊರೊನಾ ಲಸಿಕೆ ಪ್ರಯೋಗ ಸಂದರ್ಭದಲ್ಲಿ ಪ್ರಯೋಗಕ್ಕೆ ಒಳಪಟ್ಟವರೊಬ್ಬರು ಅಡ್ಡಪರಿಣಾಮದ ಆರೋಪ ಹೊರಿಸಿ ಸೀರಮ್​ ಸಂಸ್ಥೆಯಿಂದ 5 ಕೋಟಿ ಪರಿಹಾರ ಕೇಳಿದ್ದರು. ಇದೇ ಪ್ರಕರಣವನ್ನು ಉದಾಹರಣೆಯಾಗಿ ನೀಡಿದ ಪೂನಾವಾಲ ಈಗ ಕಾನೂನು ಕಟ್ಟಳೆಗಳಿಂದ ರಕ್ಷಣೆ ನೀಡಲು ಮನವಿ ಮಾಡಿದ್ದಾರೆ.

ಈ ಕುರಿತು ಸೀರಮ್​ ಸಂಸ್ಥೆ ಶೀಘ್ರದಲ್ಲೇ ಕೇಂದ್ರ ಸರ್ಕಾರದ ಮುಂದೆ ಲಿಖಿತ ರೂಪದ ಬೇಡಿಕೆ ಸಲ್ಲಿಸಲಿದೆ. ವಿಶ್ವದ ಹಲವು ರಾಷ್ಟ್ರಗಳು ಕೊರೊನಾ ಲಸಿಕೆ ತಯಾರಿಕರಿಗೆ ಕಾನೂನು ರಕ್ಷಣೆ ನೀಡಿವೆ. ಇದನ್ನೇ ಮಾದರಿಯಾಗಿರಿಸಿಕೊಂಡು ಭಾರತದಲ್ಲಿಯೂ ನಿಯಮ ಸಡಿಲಿಸಲು ಕೇಂದ್ರ ಸರ್ಕಾರ ಯೋಚಿಸಬೇಕು ಎಂದು ತಿಳಿಸಿದ್ದಾರೆ.

ಕೊರೊನಾ ಲಸಿಕೆ ತಯಾರಿಯಲ್ಲಿ ತೊಡಗಿರುವ ಅದಾರ್ ಪೂನಾವಾಲಾ.. ಏಷಿಯನ್ ಆಫ್ ದಿ ಇಯರ್

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?