AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ ಅವರನ್ನು ಭೇಟಿ ಮಾಡಿದ ಅದಾರ್ ಪೂನಾವಾಲಾ; ಅಕ್ಟೋಬರ್​​ನಲ್ಲಿ ಕೊವೊವಾಕ್ಸ್ ಲಸಿಕೆ ಪ್ರಾರಂಭ ಸಾಧ್ಯತೆ

Adar Poonawalla: ಪೂನಾವಾಲಾ ಅವರು ಶುಕ್ರವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಸತ್ತಿನಲ್ಲಿ ಭೇಟಿಯಾದರು ಮತ್ತು ಇಬ್ಬರ ನಡುವಿನ ಸಭೆ 30 ನಿಮಿಷಗಳ ಕಾಲ ನಡೆಯಿತು.

ಅಮಿತ್ ಶಾ ಅವರನ್ನು ಭೇಟಿ ಮಾಡಿದ ಅದಾರ್ ಪೂನಾವಾಲಾ; ಅಕ್ಟೋಬರ್​​ನಲ್ಲಿ ಕೊವೊವಾಕ್ಸ್ ಲಸಿಕೆ ಪ್ರಾರಂಭ ಸಾಧ್ಯತೆ
ಅಮಿತ್ ಶಾ- ಅದಾರ್ ಪೂನಾವಾಲಾ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Aug 06, 2021 | 11:54 PM

Share

ದೆಹಲಿ: ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಅದಾರ್ ಪೂನಾವಾಲಾ ಅವರು ಶುಕ್ರವಾರ ತಮ್ಮ ಕಂಪನಿಯು ಭಾರತದಲ್ಲಿ ತಯಾರಿಸುತ್ತಿರುವ ಇನ್ನೊಂದು ಕೊವಿಡ್-19 ಲಸಿಕೆಯನ್ನು ಕೊವೊವಾಕ್ಸ್ 2022 ರ ಮೊದಲ ತ್ರೈಮಾಸಿಕದ ವೇಳೆಗೆ ವಯಸ್ಕರಿಗೆ ಮತ್ತು ಮಕ್ಕಳಿಗಾಗಿ ಲಭ್ಯವಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. ಸೆರಮ್ ಇನ್‌ಸ್ಟಿಟ್ಯೂಟ್‌ಗೆ ಒದಗಿಸಿದ ಎಲ್ಲಾ ಬೆಂಬಲಕ್ಕಾಗಿ ಅವರು ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದರು. ಬೇಡಿಕೆಯನ್ನು ಪೂರೈಸಲು ಕಂಪನಿಯು ತನ್ನ ಕೊವಿಶೀಲ್ಡ್ ಉತ್ಪಾದನಾ ಸಾಮರ್ಥ್ಯವನ್ನು ವಿಸ್ತರಿಸಲು ಯಾವಾಗಲೂ ಪ್ರಯತ್ನಿಸುತ್ತಿದೆ ಎಂದು ಹೇಳಿದರು.

ಪೂನಾವಾಲಾ ಅವರು ಶುಕ್ರವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಸತ್ತಿನಲ್ಲಿ ಭೇಟಿಯಾದರು ಮತ್ತು ಇಬ್ಬರ ನಡುವಿನ ಸಭೆ 30 ನಿಮಿಷಗಳ ಕಾಲ ನಡೆಯಿತು. “ಸರ್ಕಾರವು ನಮಗೆ ಸಹಾಯ ಮಾಡುತ್ತಿದೆ ಮತ್ತು ನಾವು ಯಾವುದೇ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿಲ್ಲ. ಎಲ್ಲಾ ಸಹಕಾರ ಮತ್ತು ಬೆಂಬಲಕ್ಕಾಗಿ ನಾವು ಪ್ರಧಾನಿ ನರೇಂದ್ರ ಮೋದಿಗೆ ಕೃತಜ್ಞರಾಗಿರುತ್ತೇವೆ” ಎಂದು ಪೂನಾವಾಲಾ ತಮ್ಮ ಭೇಟಿಯ ನಂತರ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು.

ಮಕ್ಕಳಿಗಾಗಿರುವ ಲಸಿಕೆಗಳ ಬಗ್ಗೆ ಕೇಳಿದಾಗ ಮಕ್ಕಳಿಗೆ ಕೊವೊವಾಕ್ಸ್ ಲಸಿಕೆಯನ್ನು ಮುಂದಿನ ವರ್ಷದ ಮೊದಲ ತ್ರೈಮಾಸಿಕದಲ್ಲಿ ಹೆಚ್ಚಾಗಿ ಜನವರಿ-ಫೆಬ್ರವರಿಯಲ್ಲಿ ಆರಂಭಿಸಲಾಗುವುದು ಎಂದಿದ್ದಾರೆ ಪೂನಾವಾಲಾ.

ಡಿಸಿಜಿಐ ಅನುಮೋದನೆಗಳನ್ನು ಅವಲಂಬಿಸಿ ವಯಸ್ಕರಿಗೆ ಕೊವೊವಾಕ್ಸ್ ಅನ್ನು ಅಕ್ಟೋಬರ್‌ನಲ್ಲಿ ಪ್ರಾರಂಭಿಸುವ ನಿರೀಕ್ಷೆ ಇದೆ ಎಂದು ಅವರು ಹೇಳಿದ್ದಾರೆ. ಇದು ಎರಡು ಡೋಸ್ ಲಸಿಕೆಯಾಗಿದ್ದು, ಪ್ರಾರಂಭದ ಸಮಯದಲ್ಲಿ ಬೆಲೆಯನ್ನು ನಿರ್ಧರಿಸಲಾಗುವುದು ಎಂದು ಅವರು ಹೇಳಿದರು.

ಇದನ್ನೂ ಓದಿ: ಕೊವಿಡ್ -19 ಲಸಿಕೆಗಳಿಗೆ ಡೆಲ್ಟಾ ಪ್ರಸರಣವನ್ನು ನಿಲ್ಲಿಸಲು ಸಾಧ್ಯವಾಗದೇ ಇರಬಹುದು: ಎಚ್ಚರಿಕೆ ನೀಡಿದ ಬ್ರಿಟನ್

ಇದನ್ನೂ ಓದಿ: Corona Vaccine Shortage: ಕೊವಿಡ್ ಲಸಿಕೆ ಸಿಗದೆ ರೊಚ್ಚಿಗೆದ್ದ ಸಾರ್ವಜನಿಕರು, ಹಾಸನ ಡಿಸಿ ಮನೆಗೆ ಮುತ್ತಿಗೆ

(Serum Institute of India CEO Adar Poonawalla met Home Minister Amit Shah Says Covovax Vaccine Will be launched in October )

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ