AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಶೀಲ್ಡ್​ ಲಸಿಕೆಗೆ ದರ ನಿಗದಿ.. ಕೇಂದ್ರ ಸರ್ಕಾರದ ಜೊತೆ ಒಪ್ಪಂದಕ್ಕೆ ಸೆರಮ್ ಸಿದ್ಧ.. ಬಳಕೆಯಾಗುತ್ತಾ ಪಿಎಂ ಕೇರ್ಸ್​ ನಿಧಿ?

ಸೆರಮ್​ ಸಂಸ್ಥೆ 2 ಡೋಸ್ ಕೊವಿಶೀಲ್ಡ್ ಲಸಿಕೆಯನ್ನು ₹225ಕ್ಕೆ ನೀಡಲು ಸಿದ್ಧವಿದೆ. ಇತ್ತ ಪ್ರತಿಸ್ಪರ್ಧಿ ಸಂಸ್ಥೆ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಲಸಿಕೆಗೆ ₹350 ದರ ನಿಗದಿ ಪಡಿಸುವ ಸಾಧ್ಯತೆ ಇದೆ. ಲೆಕ್ಕಾಚಾರದ ಪ್ರಕಾರ ಕೊವ್ಯಾಕ್ಸಿನ್​ಗಿಂತ ಕಡಿಮೆ ದರದಲ್ಲಿ ಕೊವಿಶೀಲ್ಡ್ ಸಿಗಲಿದೆ.

ಕೊವಿಶೀಲ್ಡ್​ ಲಸಿಕೆಗೆ ದರ ನಿಗದಿ.. ಕೇಂದ್ರ ಸರ್ಕಾರದ ಜೊತೆ ಒಪ್ಪಂದಕ್ಕೆ ಸೆರಮ್ ಸಿದ್ಧ.. ಬಳಕೆಯಾಗುತ್ತಾ ಪಿಎಂ ಕೇರ್ಸ್​ ನಿಧಿ?
ಕೊವಿಶೀಲ್ಡ್​ ಲಸಿಕೆ
Skanda
| Edited By: |

Updated on: Jan 02, 2021 | 2:45 PM

Share

ದೆಹಲಿ: ಭಾರತೀಯ ಔಷಧ ನಿಯಂತ್ರಣಾ ಮಂಡಳಿ ಒಪ್ಪಿಗೆ ನೀಡಿದರೆ 10 ಕೋಟಿ ಕೊರೊನಾ ಲಸಿಕೆ ವಿತರಿಸಲು ಸಿದ್ಧ ಎಂದು ಸೆರಮ್​ ಇನ್​ಸ್ಟಿಟ್ಯೂಟ್​ ಆಫ್ ಇಂಡಿಯಾ (SII) ಸಂಸ್ಥೆ ಹೇಳಿದೆ. ಕೊವಿಶೀಲ್ಡ್ ಲಸಿಕೆಗೆ DCGI ಅಧಿಕೃತ ಒಪ್ಪಿಗೆ ಮಾತ್ರ ಬಾಕಿ ಇದೆ. ಒಪ್ಪಿಗೆ ಸಿಕ್ಕರೆ ಈ ತಿಂಗಳಿನಲ್ಲಿಯೇ ಲಸಿಕೆ ಪೂರೈಸಲಿದ್ದೇವೆ ಎಂದು ಸೆರಮ್​ ಸಂಸ್ಥೆ ಮಾಹಿತಿ ನೀಡಿದೆ.

ಜುಲೈ-ಆಗಸ್ಟ್​ ವೇಳೆಗೆ 30 ಕೋಟಿ ಜನರಿಗೆ ಲಸಿಕೆ ನೀಡುವ ಗುರಿ ಕೇಂದ್ರ ಸರ್ಕಾರದ ಮುಂದಿದೆ. ಅದರಲ್ಲಿ ಮೊದಲ 10 ಕೋಟಿ ಡೋಸ್​ ಲಸಿಕೆಯ ವೆಚ್ಚವನ್ನು ಪಿಎಂ ಕೇರ್ಸ್ ನಿಧಿಯಿಂದ ಭರಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭಿಸಿದೆ. ಸದ್ಯ ಕೇಂದ್ರ ಸರ್ಕಾರ ಇನ್ನೂ ಸೆರಮ್ ಸಂಸ್ಥೆಯ ಜೊತೆ ಲಸಿಕೆ ಖರೀದಿಸುವ ಒಪ್ಪಂದ ಮಾಡಿಕೊಂಡಿಲ್ಲ. ಆದರೆ, ಈ ಕುರಿತು ಪ್ರತಿಕ್ರಿಯಿಸಿರುವ SII ತಾನು ಒಪ್ಪಂದಕ್ಕೆ ಸಿದ್ಧ ಎಂದು ಹೇಳಿದೆ.

ಇದನ್ನೂ ಓದಿ: ಮೊದಲ 30 ಕೋಟಿ ಮಂದಿಗೆ ಲಸಿಕೆ: ಪ್ರತಿ ಭಾರತೀಯ 100 ರೂ ಖರ್ಚು ಮಾಡಬೇಕು.. ಲಸಿಕೆಗೆ ಬಳಕೆಯಾಗುತ್ತಾ PM Cares Fund? ಲೆಕ್ಕಾಚಾರ ಏನು?

ಇನ್ನೊಂದೆಡೆ ಕೊರೊನಾ ಲಸಿಕೆಗೆ ತಗುಲುವ ವೆಚ್ಚದ ಕುರಿತು ಕೆಲ ಮಾಹಿತಿ ಲಭ್ಯವಾಗಿದೆ. ಸೆರಮ್​ ಸಂಸ್ಥೆ 2 ಡೋಸ್ ಕೊವಿಶೀಲ್ಡ್ ಲಸಿಕೆಯನ್ನು ₹225ಕ್ಕೆ ನೀಡಲು ಸಿದ್ಧವಿದೆ. ಇತ್ತ ಪ್ರತಿಸ್ಪರ್ಧಿ ಸಂಸ್ಥೆ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಲಸಿಕೆಗೆ ₹350 ದರ ನಿಗದಿ ಪಡಿಸುವ ಸಾಧ್ಯತೆ ಇದೆ. ಲೆಕ್ಕಾಚಾರದ ಪ್ರಕಾರ ಕೊವ್ಯಾಕ್ಸಿನ್​ಗಿಂತ ಕಡಿಮೆ ದರದಲ್ಲಿ ಕೊವಿಶೀಲ್ಡ್ ಸಿಗಲಿದೆ.

ಇಂದು ನಡೆಯುತ್ತಿರೋದು ತಾಲೀಮು ಪ್ರಕ್ರಿಯೆ.. ಕೊರೊನಾ ಲಸಿಕೆ ವಿತರಣೆ ಅಲ್ಲ.. ಅಲ್ಲ.. ಅಲ್ಲ

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?