AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಲಿದೆ ಮತ್ತೊಂದು ಕೊರೊನಾ ಲಸಿಕೆ.. ಭಾರತದ ಸೆರಮ್​ ಸಂಸ್ಥೆಯಿಂದಲೇ ಉತ್ಪಾದನೆ: 200 ಕೋಟಿ ಡೋಸ್​ ಲಸಿಕೆ ಬಿಡುಗಡೆಗೆ ಸಿದ್ಧತೆ

ಸೆರಮ್​ ಸಂಸ್ಥೆ ನೋವಾವ್ಯಾಕ್ಸ್​ನೊಂದಿಗೆ 2020ರ ಸೆಪ್ಟೆಂಬರ್​ ತಿಂಗಳಿನಲ್ಲಿಯೇ ಒಪ್ಪಂದವನ್ನೂ ಮಾಡಿಕೊಂಡಿದ್ದು, ಕೊವಾವ್ಯಾಕ್ಸ್​ ಹೆಸರಲ್ಲಿ ಭಾರತದಲ್ಲಿ ಲಸಿಕೆ ಬಿಡುಗಡೆ ಮಾಡಲು ಯೋಚಿಸಿದೆ.

ಬರಲಿದೆ ಮತ್ತೊಂದು ಕೊರೊನಾ ಲಸಿಕೆ.. ಭಾರತದ ಸೆರಮ್​ ಸಂಸ್ಥೆಯಿಂದಲೇ ಉತ್ಪಾದನೆ: 200 ಕೋಟಿ ಡೋಸ್​ ಲಸಿಕೆ ಬಿಡುಗಡೆಗೆ ಸಿದ್ಧತೆ
ಅಮೆರಿಕಾದ ನೋವಾವ್ಯಾಕ್ಸ್​ ಭಾರತದಲ್ಲಿ ಕೊವಾವ್ಯಾಕ್ಸ್​
Skanda
| Edited By: ಸಾಧು ಶ್ರೀನಾಥ್​|

Updated on: Jan 30, 2021 | 5:07 PM

Share

ದೆಹಲಿ: ಭಾರತದಲ್ಲಿ ಸೆರಮ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾ ತಯಾರಿಸಿದ ಕೊವಿಶೀಲ್ಡ್​ ಮತ್ತು ಭಾರತ್​ ಬಯೋಟೆಕ್​ ಸಂಸ್ಥೆ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್​ ಲಸಿಕೆಗಳನ್ನು ಈಗಾಗಲೇ ಪ್ರಯೋಗಿಸಲಾಗುತ್ತಿದೆ. ಇದರ ಬೆನ್ನಲ್ಲೇ ಅಮೆರಿಕಾ ಮೂಲದ ಸಂಸ್ಥೆಯೊಂದರ ಕೊರೊನಾ ಲಸಿಕೆ ದೇಶಕ್ಕೆ ಕಾಲಿಡಲು ಸನ್ನದ್ಧವಾಗಿದ್ದು, ಇದನ್ನೂ ಪುಣೆಯ ಸೆರಮ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾ ಸಂಸ್ಥೆಯೇ ಉತ್ಪಾದಿಸಲು ಉತ್ಸಾಹ ತೋರಿದೆ.

ಅಮೆರಿಕಾದ ನೋವಾವ್ಯಾಕ್ಸ್ ಸಂಸ್ಥೆಯ ಕೊರೊನಾ ಲಸಿಕೆಯನ್ನು ಭಾರತದಲ್ಲಿ ಉತ್ಪಾದಿಸಲು ಅನುಮತಿ ಕೋರಿ ಸೆರಮ್​ ಇನ್​ಸ್ಟಿಟ್ಯೂಟ್ ಆಫ್​ ಇಂಡಿಯಾ ಈಗಾಗಲೇ ಅರ್ಜಿ ಸಲ್ಲಿಸಿದೆ. ಕೆಲ ವರದಿಗಳ ಪ್ರಕಾರ ಜೂನ್​ ವೇಳೆಗೆ ನೋವಾವ್ಯಾಕ್ಸ್ ಲಸಿಕೆ ಬಳಕೆಗೆ ಲಭ್ಯವಾಗಲಿದ್ದು, ಲಸಿಕೆಯ ವೈದ್ಯಕೀಯ ಪ್ರಯೋಗಕ್ಕೆ ಅನುಮತಿ ಸಿಕ್ಕರೆ ಫೆಬ್ರವರಿಯಿಂದಲೇ ಪ್ರಯೋಗ ಆರಂಭಿಸುವುದಾಗಿ ಸಂಸ್ಥೆ ತಿಳಿಸಿದೆ.

ಅಮೆರಿಕಾದಲ್ಲಿ ನೋವಾವ್ಯಾಕ್ಸ್​ ಕೊರೊನಾ ವೈರಾಣುವಿನ ವಿರುದ್ಧ ಶೇ. 89.3ರಷ್ಟು ಪರಿಣಾಮಕಾರಿಯಾಗಿದೆ ಎಂದು ವರದಿಗಳು ತಿಳಿಸಿವೆ. ಸೆರಮ್​ ಸಂಸ್ಥೆ ನೋವಾವ್ಯಾಕ್ಸ್​ನೊಂದಿಗೆ 2020ರ ಸೆಪ್ಟೆಂಬರ್​ ತಿಂಗಳಿನಲ್ಲಿಯೇ ಒಪ್ಪಂದವನ್ನೂ ಮಾಡಿಕೊಂಡಿದ್ದು, ಕೊವಾವ್ಯಾಕ್ಸ್​ ಹೆಸರಲ್ಲಿ ಭಾರತದಲ್ಲಿ ಆರಂಭದಲ್ಲೇ 200 ಕೋಟಿ ಡೋಸ್​ ಲಸಿಕೆ ಬಿಡುಗಡೆ ಮಾಡಲು ಯೋಚಿಸಿದೆ ಎಂದು ತಿಳಿದುಬಂದಿದೆ.

ಏಪ್ರಿಲ್‌ ಅಂತ್ಯಕ್ಕೆ ಹೆಮ್ಮಾರಿ ಆಟ ಅಂತ್ಯ?

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ