AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಲಿದೆ ಮತ್ತೊಂದು ಕೊರೊನಾ ಲಸಿಕೆ.. ಭಾರತದ ಸೆರಮ್​ ಸಂಸ್ಥೆಯಿಂದಲೇ ಉತ್ಪಾದನೆ: 200 ಕೋಟಿ ಡೋಸ್​ ಲಸಿಕೆ ಬಿಡುಗಡೆಗೆ ಸಿದ್ಧತೆ

ಸೆರಮ್​ ಸಂಸ್ಥೆ ನೋವಾವ್ಯಾಕ್ಸ್​ನೊಂದಿಗೆ 2020ರ ಸೆಪ್ಟೆಂಬರ್​ ತಿಂಗಳಿನಲ್ಲಿಯೇ ಒಪ್ಪಂದವನ್ನೂ ಮಾಡಿಕೊಂಡಿದ್ದು, ಕೊವಾವ್ಯಾಕ್ಸ್​ ಹೆಸರಲ್ಲಿ ಭಾರತದಲ್ಲಿ ಲಸಿಕೆ ಬಿಡುಗಡೆ ಮಾಡಲು ಯೋಚಿಸಿದೆ.

ಬರಲಿದೆ ಮತ್ತೊಂದು ಕೊರೊನಾ ಲಸಿಕೆ.. ಭಾರತದ ಸೆರಮ್​ ಸಂಸ್ಥೆಯಿಂದಲೇ ಉತ್ಪಾದನೆ: 200 ಕೋಟಿ ಡೋಸ್​ ಲಸಿಕೆ ಬಿಡುಗಡೆಗೆ ಸಿದ್ಧತೆ
ಅಮೆರಿಕಾದ ನೋವಾವ್ಯಾಕ್ಸ್​ ಭಾರತದಲ್ಲಿ ಕೊವಾವ್ಯಾಕ್ಸ್​
Skanda
| Updated By: ಸಾಧು ಶ್ರೀನಾಥ್​|

Updated on: Jan 30, 2021 | 5:07 PM

Share

ದೆಹಲಿ: ಭಾರತದಲ್ಲಿ ಸೆರಮ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾ ತಯಾರಿಸಿದ ಕೊವಿಶೀಲ್ಡ್​ ಮತ್ತು ಭಾರತ್​ ಬಯೋಟೆಕ್​ ಸಂಸ್ಥೆ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್​ ಲಸಿಕೆಗಳನ್ನು ಈಗಾಗಲೇ ಪ್ರಯೋಗಿಸಲಾಗುತ್ತಿದೆ. ಇದರ ಬೆನ್ನಲ್ಲೇ ಅಮೆರಿಕಾ ಮೂಲದ ಸಂಸ್ಥೆಯೊಂದರ ಕೊರೊನಾ ಲಸಿಕೆ ದೇಶಕ್ಕೆ ಕಾಲಿಡಲು ಸನ್ನದ್ಧವಾಗಿದ್ದು, ಇದನ್ನೂ ಪುಣೆಯ ಸೆರಮ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾ ಸಂಸ್ಥೆಯೇ ಉತ್ಪಾದಿಸಲು ಉತ್ಸಾಹ ತೋರಿದೆ.

ಅಮೆರಿಕಾದ ನೋವಾವ್ಯಾಕ್ಸ್ ಸಂಸ್ಥೆಯ ಕೊರೊನಾ ಲಸಿಕೆಯನ್ನು ಭಾರತದಲ್ಲಿ ಉತ್ಪಾದಿಸಲು ಅನುಮತಿ ಕೋರಿ ಸೆರಮ್​ ಇನ್​ಸ್ಟಿಟ್ಯೂಟ್ ಆಫ್​ ಇಂಡಿಯಾ ಈಗಾಗಲೇ ಅರ್ಜಿ ಸಲ್ಲಿಸಿದೆ. ಕೆಲ ವರದಿಗಳ ಪ್ರಕಾರ ಜೂನ್​ ವೇಳೆಗೆ ನೋವಾವ್ಯಾಕ್ಸ್ ಲಸಿಕೆ ಬಳಕೆಗೆ ಲಭ್ಯವಾಗಲಿದ್ದು, ಲಸಿಕೆಯ ವೈದ್ಯಕೀಯ ಪ್ರಯೋಗಕ್ಕೆ ಅನುಮತಿ ಸಿಕ್ಕರೆ ಫೆಬ್ರವರಿಯಿಂದಲೇ ಪ್ರಯೋಗ ಆರಂಭಿಸುವುದಾಗಿ ಸಂಸ್ಥೆ ತಿಳಿಸಿದೆ.

ಅಮೆರಿಕಾದಲ್ಲಿ ನೋವಾವ್ಯಾಕ್ಸ್​ ಕೊರೊನಾ ವೈರಾಣುವಿನ ವಿರುದ್ಧ ಶೇ. 89.3ರಷ್ಟು ಪರಿಣಾಮಕಾರಿಯಾಗಿದೆ ಎಂದು ವರದಿಗಳು ತಿಳಿಸಿವೆ. ಸೆರಮ್​ ಸಂಸ್ಥೆ ನೋವಾವ್ಯಾಕ್ಸ್​ನೊಂದಿಗೆ 2020ರ ಸೆಪ್ಟೆಂಬರ್​ ತಿಂಗಳಿನಲ್ಲಿಯೇ ಒಪ್ಪಂದವನ್ನೂ ಮಾಡಿಕೊಂಡಿದ್ದು, ಕೊವಾವ್ಯಾಕ್ಸ್​ ಹೆಸರಲ್ಲಿ ಭಾರತದಲ್ಲಿ ಆರಂಭದಲ್ಲೇ 200 ಕೋಟಿ ಡೋಸ್​ ಲಸಿಕೆ ಬಿಡುಗಡೆ ಮಾಡಲು ಯೋಚಿಸಿದೆ ಎಂದು ತಿಳಿದುಬಂದಿದೆ.

ಏಪ್ರಿಲ್‌ ಅಂತ್ಯಕ್ಕೆ ಹೆಮ್ಮಾರಿ ಆಟ ಅಂತ್ಯ?

ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ