AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಹಾಕದ ತಪ್ಪಿಗೆ ಜೈಲುಪಾಲಾದ ಬೀದಿ ಬದಿ ವ್ಯಾಪಾರಿ, ಮುಂದೇನಾಯ್ತು?

ಮುಂಬೈ: ಲಾಕ್​ಡೌನ್ ಬಳಿಕ ಚೇತರಿಸಿಕೊಳ್ಳಲು ಪರದಾಡುತ್ತಿರುವ ಮಧ್ಯಮ ಮತ್ತು ಬಡ ವರ್ಗದ ಜನರು ಹಾಗೋ ಹೀಗೋ ಜೀವನ ನಡೆಸುವಂತಾಗಿದೆ. ಈ ಕಷ್ಟದ ಸಮಯದಲ್ಲಿ ಕರ್ತವ್ಯ ನಿರತ ಪೊಲೀಸರು, ಮಾಸ್ಕ್ ಧರಿಸದವರಿಗೆ ದಂಡ ವಿಧಿಸುತ್ತಿದ್ದಾರೆ. ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಸರಿಯಾಗಿದ್ದರೂ ಬಡ ವರ್ಗದ ಜನರಿಗೆ ಇದರಿಂದ ಕೆಲವೊಮ್ಮೆ ತೊಂದರೆ ಉಂಟಾಗುತ್ತಿದೆಯಂತೆ. ಈ ಬಗ್ಗೆ ಮುಂಬೈ ಸೆಷನ್ಸ್ ಕೋರ್ಟ್ ವಿಶೇಷ ತೀರ್ಪು ನೀಡಿದೆ. ಮಾಸ್ಕ್ ಧರಿಸಿಲ್ಲ ಹಾಗೂ ಪ್ರಶ್ನಿಸಿದ ಅಧಿಕಾರಿಗಳೊಂದಿಗೆ ಸರಿಯಾಗಿ ವರ್ತಿಸಲಿಲ್ಲ ಎಂಬ ಕಾರಣಕ್ಕೆ ಅಕ್ಟೋಬರ್ […]

ಮಾಸ್ಕ್ ಹಾಕದ ತಪ್ಪಿಗೆ ಜೈಲುಪಾಲಾದ ಬೀದಿ ಬದಿ ವ್ಯಾಪಾರಿ, ಮುಂದೇನಾಯ್ತು?
KUSHAL V
|

Updated on: Nov 14, 2020 | 7:16 PM

Share

ಮುಂಬೈ: ಲಾಕ್​ಡೌನ್ ಬಳಿಕ ಚೇತರಿಸಿಕೊಳ್ಳಲು ಪರದಾಡುತ್ತಿರುವ ಮಧ್ಯಮ ಮತ್ತು ಬಡ ವರ್ಗದ ಜನರು ಹಾಗೋ ಹೀಗೋ ಜೀವನ ನಡೆಸುವಂತಾಗಿದೆ. ಈ ಕಷ್ಟದ ಸಮಯದಲ್ಲಿ ಕರ್ತವ್ಯ ನಿರತ ಪೊಲೀಸರು, ಮಾಸ್ಕ್ ಧರಿಸದವರಿಗೆ ದಂಡ ವಿಧಿಸುತ್ತಿದ್ದಾರೆ. ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಸರಿಯಾಗಿದ್ದರೂ ಬಡ ವರ್ಗದ ಜನರಿಗೆ ಇದರಿಂದ ಕೆಲವೊಮ್ಮೆ ತೊಂದರೆ ಉಂಟಾಗುತ್ತಿದೆಯಂತೆ. ಈ ಬಗ್ಗೆ ಮುಂಬೈ ಸೆಷನ್ಸ್ ಕೋರ್ಟ್ ವಿಶೇಷ ತೀರ್ಪು ನೀಡಿದೆ.

ಮಾಸ್ಕ್ ಧರಿಸಿಲ್ಲ ಹಾಗೂ ಪ್ರಶ್ನಿಸಿದ ಅಧಿಕಾರಿಗಳೊಂದಿಗೆ ಸರಿಯಾಗಿ ವರ್ತಿಸಲಿಲ್ಲ ಎಂಬ ಕಾರಣಕ್ಕೆ ಅಕ್ಟೋಬರ್ 31ರಂದು ಬೀದಿ ಬದಿ ವ್ಯಾಪಾರಿಯೊಬ್ಬನನ್ನು ಮುಂಬೈನ ಶಿವಾಜಿ ಪಾರ್ಕ್ ಬಳಿ ಪೊಲೀಸರು ಬಂಧಿಸಿದ್ದರು. ಬಂಧಿತ ವ್ಯಾಪಾರಿ ಜಗದೀಶ್ ಕೋರೆ(20) ಜೀವನೋಪಾಕ್ಕಾಗಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದರು. ತಮ್ಮ ಕುಟುಂಬಕ್ಕೆ ಜಗದೀಶನೇ ಆಧಾರ ಸ್ತಂಭವಾಗಿದ್ದ. ಹಾಗಾಗಿ, ಜಗದೀಶ್​ ಬಂಧನ ಆತನ ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ ತಂದೊಡ್ಡಿತ್ತು.

ಬಂಧನದ ನಂತರ ಜಗದೀಶ್ ತನ್ನನ್ನು ಬಿಡುಗಡೆಗೊಳಿಸುವಂತೆ ಕೋರಿ ಮುಂಬೈ ಸೆಷನ್ಸ್ ಕೋರ್ಟ್​ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಜಗದೀಶ್​ ಜಾಮೀನು ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಂಡ ನ್ಯಾಯಾಲಯವು ಆರೋಪಿಗೆ ಜಾಮೀನು ಮಂಜೂರು ಮಾಡಿದೆ.

ಜಗದೀಶ್ ಬಂಧನದಿಂದ ಆತನ ಮನೆಯವರು ಸಂಕಷ್ಟಕ್ಕೆ ಸಿಲುಕುವ ಅಪಾಯವಿದೆ. ಅವರ ಮೇಲೆ ಯಾವುದೇ ಕ್ರಿಮಿನಲ್ ಮೊಕದ್ದಮೆಯೂ ಇಲ್ಲ. ಲಾಕ್​ಡೌನ್ ಕಾರಣದಿಂದ ಬಡವರ್ಗದ ಜನರು ಬಹಳಷ್ಟು ಕಷ್ಟಪಟ್ಟಿದ್ದಾರೆ ಎಂದು ಸೆಷನ್ಸ್ ಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.

ಓಡ್ತಿರೋದು ನೋಡಿ... ಸುಂದರ್-ಮಿಲ್ಲರ್ ನಡುವೆ ಮಾತಿನ ಚಕಮಕಿ
ಓಡ್ತಿರೋದು ನೋಡಿ... ಸುಂದರ್-ಮಿಲ್ಲರ್ ನಡುವೆ ಮಾತಿನ ಚಕಮಕಿ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ