AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ರಾಜಕೀಯದಲ್ಲಿ ಹೊಸ ತಿರುವು; ಎಐಎಡಿಎಂಕೆಗೆ ರಾಜೀನಾಮೆ ನೀಡಿ ಟಿವಿಕೆಯತ್ತ ಮುಖ ಮಾಡಿದ 3 ಶಾಸಕರು

ತಮಿಳುನಾಡಿನ ಮೂವರು ಎಐಎಡಿಎಂಕೆ ಶಾಸಕರು ರಾಜೀನಾಮೆ ನೀಡಿದ್ದಾರೆ. ಈ 3 ಎಐಎಡಿಎಂಕೆ ಶಾಸಕರು ಟಿವಿಕೆಗೆ ಸೇರ್ಪಡೆಗೊಳ್ಳುವುದಾಗಿ ಘೋಷಿಸಿದ್ದಾರೆ. ಮಧುರಾಂತಕಂ ಶಾಸಕ ಮರಗತಮ್ ಕುಮಾರವೇಲ್, ಪೆರುಂಡುರೈ ಶಾಸಕ ಜಯಕುಮಾರ್ ಮತ್ತು ತಾರಾಪುರಂ ಶಾಸಕ ಸತ್ಯಭಾಮ ರಾಜೀನಾಮೆ ನೀಡಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಗಳು ಮುಗಿದಿದ್ದರೂ ರಾಜಕೀಯ ಉದ್ವಿಗ್ನತೆ ಇನ್ನೂ ಕಡಿಮೆಯಾಗಿಲ್ಲ. ಈ ಮೂಲಕ ಎಐಎಡಿಎಂಕೆ ನಾಯಕ ಎಡಪ್ಪಾಡಿ ಪಳನಿಸ್ವಾಮಿ ಅವರಿಗೆ ರೆಬೆಲ್ ಬಣದ ಶಾಸಕರು ಶಾಕ್ ನೀಡಿದ್ದಾರೆ.

ತಮಿಳುನಾಡು ರಾಜಕೀಯದಲ್ಲಿ ಹೊಸ ತಿರುವು; ಎಐಎಡಿಎಂಕೆಗೆ ರಾಜೀನಾಮೆ ನೀಡಿ ಟಿವಿಕೆಯತ್ತ ಮುಖ ಮಾಡಿದ 3 ಶಾಸಕರು
AIADMK Rebel MlasImage Credit source: TV9
ಸುಷ್ಮಾ ಚಕ್ರೆ
|

Updated on: May 25, 2026 | 5:37 PM

Share

ಚೆನ್ನೈ, ಮೇ 25: ಇತ್ತೀಚೆಗಷ್ಟೇ ಮುಕ್ತಾಯಗೊಂಡ ತಮಿಳುನಾಡು ವಿಧಾನಸಭಾ ಚುನಾವಣೆಯ (Tamil Nadu Assembly Elections) ಬೆನ್ನಲ್ಲೇ ಅಲ್ಲಿನ ರಾಜಕಾರಣದಲ್ಲಿ ಹೊಸ ತಿರುವು ಉಂಟಾಗಿದೆ. ಬಹುಮತ ಸಿಗದ ಹಿನ್ನೆಲೆಯಲ್ಲಿ ಇತರೆ ಪಕ್ಷಗಳ ಬೆಂಬಲ ಪಡೆಯಲು ವಿಜಯ್ ನೇತೃತ್ವದ ಟಿವಿಕೆ ಹರಸಾಹಸ ಪಟ್ಟಿತ್ತು. ಕೊನೆಗೂ ಎಡ ಪಕ್ಷಗಳು ಮತ್ತು ಕಾಂಗ್ರೆಸ್​​ನ ಬೆಂಬಲದೊಂದಿಗೆ ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ಎಐಎಡಿಎಂಕೆ (AIADMK) ಪಕ್ಷದ ಮೂವರು ಶಾಸಕರು ತಮಿಳುನಾಡು ವಿಧಾನಸಭೆಯ ಸ್ಪೀಕರ್ ಜೆ.ಸಿ.ಡಿ. ಪ್ರಭಾಕರ್ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಎಐಎಡಿಎಂಕೆಗೆ ರಾಜೀನಾಮೆ ನೀಡಿದ ರೆಬೆಲ್ ಶಾಸಕರು ಟಿವಿಕೆಗೆ ಸೇರುವುದಾಗಿ ಘೋಷಿಸುವ ಮೂಲಕ ಪಕ್ಷದ ಮುಖ್ಯಸ್ಥ ಪಳನಿಸ್ವಾಮಿಗೆ ಶಾಕ್ ನೀಡಿದ್ದಾರೆ.

ಈ ರಾಜೀನಾಮೆ ಪತ್ರಗಳನ್ನು ಪರಿಶೀಲಿಸಿದ ಸ್ಪೀಕರ್ ಪ್ರಭಾಕರ್, ಅವುಗಳು ನಿಗದಿತ ನಿಯಮಾವಳಿಗಳ ಪ್ರಕಾರ ಸರಿಯಾದ ಮಾದರಿಯಲ್ಲಿದ್ದ ಹಿನ್ನೆಲೆಯಲ್ಲಿ ಅವುಗಳನ್ನು ಅಂಗೀಕರಿಸಿದ್ದಾರೆ. ರಾಜೀನಾಮೆ ನೀಡಲು ಕಾರಣವನ್ನು ಉಲ್ಲೇಖಿಸಲೇಬೇಕಾದ ಅಗತ್ಯವಿಲ್ಲ ಎಂದು ಈ ವೇಳೆ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಮಾಣವಚನದ ವೇಳೆ ರಾಹುಲ್ ಗಾಂಧಿ ಹೆಸರು ಹೇಳಿ ವಿವಾದಕ್ಕೀಡಾದ ತಮಿಳುನಾಡು ಕಾಂಗ್ರೆಸ್ ಶಾಸಕ

ರಾಜೀನಾಮೆ ನೀಡಿರುವ ಎಐಎಡಿಎಂಕೆಯ ಮೂವರು ಶಾಸಕರೆಂದರೆ ಮರಗತಂ ಕುಮಾರವೇಲ್, ಸತ್ಯಭಾಮಾ ಮತ್ತು ಜಯಕುಮಾರ್. ಅವರು ಸಿ. ವಿ. ಷಣ್ಮುಗಂ ಮತ್ತು ಎಸ್. ಪಿ. ವೇಲುಮಣಿ ನೇತೃತ್ವದ ಎಐಎಡಿಎಂಕೆ ಬಂಡಾಯ ಬಣದ ಭಾಗವಾಗಿದ್ದರು. ಇತ್ತೀಚೆಗೆ ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಯಾಚನೆಯ ವೇಳೆ ಈ ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿ, ನಟ ವಿಜಯ್ ನೇತೃತ್ವದ ಮೈತ್ರಿಕೂಟದ ಪರವಾಗಿ ಮತ ಚಲಾಯಿಸಿದ್ದರು.

ಮರಗತಂ ಕುಮಾರವೇಲ್ ಅವರು ಮಧುರಾಂತಕಂ ಕ್ಷೇತ್ರದಿಂದ, ಸತ್ಯಭಾಮಾ ಅವರು ಧಾರಾಪುರಂ ಕ್ಷೇತ್ರದಿಂದ ಮತ್ತು ಜಯಕುಮಾರ್ ಅವರು ಪೆರುಂದುರೈ ಕ್ಷೇತ್ರದಿಂದ ಎಐಎಡಿಎಂಕೆ ಟಿಕೆಟ್ ಮೂಲಕ ಸ್ಪರ್ಧಿಸಿ ಗೆದ್ದಿದ್ದರು. ಸ್ಪೀಕರ್‌ಗೆ ತಮ್ಮ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ, ಈ ಮೂವರು ಶಾಸಕರು ತಮಿಳುನಾಡು ಸರ್ಕಾರದ ಸಚಿವರು ಹಾಗೂ ಟಿವಿಕೆ ಪಕ್ಷದ ಪ್ರಭಾವಿ ನಾಯಕರಾಗಿರುವ ಆಧವ್ ಅರ್ಜುನ ಅವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ: ಅವನತಿಯತ್ತ ಎಐಎಡಿಎಂಕೆ; ಒಳಜಗಳದಿಂದಾಗಿ ಎಂಜಿಆರ್, ಜಯಲಲಿತಾ ಪರಂಪರೆ ಕೊನೆಯಾಗುತ್ತಾ?

ಮರಗತಮ್ ಕುಮಾರವೇಲ್ ನೇತೃತ್ವದಲ್ಲಿ ಪೆರುಂದುರೈ ಶಾಸಕ ಜಯಕುಮಾರ್ ಮತ್ತು ತಾರಾಪುರಂ ಶಾಸಕಿ ಸತ್ಯಭಾಮಾ ರಾಜೀನಾಮೆ ನೀಡಿದ್ದಾರೆ. ಎಐಎಡಿಎಂಕೆ ಬಣವಾದ ಎಸ್.ಪಿ. ವೇಲುಮಣಿ, ಸಿ.ವಿ. ಷಣ್ಮುಗಂ ಎಡಪ್ಪಾಡಿ ಪಳನಿಸ್ವಾಮಿ ಅವರನ್ನು ಮತ್ತೆ ಸೇರಲು ಮಾತುಕತೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ವಿವಿಧ ಭಿನ್ನಾಭಿಪ್ರಾಯಗಳ ನಡುವೆ ಒಂದು ಕಡೆ ಮಾತುಕತೆ ನಡೆಯುತ್ತಿರುವ ಸಂದರ್ಭದಲ್ಲಿ ಮೂವರು ಶಾಸಕರು ಈಗ ಎಐಎಡಿಎಂಕೆಗೆ ರಾಜೀನಾಮೆ ನೀಡಿದ್ದಾರೆ.

ಇದರಿಂದ ಎಐಎಡಿಎಂಕೆ ಶಾಸಕರ ಸಂಖ್ಯೆ 44ಕ್ಕೆ ಇಳಿದಿದೆ. ಎರಡೂ ಪಕ್ಷಗಳು ಮತ್ತೆ ಒಂದಾಗುವ ಸಾಧ್ಯತೆ ಇದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ರಾಜೀನಾಮೆ ಮಹತ್ವ ಪಡೆದುಕೊಂಡಿದೆ ಎಂದು ಹೇಳಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಹಿಂದಿದೆ ರೋಚಕ ಸ್ಟೋರಿ
ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಹಿಂದಿದೆ ರೋಚಕ ಸ್ಟೋರಿ
ಬೆಂಗಳೂರಿನಲ್ಲಿ ರಾಮ್ ಚರಣ್ ‘ಪೆದ್ದಿ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ವಿಡಿಯೋ
ಬೆಂಗಳೂರಿನಲ್ಲಿ ರಾಮ್ ಚರಣ್ ‘ಪೆದ್ದಿ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ವಿಡಿಯೋ
ಸಿಎಂಗೆ ಹೈಕಮಾಂಡ್​ ದಿಲ್ಲಿ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು
ಸಿಎಂಗೆ ಹೈಕಮಾಂಡ್​ ದಿಲ್ಲಿ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು
ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಇಂಧನ ಬೆಲೆ ಏರಿಕೆ: ಕೇಂದ್ರ, ರಾಜ್ಯಕ್ಕೆಷ್ಟು ಪಾಲೆಂಬ ಮಾಹಿತಿ ಇಲ್ಲಿದೆ
ಇಂಧನ ಬೆಲೆ ಏರಿಕೆ: ಕೇಂದ್ರ, ರಾಜ್ಯಕ್ಕೆಷ್ಟು ಪಾಲೆಂಬ ಮಾಹಿತಿ ಇಲ್ಲಿದೆ
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!