AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ಮಸೀದಿ ಬಳಿ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿ, ಮಾಂಸ ಎಸೆದಿದ್ದ 7 ಮಂದಿ ಅರೆಸ್ಟ್​ !

ದಂಗೆ ಎಬ್ಬಿಸುವ ಸಲುವಾಗಿ ಈ ಗುಂಪು ಹೀಗೆ ಮಾಡಿತ್ತು. ಮಧ್ಯ ರಾತ್ರಿ 2ಗಂಟೆ ಹೊತ್ತಿಗೆ ಸುಮಾರು ಎಂಟು ಜನ ಬೈಕ್​​ನಲ್ಲಿ ವಿವಿಧ ಮಸೀದಿಗಳ ಬಳಿ ಹೋಗಿ ಅಲ್ಲಿ ಪೋಸ್ಟರ್​ ಅಂಟಿಸಿದ್ದಾರೆ.

ಅಯೋಧ್ಯೆಯಲ್ಲಿ ಮಸೀದಿ ಬಳಿ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿ, ಮಾಂಸ ಎಸೆದಿದ್ದ 7 ಮಂದಿ ಅರೆಸ್ಟ್​ !
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸರು
TV9 Web
| Updated By: Lakshmi Hegde|

Updated on: Apr 28, 2022 | 5:33 PM

Share

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಮಸೀದಿಗಳ ಬಳಿ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿ, ಮಸೀದಿಗೆ ಮಾಂಸದ ತುಂಡನ್ನು ಎಸೆದಿದ್ದ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಗೇ ಇನ್ನೂ ನಾಲ್ವರಿಗಾಗಿ ಹುಡುಕಾಟ ನಡೆದಿದೆ. ಈ ಬಗ್ಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಐಜಿ ಕೆ.ಪಿ.ಸಿಂಗ್ ಮತ್ತು ಎಸ್​ಎಸ್​ಪಿ ಶೈಲೇಶ್ ಪಾಂಡೆ, ದೆಹಲಿಯ ಜಹಂಗೀರ್​​ಪುರಿಯಲ್ಲಿ ಹನುಮಾನ್ ಜಯಂತಿಯಂದು ನಡೆದ ಹಿಂಸಾಚಾರ, ಗಲಭೆಯಿಂದ ಸಿಟ್ಟಾಗಿದ್ದ ಗುಂಪೊಂದು ಈ ಕೃತ್ಯ ನಡೆಸಿದೆ. ಪ್ರಕರಣ ನಡೆದ 24ಗಂಟೆಯಲ್ಲಿ, ಸಿಸಿಟಿವಿ ಸಹಾಯದಿಂದ ಆರೋಪಿಗಳನ್ನು ಬಂಧಿಸಲಾಗಿದೆ. ಇವರೆಲ್ಲರೂ ಮಸೀದಿ ಬಳಿ ಪೋಸ್ಟರ್ ಅಂಟಿಸಲು ಮುಸ್ಲಿಂ ಟೋಪಿಗಳನ್ನು ಹಾಕಿ ಬಂದಿದ್ದರು ಎಂದು ಹೇಳಿದ್ದಾರೆ. 

ದಂಗೆ ಎಬ್ಬಿಸುವ ಸಲುವಾಗಿ ಈ ಗುಂಪು ಹೀಗೆ ಮಾಡಿತ್ತು. ಮಧ್ಯ ರಾತ್ರಿ 2ಗಂಟೆ ಹೊತ್ತಿಗೆ ಸುಮಾರು ಎಂಟು ಜನ ಬೈಕ್​​ನಲ್ಲಿ ವಿವಿಧ ಮಸೀದಿಗಳ ಬಳಿ ಹೋಗಿ ಅಲ್ಲಿ ಪೋಸ್ಟರ್​ ಅಂಟಿಸಿದ್ದಾರೆ. ಕೆಲವನ್ನು ಅಲ್ಲಿಯೇ ಬಿಸಾಕಿದ್ದರು. ಅಷ್ಟೇ ಅಲ್ಲ, ಮಾಂಸವನ್ನೂ ಎಸೆದಿದ್ದಾರೆ. ಅಯೋಧ್ಯೆಯಲ್ಲಿರುವ ಕಾಶ್ಮೀರಿ ಮೊಹಲ್ಲಾ, ಟಾಟಾ ಶಾ ಮಸೀದಿ, ಈದ್ಗಾ ಸಿವಿಲ್ ಲೈನ್​ ಸೇರಿ ಹಲವು ಮಸೀದಿಗಳ ಬಳಿ ಪೋಸ್ಟರ್​ಗಳು ಕಂಡುಬಂದಿದ್ದವು. ಅದರಲ್ಲಿ ಆ ಧರ್ಮದ ಬಗ್ಗೆ ಅವಹೇಳನಕಾರಿ ಸಾಲುಗಳನ್ನು ಬರೆಯಲಾಗಿತ್ತು.  ನಮ್ಮ ಗಮನಕ್ಕೆ ಬರುತ್ತಿದ್ದಂತೆ ತನಿಖೆ ಕೈಗೆತ್ತಿಕೊಂಡಿದ್ದಲ್ಲದೆ, ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರ ತಂಡವನ್ನು ರಚಿಸಲಾಗಿತ್ತು. ಒಟ್ಟು ಏಳು ಜನರನ್ನು ಸೆರೆ ಹಿಡಿಯಲಾಗಿದೆ ಎಂದು ಹೇಳಿದ್ದಾರೆ. ಅಂದಹಾಗೇ, ಆರೋಪಿಗಳೆಲ್ಲರೂ ಅಯೋಧ್ಯೆಯವರೇ ಆಗಿದ್ದು, ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾಗ್ಯೂ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಸೆರೆಹಿಡಿಯಲಾದ ಈ ಕಬಾಬ್​ ತಯಾರಕನ ಫೋಟೋಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ; ಭಾರತೀಯ ಛಾಯಾಗ್ರಾಹಕಿಗೆ ಒಲಿದ ಪಿಂಕ್​ ಲೇಡಿ

ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ
Daily Devotional: ನೀರು ಹೇಗೆ ಉಪಯೋಗಿಸಿದ್ರೆ ದುಡ್ಡು ಹಾಗೆ ಖರ್ಚಾಗುತ್ತಾ?
Daily Devotional: ನೀರು ಹೇಗೆ ಉಪಯೋಗಿಸಿದ್ರೆ ದುಡ್ಡು ಹಾಗೆ ಖರ್ಚಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಮನ್ನಣೆ ಸಿಗುತ್ತದೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಮನ್ನಣೆ ಸಿಗುತ್ತದೆ
ಹಾವುಗಳಿಗೆ ಹೇಗೆ ಆಹಾರ ನೀಡುತ್ತಾರೆಂದು ನೋಡಿದ್ದೀರಾ? ಇಲ್ಲಿದೆ ವಿಡಿಯೋ
ಹಾವುಗಳಿಗೆ ಹೇಗೆ ಆಹಾರ ನೀಡುತ್ತಾರೆಂದು ನೋಡಿದ್ದೀರಾ? ಇಲ್ಲಿದೆ ವಿಡಿಯೋ