Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ಮಸೀದಿ ಬಳಿ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿ, ಮಾಂಸ ಎಸೆದಿದ್ದ 7 ಮಂದಿ ಅರೆಸ್ಟ್​ !

ದಂಗೆ ಎಬ್ಬಿಸುವ ಸಲುವಾಗಿ ಈ ಗುಂಪು ಹೀಗೆ ಮಾಡಿತ್ತು. ಮಧ್ಯ ರಾತ್ರಿ 2ಗಂಟೆ ಹೊತ್ತಿಗೆ ಸುಮಾರು ಎಂಟು ಜನ ಬೈಕ್​​ನಲ್ಲಿ ವಿವಿಧ ಮಸೀದಿಗಳ ಬಳಿ ಹೋಗಿ ಅಲ್ಲಿ ಪೋಸ್ಟರ್​ ಅಂಟಿಸಿದ್ದಾರೆ.

ಅಯೋಧ್ಯೆಯಲ್ಲಿ ಮಸೀದಿ ಬಳಿ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿ, ಮಾಂಸ ಎಸೆದಿದ್ದ 7 ಮಂದಿ ಅರೆಸ್ಟ್​ !
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸರು
Follow us
TV9 Web
| Updated By: Lakshmi Hegde

Updated on: Apr 28, 2022 | 5:33 PM

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಮಸೀದಿಗಳ ಬಳಿ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿ, ಮಸೀದಿಗೆ ಮಾಂಸದ ತುಂಡನ್ನು ಎಸೆದಿದ್ದ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಗೇ ಇನ್ನೂ ನಾಲ್ವರಿಗಾಗಿ ಹುಡುಕಾಟ ನಡೆದಿದೆ. ಈ ಬಗ್ಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಐಜಿ ಕೆ.ಪಿ.ಸಿಂಗ್ ಮತ್ತು ಎಸ್​ಎಸ್​ಪಿ ಶೈಲೇಶ್ ಪಾಂಡೆ, ದೆಹಲಿಯ ಜಹಂಗೀರ್​​ಪುರಿಯಲ್ಲಿ ಹನುಮಾನ್ ಜಯಂತಿಯಂದು ನಡೆದ ಹಿಂಸಾಚಾರ, ಗಲಭೆಯಿಂದ ಸಿಟ್ಟಾಗಿದ್ದ ಗುಂಪೊಂದು ಈ ಕೃತ್ಯ ನಡೆಸಿದೆ. ಪ್ರಕರಣ ನಡೆದ 24ಗಂಟೆಯಲ್ಲಿ, ಸಿಸಿಟಿವಿ ಸಹಾಯದಿಂದ ಆರೋಪಿಗಳನ್ನು ಬಂಧಿಸಲಾಗಿದೆ. ಇವರೆಲ್ಲರೂ ಮಸೀದಿ ಬಳಿ ಪೋಸ್ಟರ್ ಅಂಟಿಸಲು ಮುಸ್ಲಿಂ ಟೋಪಿಗಳನ್ನು ಹಾಕಿ ಬಂದಿದ್ದರು ಎಂದು ಹೇಳಿದ್ದಾರೆ. 

ದಂಗೆ ಎಬ್ಬಿಸುವ ಸಲುವಾಗಿ ಈ ಗುಂಪು ಹೀಗೆ ಮಾಡಿತ್ತು. ಮಧ್ಯ ರಾತ್ರಿ 2ಗಂಟೆ ಹೊತ್ತಿಗೆ ಸುಮಾರು ಎಂಟು ಜನ ಬೈಕ್​​ನಲ್ಲಿ ವಿವಿಧ ಮಸೀದಿಗಳ ಬಳಿ ಹೋಗಿ ಅಲ್ಲಿ ಪೋಸ್ಟರ್​ ಅಂಟಿಸಿದ್ದಾರೆ. ಕೆಲವನ್ನು ಅಲ್ಲಿಯೇ ಬಿಸಾಕಿದ್ದರು. ಅಷ್ಟೇ ಅಲ್ಲ, ಮಾಂಸವನ್ನೂ ಎಸೆದಿದ್ದಾರೆ. ಅಯೋಧ್ಯೆಯಲ್ಲಿರುವ ಕಾಶ್ಮೀರಿ ಮೊಹಲ್ಲಾ, ಟಾಟಾ ಶಾ ಮಸೀದಿ, ಈದ್ಗಾ ಸಿವಿಲ್ ಲೈನ್​ ಸೇರಿ ಹಲವು ಮಸೀದಿಗಳ ಬಳಿ ಪೋಸ್ಟರ್​ಗಳು ಕಂಡುಬಂದಿದ್ದವು. ಅದರಲ್ಲಿ ಆ ಧರ್ಮದ ಬಗ್ಗೆ ಅವಹೇಳನಕಾರಿ ಸಾಲುಗಳನ್ನು ಬರೆಯಲಾಗಿತ್ತು.  ನಮ್ಮ ಗಮನಕ್ಕೆ ಬರುತ್ತಿದ್ದಂತೆ ತನಿಖೆ ಕೈಗೆತ್ತಿಕೊಂಡಿದ್ದಲ್ಲದೆ, ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರ ತಂಡವನ್ನು ರಚಿಸಲಾಗಿತ್ತು. ಒಟ್ಟು ಏಳು ಜನರನ್ನು ಸೆರೆ ಹಿಡಿಯಲಾಗಿದೆ ಎಂದು ಹೇಳಿದ್ದಾರೆ. ಅಂದಹಾಗೇ, ಆರೋಪಿಗಳೆಲ್ಲರೂ ಅಯೋಧ್ಯೆಯವರೇ ಆಗಿದ್ದು, ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾಗ್ಯೂ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಸೆರೆಹಿಡಿಯಲಾದ ಈ ಕಬಾಬ್​ ತಯಾರಕನ ಫೋಟೋಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ; ಭಾರತೀಯ ಛಾಯಾಗ್ರಾಹಕಿಗೆ ಒಲಿದ ಪಿಂಕ್​ ಲೇಡಿ

ಬ್ರಹ್ಮೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾರಿಗೆ ಮೊದಲಬಾರಿಗೆ ದಾಸೋಹ ವ್ಯವಸ್ಥೆ
ಬ್ರಹ್ಮೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾರಿಗೆ ಮೊದಲಬಾರಿಗೆ ದಾಸೋಹ ವ್ಯವಸ್ಥೆ
ರಚಿತಾ ರಾಮ್ ಹಾಡೋದನ್ನ ನೋಡಿದ್ದೀರಾ? ಇಲ್ಲಿದೆ ಅಪರೂಪದ ವಿಡಿಯೋ
ರಚಿತಾ ರಾಮ್ ಹಾಡೋದನ್ನ ನೋಡಿದ್ದೀರಾ? ಇಲ್ಲಿದೆ ಅಪರೂಪದ ವಿಡಿಯೋ
ಕೇಂದ್ರ ರೂಪಿಸುವ ಕಾನೂನನ್ನು ರಾಜ್ಯಗಳು ಜಾರಿಮಾಡಬೇಕು: ಪ್ರಲ್ಹಾದ್ ಜೋಶಿ
ಕೇಂದ್ರ ರೂಪಿಸುವ ಕಾನೂನನ್ನು ರಾಜ್ಯಗಳು ಜಾರಿಮಾಡಬೇಕು: ಪ್ರಲ್ಹಾದ್ ಜೋಶಿ
ಬ್ರೆಜಿಲ್​ನಲ್ಲಿ ಆಕಾಶದಿಂದ ನೇರವಾಗಿ ರಸ್ತೆಗೆ ಇಳಿದ ವಿಮಾನ
ಬ್ರೆಜಿಲ್​ನಲ್ಲಿ ಆಕಾಶದಿಂದ ನೇರವಾಗಿ ರಸ್ತೆಗೆ ಇಳಿದ ವಿಮಾನ
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್, ವಿಡಿಯೋ ವೈರಲ್
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್, ವಿಡಿಯೋ ವೈರಲ್
ಅಕ್ಷರಾಭ್ಯಾಸಕ್ಕೆ ಯಾವ ದಿನ ಶುಭ ಮತ್ತು ಹೇಗೆ ಮಾಡಿಸಬೇಕು?
ಅಕ್ಷರಾಭ್ಯಾಸಕ್ಕೆ ಯಾವ ದಿನ ಶುಭ ಮತ್ತು ಹೇಗೆ ಮಾಡಿಸಬೇಕು?
Daily Horoscope: ರಾಜಕೀಯ ವ್ಯಕ್ತಿಗಳಿಗೆ ಇಂದು ಉತ್ತಮ ದಿನ
Daily Horoscope: ರಾಜಕೀಯ ವ್ಯಕ್ತಿಗಳಿಗೆ ಇಂದು ಉತ್ತಮ ದಿನ
ಧ್ರುವ ಸರ್ಜಾ ಫ್ಯಾನ್ಸ್ ರೀತಿಯೇ ಪ್ರಥಮ್ ಅಭಿಮಾನಿಗಳಿಂದ ವಿಚಿತ್ರ ಹಾಡು
ಧ್ರುವ ಸರ್ಜಾ ಫ್ಯಾನ್ಸ್ ರೀತಿಯೇ ಪ್ರಥಮ್ ಅಭಿಮಾನಿಗಳಿಂದ ವಿಚಿತ್ರ ಹಾಡು
ಮೆಟ್ರೋ ಕಂಬಗಳು, ಐತಿಹಾಸಿಕ ಕಟ್ಟಡಗಳಿಗೂ ದೀಪಾಲಂಕಾರ: ಡಿಕೆ ಶಿವಕುಮಾರ್
ಮೆಟ್ರೋ ಕಂಬಗಳು, ಐತಿಹಾಸಿಕ ಕಟ್ಟಡಗಳಿಗೂ ದೀಪಾಲಂಕಾರ: ಡಿಕೆ ಶಿವಕುಮಾರ್
ವಿಧಾನಸೌಧದ ಶಾಶ್ವತ ವರ್ಣರಂಜಿತ ದೀಪಾಲಂಕಾರ ನೋಡಿ
ವಿಧಾನಸೌಧದ ಶಾಶ್ವತ ವರ್ಣರಂಜಿತ ದೀಪಾಲಂಕಾರ ನೋಡಿ