AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ಮಸೀದಿ ಬಳಿ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿ, ಮಾಂಸ ಎಸೆದಿದ್ದ 7 ಮಂದಿ ಅರೆಸ್ಟ್​ !

ದಂಗೆ ಎಬ್ಬಿಸುವ ಸಲುವಾಗಿ ಈ ಗುಂಪು ಹೀಗೆ ಮಾಡಿತ್ತು. ಮಧ್ಯ ರಾತ್ರಿ 2ಗಂಟೆ ಹೊತ್ತಿಗೆ ಸುಮಾರು ಎಂಟು ಜನ ಬೈಕ್​​ನಲ್ಲಿ ವಿವಿಧ ಮಸೀದಿಗಳ ಬಳಿ ಹೋಗಿ ಅಲ್ಲಿ ಪೋಸ್ಟರ್​ ಅಂಟಿಸಿದ್ದಾರೆ.

ಅಯೋಧ್ಯೆಯಲ್ಲಿ ಮಸೀದಿ ಬಳಿ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿ, ಮಾಂಸ ಎಸೆದಿದ್ದ 7 ಮಂದಿ ಅರೆಸ್ಟ್​ !
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸರು
TV9 Web
| Edited By: |

Updated on: Apr 28, 2022 | 5:33 PM

Share

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಮಸೀದಿಗಳ ಬಳಿ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿ, ಮಸೀದಿಗೆ ಮಾಂಸದ ತುಂಡನ್ನು ಎಸೆದಿದ್ದ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಗೇ ಇನ್ನೂ ನಾಲ್ವರಿಗಾಗಿ ಹುಡುಕಾಟ ನಡೆದಿದೆ. ಈ ಬಗ್ಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಐಜಿ ಕೆ.ಪಿ.ಸಿಂಗ್ ಮತ್ತು ಎಸ್​ಎಸ್​ಪಿ ಶೈಲೇಶ್ ಪಾಂಡೆ, ದೆಹಲಿಯ ಜಹಂಗೀರ್​​ಪುರಿಯಲ್ಲಿ ಹನುಮಾನ್ ಜಯಂತಿಯಂದು ನಡೆದ ಹಿಂಸಾಚಾರ, ಗಲಭೆಯಿಂದ ಸಿಟ್ಟಾಗಿದ್ದ ಗುಂಪೊಂದು ಈ ಕೃತ್ಯ ನಡೆಸಿದೆ. ಪ್ರಕರಣ ನಡೆದ 24ಗಂಟೆಯಲ್ಲಿ, ಸಿಸಿಟಿವಿ ಸಹಾಯದಿಂದ ಆರೋಪಿಗಳನ್ನು ಬಂಧಿಸಲಾಗಿದೆ. ಇವರೆಲ್ಲರೂ ಮಸೀದಿ ಬಳಿ ಪೋಸ್ಟರ್ ಅಂಟಿಸಲು ಮುಸ್ಲಿಂ ಟೋಪಿಗಳನ್ನು ಹಾಕಿ ಬಂದಿದ್ದರು ಎಂದು ಹೇಳಿದ್ದಾರೆ. 

ದಂಗೆ ಎಬ್ಬಿಸುವ ಸಲುವಾಗಿ ಈ ಗುಂಪು ಹೀಗೆ ಮಾಡಿತ್ತು. ಮಧ್ಯ ರಾತ್ರಿ 2ಗಂಟೆ ಹೊತ್ತಿಗೆ ಸುಮಾರು ಎಂಟು ಜನ ಬೈಕ್​​ನಲ್ಲಿ ವಿವಿಧ ಮಸೀದಿಗಳ ಬಳಿ ಹೋಗಿ ಅಲ್ಲಿ ಪೋಸ್ಟರ್​ ಅಂಟಿಸಿದ್ದಾರೆ. ಕೆಲವನ್ನು ಅಲ್ಲಿಯೇ ಬಿಸಾಕಿದ್ದರು. ಅಷ್ಟೇ ಅಲ್ಲ, ಮಾಂಸವನ್ನೂ ಎಸೆದಿದ್ದಾರೆ. ಅಯೋಧ್ಯೆಯಲ್ಲಿರುವ ಕಾಶ್ಮೀರಿ ಮೊಹಲ್ಲಾ, ಟಾಟಾ ಶಾ ಮಸೀದಿ, ಈದ್ಗಾ ಸಿವಿಲ್ ಲೈನ್​ ಸೇರಿ ಹಲವು ಮಸೀದಿಗಳ ಬಳಿ ಪೋಸ್ಟರ್​ಗಳು ಕಂಡುಬಂದಿದ್ದವು. ಅದರಲ್ಲಿ ಆ ಧರ್ಮದ ಬಗ್ಗೆ ಅವಹೇಳನಕಾರಿ ಸಾಲುಗಳನ್ನು ಬರೆಯಲಾಗಿತ್ತು.  ನಮ್ಮ ಗಮನಕ್ಕೆ ಬರುತ್ತಿದ್ದಂತೆ ತನಿಖೆ ಕೈಗೆತ್ತಿಕೊಂಡಿದ್ದಲ್ಲದೆ, ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರ ತಂಡವನ್ನು ರಚಿಸಲಾಗಿತ್ತು. ಒಟ್ಟು ಏಳು ಜನರನ್ನು ಸೆರೆ ಹಿಡಿಯಲಾಗಿದೆ ಎಂದು ಹೇಳಿದ್ದಾರೆ. ಅಂದಹಾಗೇ, ಆರೋಪಿಗಳೆಲ್ಲರೂ ಅಯೋಧ್ಯೆಯವರೇ ಆಗಿದ್ದು, ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾಗ್ಯೂ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಸೆರೆಹಿಡಿಯಲಾದ ಈ ಕಬಾಬ್​ ತಯಾರಕನ ಫೋಟೋಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ; ಭಾರತೀಯ ಛಾಯಾಗ್ರಾಹಕಿಗೆ ಒಲಿದ ಪಿಂಕ್​ ಲೇಡಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ