AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ಮಸೀದಿ ಬಳಿ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿ, ಮಾಂಸ ಎಸೆದಿದ್ದ 7 ಮಂದಿ ಅರೆಸ್ಟ್​ !

ದಂಗೆ ಎಬ್ಬಿಸುವ ಸಲುವಾಗಿ ಈ ಗುಂಪು ಹೀಗೆ ಮಾಡಿತ್ತು. ಮಧ್ಯ ರಾತ್ರಿ 2ಗಂಟೆ ಹೊತ್ತಿಗೆ ಸುಮಾರು ಎಂಟು ಜನ ಬೈಕ್​​ನಲ್ಲಿ ವಿವಿಧ ಮಸೀದಿಗಳ ಬಳಿ ಹೋಗಿ ಅಲ್ಲಿ ಪೋಸ್ಟರ್​ ಅಂಟಿಸಿದ್ದಾರೆ.

ಅಯೋಧ್ಯೆಯಲ್ಲಿ ಮಸೀದಿ ಬಳಿ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿ, ಮಾಂಸ ಎಸೆದಿದ್ದ 7 ಮಂದಿ ಅರೆಸ್ಟ್​ !
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸರು
TV9 Web
| Edited By: |

Updated on: Apr 28, 2022 | 5:33 PM

Share

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಮಸೀದಿಗಳ ಬಳಿ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿ, ಮಸೀದಿಗೆ ಮಾಂಸದ ತುಂಡನ್ನು ಎಸೆದಿದ್ದ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಗೇ ಇನ್ನೂ ನಾಲ್ವರಿಗಾಗಿ ಹುಡುಕಾಟ ನಡೆದಿದೆ. ಈ ಬಗ್ಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಐಜಿ ಕೆ.ಪಿ.ಸಿಂಗ್ ಮತ್ತು ಎಸ್​ಎಸ್​ಪಿ ಶೈಲೇಶ್ ಪಾಂಡೆ, ದೆಹಲಿಯ ಜಹಂಗೀರ್​​ಪುರಿಯಲ್ಲಿ ಹನುಮಾನ್ ಜಯಂತಿಯಂದು ನಡೆದ ಹಿಂಸಾಚಾರ, ಗಲಭೆಯಿಂದ ಸಿಟ್ಟಾಗಿದ್ದ ಗುಂಪೊಂದು ಈ ಕೃತ್ಯ ನಡೆಸಿದೆ. ಪ್ರಕರಣ ನಡೆದ 24ಗಂಟೆಯಲ್ಲಿ, ಸಿಸಿಟಿವಿ ಸಹಾಯದಿಂದ ಆರೋಪಿಗಳನ್ನು ಬಂಧಿಸಲಾಗಿದೆ. ಇವರೆಲ್ಲರೂ ಮಸೀದಿ ಬಳಿ ಪೋಸ್ಟರ್ ಅಂಟಿಸಲು ಮುಸ್ಲಿಂ ಟೋಪಿಗಳನ್ನು ಹಾಕಿ ಬಂದಿದ್ದರು ಎಂದು ಹೇಳಿದ್ದಾರೆ. 

ದಂಗೆ ಎಬ್ಬಿಸುವ ಸಲುವಾಗಿ ಈ ಗುಂಪು ಹೀಗೆ ಮಾಡಿತ್ತು. ಮಧ್ಯ ರಾತ್ರಿ 2ಗಂಟೆ ಹೊತ್ತಿಗೆ ಸುಮಾರು ಎಂಟು ಜನ ಬೈಕ್​​ನಲ್ಲಿ ವಿವಿಧ ಮಸೀದಿಗಳ ಬಳಿ ಹೋಗಿ ಅಲ್ಲಿ ಪೋಸ್ಟರ್​ ಅಂಟಿಸಿದ್ದಾರೆ. ಕೆಲವನ್ನು ಅಲ್ಲಿಯೇ ಬಿಸಾಕಿದ್ದರು. ಅಷ್ಟೇ ಅಲ್ಲ, ಮಾಂಸವನ್ನೂ ಎಸೆದಿದ್ದಾರೆ. ಅಯೋಧ್ಯೆಯಲ್ಲಿರುವ ಕಾಶ್ಮೀರಿ ಮೊಹಲ್ಲಾ, ಟಾಟಾ ಶಾ ಮಸೀದಿ, ಈದ್ಗಾ ಸಿವಿಲ್ ಲೈನ್​ ಸೇರಿ ಹಲವು ಮಸೀದಿಗಳ ಬಳಿ ಪೋಸ್ಟರ್​ಗಳು ಕಂಡುಬಂದಿದ್ದವು. ಅದರಲ್ಲಿ ಆ ಧರ್ಮದ ಬಗ್ಗೆ ಅವಹೇಳನಕಾರಿ ಸಾಲುಗಳನ್ನು ಬರೆಯಲಾಗಿತ್ತು.  ನಮ್ಮ ಗಮನಕ್ಕೆ ಬರುತ್ತಿದ್ದಂತೆ ತನಿಖೆ ಕೈಗೆತ್ತಿಕೊಂಡಿದ್ದಲ್ಲದೆ, ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರ ತಂಡವನ್ನು ರಚಿಸಲಾಗಿತ್ತು. ಒಟ್ಟು ಏಳು ಜನರನ್ನು ಸೆರೆ ಹಿಡಿಯಲಾಗಿದೆ ಎಂದು ಹೇಳಿದ್ದಾರೆ. ಅಂದಹಾಗೇ, ಆರೋಪಿಗಳೆಲ್ಲರೂ ಅಯೋಧ್ಯೆಯವರೇ ಆಗಿದ್ದು, ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾಗ್ಯೂ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಸೆರೆಹಿಡಿಯಲಾದ ಈ ಕಬಾಬ್​ ತಯಾರಕನ ಫೋಟೋಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ; ಭಾರತೀಯ ಛಾಯಾಗ್ರಾಹಕಿಗೆ ಒಲಿದ ಪಿಂಕ್​ ಲೇಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?