ಮದುವೆ ದಿಬ್ಬಣದ ವ್ಯಾನ್​ ಉರುಳಿ 7 ಜನರ ದುರ್ಮರಣ

ತೆಲಂಗಾಣ: ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ತಂಟಿಕೊಂಡ ಬಳಿ ಘೋರ ರಸ್ತೆ ಅಪಘಾತ ಸಂಭವಿಸಿದೆ. ಮದುವೆ ದಿಬ್ಬಣದ ವ್ಯಾನ್​ ಉರುಳಿ 7 ಜನ ಮೃತಪಟ್ಟಿದ್ದಾರೆ. ಜಿಲ್ಲೆಯ ಗೋಕವರಂ ಮಂಡಲದ ತಂಟಿಕೊಂಡ ಘಾಟ್ ರಸ್ತೆಯ ವೆಂಕಟೇಶ್ವರಸ್ವಾಮಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಮದುವೆ ಮುಗಿಸಿಕೊಂಡು ವಾಪಸಾಗುವಾಗ ಬ್ರೇಕ್ ವೈಫಲ್ಯದಿಂದಾಗಿ ತಂಟಿಕೊಂಡ ಬಳಿ ಬೆಟ್ಟದಿಂದ ವ್ಯಾನ್ ಉರುಳಿ ಬಿದ್ದು ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಚಿಕಿತ್ಸೆಗಾಗಿ ರಾಜಮಂಡ್ರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಗೋಕವರಂ […]

ಮದುವೆ ದಿಬ್ಬಣದ ವ್ಯಾನ್​ ಉರುಳಿ 7 ಜನರ ದುರ್ಮರಣ
ಸಾಂದರ್ಭಿಕ ಚಿತ್ರ

Updated on: Oct 30, 2020 | 7:28 AM

ತೆಲಂಗಾಣ: ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ತಂಟಿಕೊಂಡ ಬಳಿ ಘೋರ ರಸ್ತೆ ಅಪಘಾತ ಸಂಭವಿಸಿದೆ. ಮದುವೆ ದಿಬ್ಬಣದ ವ್ಯಾನ್​ ಉರುಳಿ 7 ಜನ ಮೃತಪಟ್ಟಿದ್ದಾರೆ.

ಜಿಲ್ಲೆಯ ಗೋಕವರಂ ಮಂಡಲದ ತಂಟಿಕೊಂಡ ಘಾಟ್ ರಸ್ತೆಯ ವೆಂಕಟೇಶ್ವರಸ್ವಾಮಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಮದುವೆ ಮುಗಿಸಿಕೊಂಡು ವಾಪಸಾಗುವಾಗ ಬ್ರೇಕ್ ವೈಫಲ್ಯದಿಂದಾಗಿ ತಂಟಿಕೊಂಡ ಬಳಿ ಬೆಟ್ಟದಿಂದ ವ್ಯಾನ್ ಉರುಳಿ ಬಿದ್ದು ಈ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಚಿಕಿತ್ಸೆಗಾಗಿ ರಾಜಮಂಡ್ರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಗೋಕವರಂ ವಲಯದ ತಕುರ್ಪಲೆಂ ಗ್ರಾಮಕ್ಕೆ ಸೇರಿದವರು ಎಂದು ಗುರುತಿಸಲಾಗಿದೆ. ಘಟನೆಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಘಟನೆಯ ಪೂರ್ಣ ವಿವರಗಳು ಇನ್ನೂ ತಿಳಿದುಬಂದಿಲ್ಲ.

Follow Us