AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಸಿಕ್​ನಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಬಂಧಿಸಿದ್ದ 7 ಅರ್ಚಕರಿಗೆ ಜಾಮೀನು; ವಾಹನದಿಂದ ಪತ್ತೆಯಾಗಿತ್ತು ಪಿಸ್ತೂಲ್, ಹರಿತವಾದ ಆಯುಧ

ಪೊಲೀಸರು ಅರ್ಚಕರ ವಾಹನವನ್ನು ತಪಾಸಣೆ ನಡೆಸಿದ್ದು, 11 ಗುಂಡುಗಳು, ಕುಡುಗೋಲು, ಚಾಕು ಮುಂತಾದ ಹರಿತವಾದ ಆಯುಧಗಳು, ಹಾಕಿ ಸ್ಟಿಕ್‌ನೊಂದಿಗೆ ಕಂಟ್ರಿಮೇಡ್ ಪಿಸ್ತೂಲ್ ಪತ್ತೆಯಾಗಿದೆ.

ನಾಸಿಕ್​ನಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಬಂಧಿಸಿದ್ದ 7 ಅರ್ಚಕರಿಗೆ ಜಾಮೀನು; ವಾಹನದಿಂದ ಪತ್ತೆಯಾಗಿತ್ತು ಪಿಸ್ತೂಲ್, ಹರಿತವಾದ ಆಯುಧ
ತ್ರಯಂಬಕೇಶ್ವರ ದೇವಸ್ಥಾನದಲ್ಲಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Dec 09, 2021 | 6:05 PM

Share

ನಾಸಿಕ್(ಮಹಾರಾಷ್ಟ್ರ): ನಾಸಿಕ್‌ನಲ್ಲಿ (Nashik) ಇತ್ತೀಚೆಗೆ ಶಸ್ತ್ರಾಸ್ತ್ರ ಕಾಯ್ದೆಯಡಿ( Arms Act) ಬಂಧಿತರಾಗಿದ್ದ ಏಳು ಅರ್ಚಕರನ್ನು ಬುಧವಾರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಪೊಲೀಸರ ಪ್ರಕಾರ, ತ್ರಯಂಬಕೇಶ್ವರ ದೇವಸ್ಥಾನದಲ್ಲಿ (Trimbakeshwar temple) ವಿಶೇಷ ಆಚರಣೆಗಳನ್ನು (ಪೂಜೆ) ನಡೆಸುವ ಬಗ್ಗೆ ಅರ್ಚಕರು ಪರಸ್ಪರ ಜಗಳವಾಡುತ್ತಿದ್ದರು.  ಆಗ ಗಸ್ತು ಪೊಲೀಸರು ಆಗಮಿಸಿ ಜಗಳವನ್ನು ತಡೆಯಲು ಮಧ್ಯಪ್ರವೇಶಿಸಿದರು.  ಪೊಲೀಸರು ಅರ್ಚಕರ ವಾಹನವನ್ನು ತಪಾಸಣೆ ನಡೆಸಿದ್ದು, 11 ಗುಂಡುಗಳು, ಕುಡುಗೋಲು, ಚಾಕು ಮುಂತಾದ ಹರಿತವಾದ ಆಯುಧಗಳು, ಹಾಕಿ ಸ್ಟಿಕ್‌ನೊಂದಿಗೆ ಕಂಟ್ರಿಮೇಡ್ ಪಿಸ್ತೂಲ್ ಪತ್ತೆಯಾಗಿದೆ. ಆಯುಧ ಪತ್ತೆ ಮಾಡಿದ ನಂತರ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದರು ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.  ವಿಶೇಷ ಪೂಜೆಗಳಲ್ಲಿ (ಪ್ರಾರ್ಥನೆಗಳು) ಪಾಲ್ಗೊಳ್ಳಲು ಭಾರತದಾದ್ಯಂತದ ಭಕ್ತರು ತ್ರಯಂಬಕೇಶ್ವರಕ್ಕೆ ಬರುತ್ತಾರೆ. ನಾಸಿಕ್ ನಗರದ ಪಂಚವಟಿ ಪೊಲೀಸ್ ವ್ಯಾಪ್ತಿಯ ಹಿರವಾಡಿ ರಸ್ತೆಯಲ್ಲಿ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಗಸ್ತು ತಿರುಗುತ್ತಿದ್ದ ಪೊಲೀಸರಿಗೆ ಜಗಳದ ಬಗ್ಗೆ ಮಾಹಿತಿ ನೀಡಲಾಗಿತ್ತು.

ಅರ್ಚಕರು ಮಧ್ಯಪ್ರದೇಶದವರಾಗಿದ್ದು, ಪರಸ್ಪರ ಪರಿಚಿತರು. ಅವರು ಹಿರವಾಡಿಯಲ್ಲಿ ವಾಸಿಸುತ್ತಿದ್ದಾರೆ, ಅಲ್ಲಿ ಅವರು ಆಸ್ತಿ ಹೊಂದಿದ್ದಾರೆ. ಈ ಜಗಳ ವೃತ್ತಿಪರ ಪೈಪೋಟಿಗೆ ಸಂಬಂಧಿಸಿದ್ದಾಗಿತ್ತು . ನಾವು ಅವರನ್ನು ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಬಂಧಿಸಿದ್ದು ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದೇವೆ. ಅವರನ್ನು ಮೂರು ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದೇವೆ ಎಂದು ತನಿಖಾಧಿಕಾರಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸುನೀಲ್ ಕಾಸರಾಳೆ ಹೇಳಿದ್ದಾರೆ.

ಆರೋಪಿಗಳನ್ನು ವೀರೇಂದ್ರ ತ್ರಿವೇದಿ, ಆಶಿಶ್ ತ್ರಿವೇದಿ, ಮನೀಶ್ ತ್ರಿವೇದಿ, ಸುನಿಲ್ ತಿವಾರಿ, ಆಕಾಶ್ ತ್ರಿಪಾಠಿ, ಅನಿಕೇತ್ ತಿವಾರಿ ಮತ್ತು ಸಚಿನ್ ಪಾಂಡೆ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:  2021ರಲ್ಲಿ ಸರ್ಕಾರಕ್ಕೆ ಸಂಬಂಧಿಸಿದ ಟ್ವೀಟ್​​ಗಳಲ್ಲಿ ಹೆಚ್ಚು ಮರುಟ್ವೀಟ್ ಆಗಿದ್ದು ಮೋದಿ ಕೊವಿಡ್ ಲಸಿಕೆ ಪಡೆಯುತ್ತಿರುವ ಚಿತ್ರ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ