AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಪಿಯಾನಾದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ; ಹಿಜ್ಬುಲ್ ಮುಜಾಹಿದ್ದೀನ್​ ಉಗ್ರರಿಗೆ ನೆರವು ನೀಡುತ್ತಿದ್ದ 7 ಮಂದಿ ಅರೆಸ್ಟ್

ವಿವಿಧ ಹಳ್ಳಿಗಳಲ್ಲಿ ಕಾರ್ಯಾಚರಣೆ ನಡೆಸಿ, ಅರೆಸ್ಟ್ ಮಾಡಲಾಗಿದೆ. ಈ ಮೂಲಕ ಶೋಪಿಯಾನಾದಲ್ಲಿ ನಿರ್ಮಾಣವಾಗಿದ್ದ ದೊಡ್ಡ ಉಗ್ರಜಾಲವನ್ನು ಬೇಧಿಸಲಾಗಿದೆ ಎಂದು ಸ್ಥಳೀಯ ಪೊಲೀಸ್ ಉನ್ನತ ಅಧಿಕಾರಿ ತಿಳಿಸಿದ್ದಾರೆ.

ಶೋಪಿಯಾನಾದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ; ಹಿಜ್ಬುಲ್ ಮುಜಾಹಿದ್ದೀನ್​ ಉಗ್ರರಿಗೆ ನೆರವು ನೀಡುತ್ತಿದ್ದ 7 ಮಂದಿ ಅರೆಸ್ಟ್
ಭದ್ರತಾ ಪಡೆ(ಪ್ರಾತಿನಿಧಿಕ ಚಿತ್ರ)
Lakshmi Hegde
|

Updated on:Apr 09, 2021 | 8:27 AM

Share

ಶ್ರೀನಗರ: ಭಯೋತ್ಪಾದಕರಿಗೆ ಹಣಕಾಸು, ಪ್ರಯಾಣ, ಆಶ್ರಯ ಸೇರಿ ವಿವಿಧ ರೀತಿಯಲ್ಲಿ ನೆರವು ನೀಡುತ್ತಿದ್ದ ಏಳು ಮಂದಿಯನ್ನು ಭದ್ರತಾ ಪಡೆಗಳು ಅರೆಸ್ಟ್ ಮಾಡಿವೆ. ದಕ್ಷಿಣ ಕಾಶ್ಮೀರದ ಶೋಪಿಯಾನಾ ಜಿಲ್ಲೆಯ ವಿವಿಧ ಭಾಗಗಳಿಂದ ಇವರೆನ್ನೆಲ್ಲ ವಶಕ್ಕೆ ಪಡೆಯಲಾಗಿದ್ದು, ಅವರಿಂದ ವಿವಿಧ ಶಸ್ತ್ರಾಸ್ತ್ರಗಳನ್ನೂ ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪೊಲೀಸರು ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಶೋಪಿಯಾನಾದ ವಿವಿಧೆಡೆ ನಾಕಾ ಚೆಕ್​ ಮಾಡಲಾಗುತ್ತಿತ್ತು. ಈ ವೇಳೆ 7 ಮಂದಿ ಭಯೋತ್ಪಾದಕ ಸಹಚರರನ್ನು ಬಂಧಿಸಲಾಗಿದೆ. ಅವರ ಬಳಿ ಇದ್ದ ಗ್ರೆನೇಡ್​ ಸೇರಿ ವಿವಿಧ ರೀತಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಸಮಿಯುಲ್ಲಾ ಫಾರೂಕ್​ ಚೋಪಾನ್​, ಹಿಲಾಲ್ ಅಹ್ಮದ್ ವಾನಿ, ರಮೀಜ್​ ವಾನಿ, ರೌಫ್​ ಅಹ್ಮದ್ ವಾನಿ, ಜಹೀದ್​ ಹುಸ್ಸೇನ್​ ವಾನಿ, ಫೈಜಾನ್​ ಅಹ್ಮದ್​ ಖಾನ್​, ಶಾಹೀದ್​ ಅಹ್ಮದ್​ ರಾಥರ್ ಬಂಧಿತರಾಗಿದ್ದು, ಇವರೆಲ್ಲ ಹಿಜ್ಬುಲ್ ಮುಜಾಹಿದ್ದೀನ್​ ಉಗ್ರಸಂಘಟನೆಗೆ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇವರನ್ನೆಲ್ಲ ಒಂದೇ ಏರಿಯಾದಲ್ಲಿ ಬಂಧಿಸಿಲ್ಲ. ವಿವಿಧ ಹಳ್ಳಿಗಳಲ್ಲಿ ಕಾರ್ಯಾಚರಣೆ ನಡೆಸಿ, ಅರೆಸ್ಟ್ ಮಾಡಲಾಗಿದೆ. ಈ ಮೂಲಕ ಶೋಪಿಯಾನಾದಲ್ಲಿ ನಿರ್ಮಾಣವಾಗಿದ್ದ ದೊಡ್ಡ ಉಗ್ರಜಾಲವನ್ನು ಬೇಧಿಸಲಾಗಿದೆ ಎಂದು ಸ್ಥಳೀಯ ಪೊಲೀಸ್ ಉನ್ನತ ಅಧಿಕಾರಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ: ವಾಟ್ಸಾಪ್‌, ಟೆಲಿಗ್ರಾಮ್, ಸಿಗ್ನಲ್‌ ಆ್ಯಪ್​ಗಿಂತ ಸುಧಾರಿತವಾದ ಆ್ಯಪ್​ ಬಳಸ್ತಿದ್ದಾರೆ ಉಗ್ರರು; IP ವಿಳಾಸವೂ ಇರುವುದಿಲ್ಲ! NIA ತನಿಖೆಯಿಂದ ಬಹಿರಂಗ

ಬಾಲ್​ಕೋಟ್​ ದಾಳಿಯಲ್ಲಿ 300ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

ಲಷ್ಕರ್​ ಇ ತೈಬಾ ಮುಖ್ಯಸ್ಥ ಹಫೀಜ್​ ಸೈಯದ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

Published On - 11:54 am, Sat, 13 March 21

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ