Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಪಿಯಾನಾದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ; ಹಿಜ್ಬುಲ್ ಮುಜಾಹಿದ್ದೀನ್​ ಉಗ್ರರಿಗೆ ನೆರವು ನೀಡುತ್ತಿದ್ದ 7 ಮಂದಿ ಅರೆಸ್ಟ್

ವಿವಿಧ ಹಳ್ಳಿಗಳಲ್ಲಿ ಕಾರ್ಯಾಚರಣೆ ನಡೆಸಿ, ಅರೆಸ್ಟ್ ಮಾಡಲಾಗಿದೆ. ಈ ಮೂಲಕ ಶೋಪಿಯಾನಾದಲ್ಲಿ ನಿರ್ಮಾಣವಾಗಿದ್ದ ದೊಡ್ಡ ಉಗ್ರಜಾಲವನ್ನು ಬೇಧಿಸಲಾಗಿದೆ ಎಂದು ಸ್ಥಳೀಯ ಪೊಲೀಸ್ ಉನ್ನತ ಅಧಿಕಾರಿ ತಿಳಿಸಿದ್ದಾರೆ.

ಶೋಪಿಯಾನಾದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ; ಹಿಜ್ಬುಲ್ ಮುಜಾಹಿದ್ದೀನ್​ ಉಗ್ರರಿಗೆ ನೆರವು ನೀಡುತ್ತಿದ್ದ 7 ಮಂದಿ ಅರೆಸ್ಟ್
ಭದ್ರತಾ ಪಡೆ(ಪ್ರಾತಿನಿಧಿಕ ಚಿತ್ರ)
Follow us
Lakshmi Hegde
|

Updated on:Apr 09, 2021 | 8:27 AM

ಶ್ರೀನಗರ: ಭಯೋತ್ಪಾದಕರಿಗೆ ಹಣಕಾಸು, ಪ್ರಯಾಣ, ಆಶ್ರಯ ಸೇರಿ ವಿವಿಧ ರೀತಿಯಲ್ಲಿ ನೆರವು ನೀಡುತ್ತಿದ್ದ ಏಳು ಮಂದಿಯನ್ನು ಭದ್ರತಾ ಪಡೆಗಳು ಅರೆಸ್ಟ್ ಮಾಡಿವೆ. ದಕ್ಷಿಣ ಕಾಶ್ಮೀರದ ಶೋಪಿಯಾನಾ ಜಿಲ್ಲೆಯ ವಿವಿಧ ಭಾಗಗಳಿಂದ ಇವರೆನ್ನೆಲ್ಲ ವಶಕ್ಕೆ ಪಡೆಯಲಾಗಿದ್ದು, ಅವರಿಂದ ವಿವಿಧ ಶಸ್ತ್ರಾಸ್ತ್ರಗಳನ್ನೂ ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪೊಲೀಸರು ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಶೋಪಿಯಾನಾದ ವಿವಿಧೆಡೆ ನಾಕಾ ಚೆಕ್​ ಮಾಡಲಾಗುತ್ತಿತ್ತು. ಈ ವೇಳೆ 7 ಮಂದಿ ಭಯೋತ್ಪಾದಕ ಸಹಚರರನ್ನು ಬಂಧಿಸಲಾಗಿದೆ. ಅವರ ಬಳಿ ಇದ್ದ ಗ್ರೆನೇಡ್​ ಸೇರಿ ವಿವಿಧ ರೀತಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಸಮಿಯುಲ್ಲಾ ಫಾರೂಕ್​ ಚೋಪಾನ್​, ಹಿಲಾಲ್ ಅಹ್ಮದ್ ವಾನಿ, ರಮೀಜ್​ ವಾನಿ, ರೌಫ್​ ಅಹ್ಮದ್ ವಾನಿ, ಜಹೀದ್​ ಹುಸ್ಸೇನ್​ ವಾನಿ, ಫೈಜಾನ್​ ಅಹ್ಮದ್​ ಖಾನ್​, ಶಾಹೀದ್​ ಅಹ್ಮದ್​ ರಾಥರ್ ಬಂಧಿತರಾಗಿದ್ದು, ಇವರೆಲ್ಲ ಹಿಜ್ಬುಲ್ ಮುಜಾಹಿದ್ದೀನ್​ ಉಗ್ರಸಂಘಟನೆಗೆ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇವರನ್ನೆಲ್ಲ ಒಂದೇ ಏರಿಯಾದಲ್ಲಿ ಬಂಧಿಸಿಲ್ಲ. ವಿವಿಧ ಹಳ್ಳಿಗಳಲ್ಲಿ ಕಾರ್ಯಾಚರಣೆ ನಡೆಸಿ, ಅರೆಸ್ಟ್ ಮಾಡಲಾಗಿದೆ. ಈ ಮೂಲಕ ಶೋಪಿಯಾನಾದಲ್ಲಿ ನಿರ್ಮಾಣವಾಗಿದ್ದ ದೊಡ್ಡ ಉಗ್ರಜಾಲವನ್ನು ಬೇಧಿಸಲಾಗಿದೆ ಎಂದು ಸ್ಥಳೀಯ ಪೊಲೀಸ್ ಉನ್ನತ ಅಧಿಕಾರಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ: ವಾಟ್ಸಾಪ್‌, ಟೆಲಿಗ್ರಾಮ್, ಸಿಗ್ನಲ್‌ ಆ್ಯಪ್​ಗಿಂತ ಸುಧಾರಿತವಾದ ಆ್ಯಪ್​ ಬಳಸ್ತಿದ್ದಾರೆ ಉಗ್ರರು; IP ವಿಳಾಸವೂ ಇರುವುದಿಲ್ಲ! NIA ತನಿಖೆಯಿಂದ ಬಹಿರಂಗ

ಬಾಲ್​ಕೋಟ್​ ದಾಳಿಯಲ್ಲಿ 300ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

ಲಷ್ಕರ್​ ಇ ತೈಬಾ ಮುಖ್ಯಸ್ಥ ಹಫೀಜ್​ ಸೈಯದ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

Published On - 11:54 am, Sat, 13 March 21

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್