AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಪಿಯಾನಾದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ; ಹಿಜ್ಬುಲ್ ಮುಜಾಹಿದ್ದೀನ್​ ಉಗ್ರರಿಗೆ ನೆರವು ನೀಡುತ್ತಿದ್ದ 7 ಮಂದಿ ಅರೆಸ್ಟ್

ವಿವಿಧ ಹಳ್ಳಿಗಳಲ್ಲಿ ಕಾರ್ಯಾಚರಣೆ ನಡೆಸಿ, ಅರೆಸ್ಟ್ ಮಾಡಲಾಗಿದೆ. ಈ ಮೂಲಕ ಶೋಪಿಯಾನಾದಲ್ಲಿ ನಿರ್ಮಾಣವಾಗಿದ್ದ ದೊಡ್ಡ ಉಗ್ರಜಾಲವನ್ನು ಬೇಧಿಸಲಾಗಿದೆ ಎಂದು ಸ್ಥಳೀಯ ಪೊಲೀಸ್ ಉನ್ನತ ಅಧಿಕಾರಿ ತಿಳಿಸಿದ್ದಾರೆ.

ಶೋಪಿಯಾನಾದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ; ಹಿಜ್ಬುಲ್ ಮುಜಾಹಿದ್ದೀನ್​ ಉಗ್ರರಿಗೆ ನೆರವು ನೀಡುತ್ತಿದ್ದ 7 ಮಂದಿ ಅರೆಸ್ಟ್
ಭದ್ರತಾ ಪಡೆ(ಪ್ರಾತಿನಿಧಿಕ ಚಿತ್ರ)
Lakshmi Hegde
|

Updated on:Apr 09, 2021 | 8:27 AM

Share

ಶ್ರೀನಗರ: ಭಯೋತ್ಪಾದಕರಿಗೆ ಹಣಕಾಸು, ಪ್ರಯಾಣ, ಆಶ್ರಯ ಸೇರಿ ವಿವಿಧ ರೀತಿಯಲ್ಲಿ ನೆರವು ನೀಡುತ್ತಿದ್ದ ಏಳು ಮಂದಿಯನ್ನು ಭದ್ರತಾ ಪಡೆಗಳು ಅರೆಸ್ಟ್ ಮಾಡಿವೆ. ದಕ್ಷಿಣ ಕಾಶ್ಮೀರದ ಶೋಪಿಯಾನಾ ಜಿಲ್ಲೆಯ ವಿವಿಧ ಭಾಗಗಳಿಂದ ಇವರೆನ್ನೆಲ್ಲ ವಶಕ್ಕೆ ಪಡೆಯಲಾಗಿದ್ದು, ಅವರಿಂದ ವಿವಿಧ ಶಸ್ತ್ರಾಸ್ತ್ರಗಳನ್ನೂ ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪೊಲೀಸರು ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಶೋಪಿಯಾನಾದ ವಿವಿಧೆಡೆ ನಾಕಾ ಚೆಕ್​ ಮಾಡಲಾಗುತ್ತಿತ್ತು. ಈ ವೇಳೆ 7 ಮಂದಿ ಭಯೋತ್ಪಾದಕ ಸಹಚರರನ್ನು ಬಂಧಿಸಲಾಗಿದೆ. ಅವರ ಬಳಿ ಇದ್ದ ಗ್ರೆನೇಡ್​ ಸೇರಿ ವಿವಿಧ ರೀತಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಸಮಿಯುಲ್ಲಾ ಫಾರೂಕ್​ ಚೋಪಾನ್​, ಹಿಲಾಲ್ ಅಹ್ಮದ್ ವಾನಿ, ರಮೀಜ್​ ವಾನಿ, ರೌಫ್​ ಅಹ್ಮದ್ ವಾನಿ, ಜಹೀದ್​ ಹುಸ್ಸೇನ್​ ವಾನಿ, ಫೈಜಾನ್​ ಅಹ್ಮದ್​ ಖಾನ್​, ಶಾಹೀದ್​ ಅಹ್ಮದ್​ ರಾಥರ್ ಬಂಧಿತರಾಗಿದ್ದು, ಇವರೆಲ್ಲ ಹಿಜ್ಬುಲ್ ಮುಜಾಹಿದ್ದೀನ್​ ಉಗ್ರಸಂಘಟನೆಗೆ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇವರನ್ನೆಲ್ಲ ಒಂದೇ ಏರಿಯಾದಲ್ಲಿ ಬಂಧಿಸಿಲ್ಲ. ವಿವಿಧ ಹಳ್ಳಿಗಳಲ್ಲಿ ಕಾರ್ಯಾಚರಣೆ ನಡೆಸಿ, ಅರೆಸ್ಟ್ ಮಾಡಲಾಗಿದೆ. ಈ ಮೂಲಕ ಶೋಪಿಯಾನಾದಲ್ಲಿ ನಿರ್ಮಾಣವಾಗಿದ್ದ ದೊಡ್ಡ ಉಗ್ರಜಾಲವನ್ನು ಬೇಧಿಸಲಾಗಿದೆ ಎಂದು ಸ್ಥಳೀಯ ಪೊಲೀಸ್ ಉನ್ನತ ಅಧಿಕಾರಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ: ವಾಟ್ಸಾಪ್‌, ಟೆಲಿಗ್ರಾಮ್, ಸಿಗ್ನಲ್‌ ಆ್ಯಪ್​ಗಿಂತ ಸುಧಾರಿತವಾದ ಆ್ಯಪ್​ ಬಳಸ್ತಿದ್ದಾರೆ ಉಗ್ರರು; IP ವಿಳಾಸವೂ ಇರುವುದಿಲ್ಲ! NIA ತನಿಖೆಯಿಂದ ಬಹಿರಂಗ

ಬಾಲ್​ಕೋಟ್​ ದಾಳಿಯಲ್ಲಿ 300ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

ಲಷ್ಕರ್​ ಇ ತೈಬಾ ಮುಖ್ಯಸ್ಥ ಹಫೀಜ್​ ಸೈಯದ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

Published On - 11:54 am, Sat, 13 March 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ