AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂನಲ್ಲಿ ಭದ್ರತಾ ಪಡೆಗಳ ದಾಳಿಗೆ ಡಿಎನ್​​ಎಲ್​​ಎ ಸಂಘಟನೆಯ 7 ಉಗ್ರರು ಬಲಿ..

ಎನ್​ಕೌಂಟರ್​​ನಲ್ಲಿ ಡಿಎನ್​​ಎಲ್​ಎ ಉಗ್ರರು ಸಾವನ್ನಪ್ಪಿದ್ದಾರೆ. ಸಂಘಟನೆಯ ಇಬ್ಬರು ಮುಖಂಡರು ತೀವ್ರವಾಗಿ ಗಾಯಗೊಂಡಿದ್ದರ ಬಗ್ಗೆಯೂ ಮಾಹಿತಿ ಸಿಕ್ಕಿದೆ.

ಅಸ್ಸಾಂನಲ್ಲಿ ಭದ್ರತಾ ಪಡೆಗಳ ದಾಳಿಗೆ ಡಿಎನ್​​ಎಲ್​​ಎ ಸಂಘಟನೆಯ 7 ಉಗ್ರರು ಬಲಿ..
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 23, 2021 | 3:31 PM

Share

ದಿಫು: ಇಲ್ಲಿನ ಪಶ್ಚಿಮ ಕರ್ಬಿ ಅಂಗ್ಲಾಂಗ್​ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ದಾಳಿಗೆ ದೀಮಾಸ ನ್ಯಾಷನಲ್​ ಲಿಬರೇಶನ್​ ಆರ್ಮಿ (DNLA)ಸಂಘಟನೆಯ ಸುಮಾರು 7 ಉಗ್ರರು ಮೃತಪಟ್ಟಿದ್ದಾರೆ. ಅಸ್ಸಾಂ-ನಾಗಾಲ್ಯಾಂಡ್​ ಗಡಿ ಭಾಗದಲ್ಲಿ ಎನ್​ಕೌಂಟರ್​ ನಡೆದಿತ್ತು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತ ಉಗ್ರರಿಂದ ಎಕೆ 47 ಸೇರಿ, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪಶ್ಚಿಮ ಕರ್ಬಿ ಆಂಗ್ಲಾಂಗ್​ ಪ್ರದೇಶದಲ್ಲಿ ಡಿಎನ್​ಎಲ್​ಎ ಸಂಘಟನೆಯ ಇನ್ನಷ್ಟು ಉಗ್ರರು ಇರುವ ಬಗ್ಗೆ ಮಾಹಿತಿ ಇದ್ದು, ಅವರ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದೆ ಎಂದೂ ಅಧಿಕಾರಿ ಹೇಳಿದ್ದಾರೆ.

ಡಿಎನ್​ಎಲ್​ಎ ಉಗ್ರರು ಸಾವನ್ನಪ್ಪಿರುವ ಬಗ್ಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ ಕೂಡ ಪ್ರತಿಕ್ರಿಯೆ ನೀಡಿದ್ದು, ಎನ್​ಕೌಂಟರ್​​ನಲ್ಲಿ ಡಿಎನ್​​ಎಲ್​ಎ ಉಗ್ರರು ಸಾವನ್ನಪ್ಪಿದ್ದಾರೆ. ಸಂಘಟನೆಯ ಇಬ್ಬರು ಮುಖಂಡರು ತೀವ್ರವಾಗಿ ಗಾಯಗೊಂಡಿದ್ದರ ಬಗ್ಗೆಯೂ ಮಾಹಿತಿ ಸಿಕ್ಕಿದೆ ಎಂದು ಹೇಳಿದ್ದಾರೆ.

ಗುಪ್ತಚರ ದಳದ ಮಾಹಿತಿಯ ಮೇರೆಗೆ ಜಿಲ್ಲಾ ಪೊಲೀಸ್​ ತಂಡ ಮತ್ತು ಅಸ್ಸಾಂ ರೈಫಲ್ಸ್​ ಸಿಬ್ಬಂದಿ ಸೇರಿ ಜಂಟಿ ಕಾರ್ಯಾಚರಣೆ ನಡೆಸಿದ್ದರು. ಪಶ್ಚಿಮ ಕರ್ಬಿ ಅಂಗ್ಲಾಂಗ್​ ಜಿಲ್ಲೆಯ ಎಎಸ್​​ಪಿ ಪ್ರಕಾಶ್​ ಸೋನೋವಾಲ್​ ನೇತೃತ್ವ ವಹಿಸಿದ್ದರು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಮೇ 14ರಂದು ಅಸ್ಸಾಂನ ತಿನ್ಸುಕಿಯಾದಲ್ಲಿ ಈ ಸಂಘಟನೆಯ ಉಗ್ರರು ನಡೆಸಿದ್ದ ಗ್ರೆನೇಡ್​ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದರು.

ಇದನ್ನೂ ಓದಿ: ತೋಟದಲ್ಲೇ ಬಾಡುತ್ತಿದೆ ಮಾವು; 1983 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಹಣ್ಣಿಗೆ ಬೆಲೆ ಸಿಗದೆ ರೈತರು ಕಂಗಾಲು

Corona Warrior : ನಿಮ್ಮ ಧ್ವನಿಗೆ ನಮ್ಮ ಧ್ವನಿಯೂ : 85ರ ಅಜ್ಜಿಯ ನಗುವೂ ಮತ್ತು ಬೆಡ್​ ಒಂದರ ಕಥೆಯೂ

Seven terrorists of Dimasa National Liberation Army Terrorists Killed By Security Forces in Assam

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್