AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂನಲ್ಲಿ ಭದ್ರತಾ ಪಡೆಗಳ ದಾಳಿಗೆ ಡಿಎನ್​​ಎಲ್​​ಎ ಸಂಘಟನೆಯ 7 ಉಗ್ರರು ಬಲಿ..

ಎನ್​ಕೌಂಟರ್​​ನಲ್ಲಿ ಡಿಎನ್​​ಎಲ್​ಎ ಉಗ್ರರು ಸಾವನ್ನಪ್ಪಿದ್ದಾರೆ. ಸಂಘಟನೆಯ ಇಬ್ಬರು ಮುಖಂಡರು ತೀವ್ರವಾಗಿ ಗಾಯಗೊಂಡಿದ್ದರ ಬಗ್ಗೆಯೂ ಮಾಹಿತಿ ಸಿಕ್ಕಿದೆ.

ಅಸ್ಸಾಂನಲ್ಲಿ ಭದ್ರತಾ ಪಡೆಗಳ ದಾಳಿಗೆ ಡಿಎನ್​​ಎಲ್​​ಎ ಸಂಘಟನೆಯ 7 ಉಗ್ರರು ಬಲಿ..
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 23, 2021 | 3:31 PM

Share

ದಿಫು: ಇಲ್ಲಿನ ಪಶ್ಚಿಮ ಕರ್ಬಿ ಅಂಗ್ಲಾಂಗ್​ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ದಾಳಿಗೆ ದೀಮಾಸ ನ್ಯಾಷನಲ್​ ಲಿಬರೇಶನ್​ ಆರ್ಮಿ (DNLA)ಸಂಘಟನೆಯ ಸುಮಾರು 7 ಉಗ್ರರು ಮೃತಪಟ್ಟಿದ್ದಾರೆ. ಅಸ್ಸಾಂ-ನಾಗಾಲ್ಯಾಂಡ್​ ಗಡಿ ಭಾಗದಲ್ಲಿ ಎನ್​ಕೌಂಟರ್​ ನಡೆದಿತ್ತು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತ ಉಗ್ರರಿಂದ ಎಕೆ 47 ಸೇರಿ, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪಶ್ಚಿಮ ಕರ್ಬಿ ಆಂಗ್ಲಾಂಗ್​ ಪ್ರದೇಶದಲ್ಲಿ ಡಿಎನ್​ಎಲ್​ಎ ಸಂಘಟನೆಯ ಇನ್ನಷ್ಟು ಉಗ್ರರು ಇರುವ ಬಗ್ಗೆ ಮಾಹಿತಿ ಇದ್ದು, ಅವರ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದೆ ಎಂದೂ ಅಧಿಕಾರಿ ಹೇಳಿದ್ದಾರೆ.

ಡಿಎನ್​ಎಲ್​ಎ ಉಗ್ರರು ಸಾವನ್ನಪ್ಪಿರುವ ಬಗ್ಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ ಕೂಡ ಪ್ರತಿಕ್ರಿಯೆ ನೀಡಿದ್ದು, ಎನ್​ಕೌಂಟರ್​​ನಲ್ಲಿ ಡಿಎನ್​​ಎಲ್​ಎ ಉಗ್ರರು ಸಾವನ್ನಪ್ಪಿದ್ದಾರೆ. ಸಂಘಟನೆಯ ಇಬ್ಬರು ಮುಖಂಡರು ತೀವ್ರವಾಗಿ ಗಾಯಗೊಂಡಿದ್ದರ ಬಗ್ಗೆಯೂ ಮಾಹಿತಿ ಸಿಕ್ಕಿದೆ ಎಂದು ಹೇಳಿದ್ದಾರೆ.

ಗುಪ್ತಚರ ದಳದ ಮಾಹಿತಿಯ ಮೇರೆಗೆ ಜಿಲ್ಲಾ ಪೊಲೀಸ್​ ತಂಡ ಮತ್ತು ಅಸ್ಸಾಂ ರೈಫಲ್ಸ್​ ಸಿಬ್ಬಂದಿ ಸೇರಿ ಜಂಟಿ ಕಾರ್ಯಾಚರಣೆ ನಡೆಸಿದ್ದರು. ಪಶ್ಚಿಮ ಕರ್ಬಿ ಅಂಗ್ಲಾಂಗ್​ ಜಿಲ್ಲೆಯ ಎಎಸ್​​ಪಿ ಪ್ರಕಾಶ್​ ಸೋನೋವಾಲ್​ ನೇತೃತ್ವ ವಹಿಸಿದ್ದರು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಮೇ 14ರಂದು ಅಸ್ಸಾಂನ ತಿನ್ಸುಕಿಯಾದಲ್ಲಿ ಈ ಸಂಘಟನೆಯ ಉಗ್ರರು ನಡೆಸಿದ್ದ ಗ್ರೆನೇಡ್​ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದರು.

ಇದನ್ನೂ ಓದಿ: ತೋಟದಲ್ಲೇ ಬಾಡುತ್ತಿದೆ ಮಾವು; 1983 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಹಣ್ಣಿಗೆ ಬೆಲೆ ಸಿಗದೆ ರೈತರು ಕಂಗಾಲು

Corona Warrior : ನಿಮ್ಮ ಧ್ವನಿಗೆ ನಮ್ಮ ಧ್ವನಿಯೂ : 85ರ ಅಜ್ಜಿಯ ನಗುವೂ ಮತ್ತು ಬೆಡ್​ ಒಂದರ ಕಥೆಯೂ

Seven terrorists of Dimasa National Liberation Army Terrorists Killed By Security Forces in Assam

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!