AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ ಜೆಡಿಯುನಲ್ಲಿ ಅಸಮಾಧಾನ: ಶೀಘ್ರ 17 ಶಾಸಕರು ಆರ್​ಜೆಡಿಗೆ ಸೇರ್ಪಡೆ?

ಈ ಮೊದಲು ಜೆಡಿಯುನ ಪ್ರಧಾನ ಕಾರ್ಯದರ್ಶಿ ಆಗಿದ್ದ ಶ್ಯಾಮ್​ ರಜಾಕ್​ ಇತ್ತೀಚೆಗೆ ಆರ್​ಜೆಡಿ ಸೇರ್ಪಡೆ ಆಗಿದ್ದರು. ಅವರು ಬುಧವಾರ ಈ ರೀತಿಯ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಬಿಹಾರ ಜೆಡಿಯುನಲ್ಲಿ ಅಸಮಾಧಾನ: ಶೀಘ್ರ 17 ಶಾಸಕರು ಆರ್​ಜೆಡಿಗೆ ಸೇರ್ಪಡೆ?
ಬಿಹಾರ ಸಿಎಂ ನಿತೀಶ್​ ಕುಮಾರ್
ರಾಜೇಶ್ ದುಗ್ಗುಮನೆ
|

Updated on:Dec 30, 2020 | 6:26 PM

Share

ಪಾಟ್ನಾ: ಅರುಣಾಚಲ ಪ್ರದೇಶದಲ್ಲಿ ಆರು ಜೆಡಿಯು ಶಾಸಕರು ಬಿಜೆಪಿ ಸೇರಿದ್ದ ವಿಚಾರ ಬಿಹಾರ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಬಿಹಾರದಲ್ಲಿ ಆಡಳಿತ ನಡೆಸುತ್ತಿರುವ ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರದ ನಡುವೆ ಶೀತಲ ಸಮರಕ್ಕೂ ಕಾರಣವಾಗಿದೆ. ಈ ಮಧ್ಯೆ ಬಿಹಾರದಲ್ಲಿ 17 ಜೆಡಿಯು ಶಾಸಕರು ಪಕ್ಷ ಬದಲಿಸಲು ಸಿದ್ಧರಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

ಈ ಮೊದಲು ಜೆಡಿಯುನ ಪ್ರಧಾನ ಕಾರ್ಯದರ್ಶಿ ಆಗಿದ್ದ ಶ್ಯಾಮ್​ ರಜಾಕ್​ ಇತ್ತೀಚೆಗೆ ಆರ್​ಜೆಡಿ ಸೇರ್ಪಡೆ ಆಗಿದ್ದರು. ಅವರು ಬುಧವಾರ ಈ ರೀತಿಯ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಜೆಡಿಯುನ ಸಾಕಷ್ಟು ಶಾಸಕರು ಅಸಮಾಧಾನಗೊಂಡಿದ್ದಾರೆ. ಹೀಗಾಗಿ, ಅವರ ಪಕ್ಷದ 17 ಶಾಸಕರು ನಮ್ಮ ಪಕ್ಷಕ್ಕೆ ಬರಲು ಸಿದ್ಧರಿದ್ದಾರೆ. ಇನ್ನೂ ಕೆಲ ಶಾಸಕರು ಈ ಬಣ ಸೇರಿಕೊಳ್ಳಲಿದ್ದಾರೆ. ಹೀಗಾಗಿ, ಈ ಪ್ರಕ್ರಿಯೆ ನಿಂತಿದೆ ಎನ್ನುವ ಮೂಲಕ ಹೊಸ ಬಾಂಬ್​ ಹಾಕಿದ್ದಾರೆ.

ಅರುಣಾಚಲ ಪ್ರದೇಶ ವಿಧಾನಸಭೆಯ 7 ಜೆಡಿಯು ಶಾಸಕರ ಪೈಕಿ ಆರು ಮಂದಿ ಬಿಜೆಪಿಗೆ ಪಕ್ಷಾಂತರ ಮಾಡಿದ್ದರು. 60 ಸದಸ್ಯರಿರುವ ಅರುಣಾಚಲ ಪ್ರದೇಶದಲ್ಲಿ ಜೆಡಿಯು 7 ಸ್ಥಾನಗಳನ್ನು ಗೆದ್ದಿತ್ತು. ಈ ಪೈಕಿ ಆರು ಶಾಸಕರು ಬಿಜೆಪಿ ಸೇರಿದ್ದರು. ಹೀಗಾಗಿ, ಪಕ್ಷಾಂತರ ಕಾಯ್ದೆ ಕೂಡ ಇದಕ್ಕೆ ಅನ್ವಯ ಆಗಿರಲಿಲ್ಲ. ಇನ್ನು, ಈ ಬೆಳವಣಿಗೆ ಬೆನ್ನಲ್ಲೇ ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಮುಖ್ಯಮಂತ್ರಿ ನಿತೀಶ್​ ಕುಮಾರ್​ ರಾಜೀನಾಮೆ ನೀಡಿದ್ದರು.

ಅರುಣಾಚಲದಲ್ಲಿ ಜೆಡಿಯು ಶಾಸಕರ ಪಕ್ಷಾಂತರಕ್ಕೂ ಬಿಹಾರ ಮೈತ್ರಿಕೂಟಕ್ಕೂ ಸಂಬಂಧವಿಲ್ಲ: ಸುಶೀಲ್ ಕುಮಾರ್ ಮೋದಿ

Published On - 6:19 pm, Wed, 30 December 20

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ