AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ ಜೆಡಿಯುನಲ್ಲಿ ಅಸಮಾಧಾನ: ಶೀಘ್ರ 17 ಶಾಸಕರು ಆರ್​ಜೆಡಿಗೆ ಸೇರ್ಪಡೆ?

ಈ ಮೊದಲು ಜೆಡಿಯುನ ಪ್ರಧಾನ ಕಾರ್ಯದರ್ಶಿ ಆಗಿದ್ದ ಶ್ಯಾಮ್​ ರಜಾಕ್​ ಇತ್ತೀಚೆಗೆ ಆರ್​ಜೆಡಿ ಸೇರ್ಪಡೆ ಆಗಿದ್ದರು. ಅವರು ಬುಧವಾರ ಈ ರೀತಿಯ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಬಿಹಾರ ಜೆಡಿಯುನಲ್ಲಿ ಅಸಮಾಧಾನ: ಶೀಘ್ರ 17 ಶಾಸಕರು ಆರ್​ಜೆಡಿಗೆ ಸೇರ್ಪಡೆ?
ಬಿಹಾರ ಸಿಎಂ ನಿತೀಶ್​ ಕುಮಾರ್
ರಾಜೇಶ್ ದುಗ್ಗುಮನೆ
|

Updated on:Dec 30, 2020 | 6:26 PM

Share

ಪಾಟ್ನಾ: ಅರುಣಾಚಲ ಪ್ರದೇಶದಲ್ಲಿ ಆರು ಜೆಡಿಯು ಶಾಸಕರು ಬಿಜೆಪಿ ಸೇರಿದ್ದ ವಿಚಾರ ಬಿಹಾರ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಬಿಹಾರದಲ್ಲಿ ಆಡಳಿತ ನಡೆಸುತ್ತಿರುವ ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರದ ನಡುವೆ ಶೀತಲ ಸಮರಕ್ಕೂ ಕಾರಣವಾಗಿದೆ. ಈ ಮಧ್ಯೆ ಬಿಹಾರದಲ್ಲಿ 17 ಜೆಡಿಯು ಶಾಸಕರು ಪಕ್ಷ ಬದಲಿಸಲು ಸಿದ್ಧರಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

ಈ ಮೊದಲು ಜೆಡಿಯುನ ಪ್ರಧಾನ ಕಾರ್ಯದರ್ಶಿ ಆಗಿದ್ದ ಶ್ಯಾಮ್​ ರಜಾಕ್​ ಇತ್ತೀಚೆಗೆ ಆರ್​ಜೆಡಿ ಸೇರ್ಪಡೆ ಆಗಿದ್ದರು. ಅವರು ಬುಧವಾರ ಈ ರೀತಿಯ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಜೆಡಿಯುನ ಸಾಕಷ್ಟು ಶಾಸಕರು ಅಸಮಾಧಾನಗೊಂಡಿದ್ದಾರೆ. ಹೀಗಾಗಿ, ಅವರ ಪಕ್ಷದ 17 ಶಾಸಕರು ನಮ್ಮ ಪಕ್ಷಕ್ಕೆ ಬರಲು ಸಿದ್ಧರಿದ್ದಾರೆ. ಇನ್ನೂ ಕೆಲ ಶಾಸಕರು ಈ ಬಣ ಸೇರಿಕೊಳ್ಳಲಿದ್ದಾರೆ. ಹೀಗಾಗಿ, ಈ ಪ್ರಕ್ರಿಯೆ ನಿಂತಿದೆ ಎನ್ನುವ ಮೂಲಕ ಹೊಸ ಬಾಂಬ್​ ಹಾಕಿದ್ದಾರೆ.

ಅರುಣಾಚಲ ಪ್ರದೇಶ ವಿಧಾನಸಭೆಯ 7 ಜೆಡಿಯು ಶಾಸಕರ ಪೈಕಿ ಆರು ಮಂದಿ ಬಿಜೆಪಿಗೆ ಪಕ್ಷಾಂತರ ಮಾಡಿದ್ದರು. 60 ಸದಸ್ಯರಿರುವ ಅರುಣಾಚಲ ಪ್ರದೇಶದಲ್ಲಿ ಜೆಡಿಯು 7 ಸ್ಥಾನಗಳನ್ನು ಗೆದ್ದಿತ್ತು. ಈ ಪೈಕಿ ಆರು ಶಾಸಕರು ಬಿಜೆಪಿ ಸೇರಿದ್ದರು. ಹೀಗಾಗಿ, ಪಕ್ಷಾಂತರ ಕಾಯ್ದೆ ಕೂಡ ಇದಕ್ಕೆ ಅನ್ವಯ ಆಗಿರಲಿಲ್ಲ. ಇನ್ನು, ಈ ಬೆಳವಣಿಗೆ ಬೆನ್ನಲ್ಲೇ ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಮುಖ್ಯಮಂತ್ರಿ ನಿತೀಶ್​ ಕುಮಾರ್​ ರಾಜೀನಾಮೆ ನೀಡಿದ್ದರು.

ಅರುಣಾಚಲದಲ್ಲಿ ಜೆಡಿಯು ಶಾಸಕರ ಪಕ್ಷಾಂತರಕ್ಕೂ ಬಿಹಾರ ಮೈತ್ರಿಕೂಟಕ್ಕೂ ಸಂಬಂಧವಿಲ್ಲ: ಸುಶೀಲ್ ಕುಮಾರ್ ಮೋದಿ

Published On - 6:19 pm, Wed, 30 December 20

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!