AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ ಜೆಡಿಯುನಲ್ಲಿ ಅಸಮಾಧಾನ: ಶೀಘ್ರ 17 ಶಾಸಕರು ಆರ್​ಜೆಡಿಗೆ ಸೇರ್ಪಡೆ?

ಈ ಮೊದಲು ಜೆಡಿಯುನ ಪ್ರಧಾನ ಕಾರ್ಯದರ್ಶಿ ಆಗಿದ್ದ ಶ್ಯಾಮ್​ ರಜಾಕ್​ ಇತ್ತೀಚೆಗೆ ಆರ್​ಜೆಡಿ ಸೇರ್ಪಡೆ ಆಗಿದ್ದರು. ಅವರು ಬುಧವಾರ ಈ ರೀತಿಯ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಬಿಹಾರ ಜೆಡಿಯುನಲ್ಲಿ ಅಸಮಾಧಾನ: ಶೀಘ್ರ 17 ಶಾಸಕರು ಆರ್​ಜೆಡಿಗೆ ಸೇರ್ಪಡೆ?
ಬಿಹಾರ ಸಿಎಂ ನಿತೀಶ್​ ಕುಮಾರ್
Follow us
ರಾಜೇಶ್ ದುಗ್ಗುಮನೆ
|

Updated on:Dec 30, 2020 | 6:26 PM

ಪಾಟ್ನಾ: ಅರುಣಾಚಲ ಪ್ರದೇಶದಲ್ಲಿ ಆರು ಜೆಡಿಯು ಶಾಸಕರು ಬಿಜೆಪಿ ಸೇರಿದ್ದ ವಿಚಾರ ಬಿಹಾರ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಬಿಹಾರದಲ್ಲಿ ಆಡಳಿತ ನಡೆಸುತ್ತಿರುವ ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರದ ನಡುವೆ ಶೀತಲ ಸಮರಕ್ಕೂ ಕಾರಣವಾಗಿದೆ. ಈ ಮಧ್ಯೆ ಬಿಹಾರದಲ್ಲಿ 17 ಜೆಡಿಯು ಶಾಸಕರು ಪಕ್ಷ ಬದಲಿಸಲು ಸಿದ್ಧರಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

ಈ ಮೊದಲು ಜೆಡಿಯುನ ಪ್ರಧಾನ ಕಾರ್ಯದರ್ಶಿ ಆಗಿದ್ದ ಶ್ಯಾಮ್​ ರಜಾಕ್​ ಇತ್ತೀಚೆಗೆ ಆರ್​ಜೆಡಿ ಸೇರ್ಪಡೆ ಆಗಿದ್ದರು. ಅವರು ಬುಧವಾರ ಈ ರೀತಿಯ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಜೆಡಿಯುನ ಸಾಕಷ್ಟು ಶಾಸಕರು ಅಸಮಾಧಾನಗೊಂಡಿದ್ದಾರೆ. ಹೀಗಾಗಿ, ಅವರ ಪಕ್ಷದ 17 ಶಾಸಕರು ನಮ್ಮ ಪಕ್ಷಕ್ಕೆ ಬರಲು ಸಿದ್ಧರಿದ್ದಾರೆ. ಇನ್ನೂ ಕೆಲ ಶಾಸಕರು ಈ ಬಣ ಸೇರಿಕೊಳ್ಳಲಿದ್ದಾರೆ. ಹೀಗಾಗಿ, ಈ ಪ್ರಕ್ರಿಯೆ ನಿಂತಿದೆ ಎನ್ನುವ ಮೂಲಕ ಹೊಸ ಬಾಂಬ್​ ಹಾಕಿದ್ದಾರೆ.

ಅರುಣಾಚಲ ಪ್ರದೇಶ ವಿಧಾನಸಭೆಯ 7 ಜೆಡಿಯು ಶಾಸಕರ ಪೈಕಿ ಆರು ಮಂದಿ ಬಿಜೆಪಿಗೆ ಪಕ್ಷಾಂತರ ಮಾಡಿದ್ದರು. 60 ಸದಸ್ಯರಿರುವ ಅರುಣಾಚಲ ಪ್ರದೇಶದಲ್ಲಿ ಜೆಡಿಯು 7 ಸ್ಥಾನಗಳನ್ನು ಗೆದ್ದಿತ್ತು. ಈ ಪೈಕಿ ಆರು ಶಾಸಕರು ಬಿಜೆಪಿ ಸೇರಿದ್ದರು. ಹೀಗಾಗಿ, ಪಕ್ಷಾಂತರ ಕಾಯ್ದೆ ಕೂಡ ಇದಕ್ಕೆ ಅನ್ವಯ ಆಗಿರಲಿಲ್ಲ. ಇನ್ನು, ಈ ಬೆಳವಣಿಗೆ ಬೆನ್ನಲ್ಲೇ ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಮುಖ್ಯಮಂತ್ರಿ ನಿತೀಶ್​ ಕುಮಾರ್​ ರಾಜೀನಾಮೆ ನೀಡಿದ್ದರು.

ಅರುಣಾಚಲದಲ್ಲಿ ಜೆಡಿಯು ಶಾಸಕರ ಪಕ್ಷಾಂತರಕ್ಕೂ ಬಿಹಾರ ಮೈತ್ರಿಕೂಟಕ್ಕೂ ಸಂಬಂಧವಿಲ್ಲ: ಸುಶೀಲ್ ಕುಮಾರ್ ಮೋದಿ

Published On - 6:19 pm, Wed, 30 December 20

ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು