ಮದುವೆ ಬಸ್ ನದಿಗೆ ಬಿದ್ದು 24 ಮಂದಿ ಜಲಸಮಾಧಿ

ಜೈಪುರ: ಮದುವೆಗೆ ತೆರಳುತ್ತಿದ್ದ ಬಸ್‌ ಸೇತುವೆಯಿಂದ ನದಿಗೆ ಉರುಳಿ ಬಿದ್ದು 24 ಮಂದಿ ಜಲಸಮಾಧಿಯಾಗಿರುವ ಘಟನೆ ರಾಜಸ್ಥಾನದ ವೈಮಧೋಪುರ ಜಿಲ್ಲೆಯ ಬೂಂಡಿಯ ಬಳಿ ಸಂಭವಿಸಿದೆ. ವರನ ಸ್ನೇಹಿತರ 40 ಮಂದಿ ಕುಟುಂಬ ಸದಸ್ಯರು ಈ ಬಸ್​ನಲ್ಲಿದ್ದರು ಎನ್ನಲಾಗಿದೆ.  ಈಗಾಗಲೇ ಹಲವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಮದುವೆ ಬಸ್ ನದಿಗೆ ಬಿದ್ದು 24 ಮಂದಿ ಜಲಸಮಾಧಿ
ಸಾಧು ಶ್ರೀನಾಥ್​

Updated on: Feb 26, 2020 | 12:34 PM

ಜೈಪುರ: ಮದುವೆಗೆ ತೆರಳುತ್ತಿದ್ದ ಬಸ್‌ ಸೇತುವೆಯಿಂದ ನದಿಗೆ ಉರುಳಿ ಬಿದ್ದು 24 ಮಂದಿ ಜಲಸಮಾಧಿಯಾಗಿರುವ ಘಟನೆ ರಾಜಸ್ಥಾನದ ವೈಮಧೋಪುರ ಜಿಲ್ಲೆಯ ಬೂಂಡಿಯ ಬಳಿ ಸಂಭವಿಸಿದೆ.

ವರನ ಸ್ನೇಹಿತರ 40 ಮಂದಿ ಕುಟುಂಬ ಸದಸ್ಯರು ಈ ಬಸ್​ನಲ್ಲಿದ್ದರು ಎನ್ನಲಾಗಿದೆ.  ಈಗಾಗಲೇ ಹಲವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

Published On - 12:32 pm, Wed, 26 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us