AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

14 ವರ್ಷದಲ್ಲೇ ಅತಿಹೆಚ್ಚು ಆಗಸ್ಟ್ ಮಳೆ; ಸೆಪ್ಟೆಂಬರ್​ನಲ್ಲಿ ಪ್ರವಾಹ, ಭೂಕುಸಿತಗಳ ಸಾಧ್ಯತೆ: ಹವಾಮಾನ ಮುನ್ನೆಚ್ಚರಿಕೆ

Heavy rainfall, floods, landslides in September: ಈ ಬಾರಿಯ ಮುಂಗಾರು ಸೀಸನ್​ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ. ಆಗಸ್ಟ್​ನಲ್ಲಿ ಹಲವೆಡೆ ಭೀಕರ ಮಳೆಯಾಗಿದೆ. ಸೆಪ್ಟೆಂಬರ್​ನಲ್ಲೂ ಭಾರೀ ಮಳೆಯಾಗಲಿದ್ದು, ಹಲವೆಡೆ ಪ್ರವಾಹ, ಭೂಕುಸಿತ ದುರಂತ ಸಂಭವಿಸಬಹುದು. ವಾಯವ್ಯ ಭಾರತದಲ್ಲಿ ಕಳೆದ 14 ವರ್ಷದಲ್ಲೇ ಆಗಸ್ಟ್​ನಲ್ಲಿ ಅತಿಹೆಚ್ಚು ಮಳೆಯಾಗಿದೆ ಎಂದು ಹೇಳಲಾಗುತ್ತಿದೆ.

14 ವರ್ಷದಲ್ಲೇ ಅತಿಹೆಚ್ಚು ಆಗಸ್ಟ್ ಮಳೆ; ಸೆಪ್ಟೆಂಬರ್​ನಲ್ಲಿ ಪ್ರವಾಹ, ಭೂಕುಸಿತಗಳ ಸಾಧ್ಯತೆ: ಹವಾಮಾನ ಮುನ್ನೆಚ್ಚರಿಕೆ
ಆಗಸ್ಟ್ 29ರಂದು ದೆಹಲಿಯಲ್ಲಿ ಮಳೆಯಿಂದ ಜಲಾವೃತಗೊಂಡಿದ್ದ ರಸ್ತೆಯ ದೃಶ್ಯ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 31, 2025 | 5:32 PM

Share

ನವದೆಹಲಿ, ಆಗಸ್ಟ್ 31: ಈ ಬಾರಿ ಭಾರತದಾದ್ಯಂತ ಭಾರೀ ಮಳೆ ಆಗುತ್ತಿದೆ. ಹವಾಮಾನ ಇಲಾಖೆ (IMD) ಪ್ರಕಾರ ಸೆಪ್ಟೆಂಬರ್ ತಿಂಗಳಲ್ಲಿ ದೇಶದ ಹಲವೆಡೆ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ. ಭಾರೀ ಮಳೆಯಿಂದಾಗಿ ಪ್ರವಾಹ, ಭೂಕುಸಿತ (floods and landslides) ಇತ್ಯಾದಿ ಅವಘಡಗಳು ಹಲವೆಡೆ ಅನಾಹುತ ಸೃಷ್ಟಿಸಲಿವೆ ಎಂದೂ ಎಚ್ಚರಿಸಲಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಸರಾಸರಿಯಾಗಿ 167.9 ಎಂಎಂ ಮಳೆಯಾಗುತ್ತದೆ. ಆದರೆ, ಈ ಬಾರಿ ಶೇ. 109ರಷ್ಟು ಹೆಚ್ಚು ಮಳೆಯಾಗಬಹುದು ಎಂದು ಐಎಂಡಿ ಅಭಿಪ್ರಾಯಪಟ್ಟಿದೆ.

ದೇಶದ ಪೂರ್ವ, ಈಶಾನ್ಯದ ಕೆಲ ಪ್ರದೇಶಗಳು, ಹಾಗೂ ದಕ್ಷಿಣದ ಹಲವು ಪ್ರದೇಶಗಳು, ವಾಯವ್ಯ ಭಾಗದ (North west) ಕೆಲ ಪ್ರದೇಶಗಳಲ್ಲಿ ವಾಡಿಕೆಗಿಂತ ಸ್ವಲ್ಪ ಕಡಿಮೆ ಮಳೆಯಾಗಬಹುದು. ಇವನ್ನು ಬಿಟ್ಟರೆ ಉಳಿದ ಕಡೆ ತೀವ್ರತರವಾದ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಚೆನ್ನೈನಲ್ಲಿ ಮೇಘಸ್ಫೋಟ; ಹಲವೆಡೆ ಭಾರೀ ಮಳೆ; ಬೆಂಗಳೂರಿಗೆ ಬಂದ 3 ವಿಮಾನಗಳು

ಉತ್ತರಾಖಂಡ್​ನಲ್ಲಿ ಭೂಕುಸಿತದ ಸಂಭವ

ಭಾರೀ ಮಳೆಯಿಂದ ಸೆಪ್ಟೆಂಬರ್​ನಲ್ಲಿ ಉತ್ತರಾಖಂಡ್​ನಲ್ಲಿ ಭೀಕರ ಪ್ರವಾಹ ಮತ್ತು ಭೂಕುಸಿತಗಳು ಸಂಭವಿಸಬಹುದು. ಇಲ್ಲಿಯೇ ಹಲವು ನದಿಗಳು ಉಗಮಗೊಳ್ಳುವುದರಿಂದ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿದು, ಹಲವು ಪ್ರದೇಶಗಳಲ್ಲಿ ಪ್ರವಾಹಕ್ಕೆ ಕಾರಣವಾಗಬಹುದು. ದಕ್ಷಿಣ ಹರ್ಯಾಣ, ದೆಹಲಿ, ಮತ್ತು ಉತ್ತರ ರಾಜಸ್ಥಾನದಲ್ಲಿ ಜನಜೀವನ ಅಸ್ತವ್ಯಸ್ತಗೊಳ್ಳಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

ವಾಯವ್ಯ ಭಾರತದಲ್ಲಿ ಆಗಸ್ಟ್​ನಲ್ಲಿ ದಾಖಲೆಯ ಮಳೆ

ಆಗಸ್ಟ್ ತಿಂಗಳಲ್ಲಿ ವಾಯವ್ಯ ಭಾಗಗಳಲ್ಲಿ (Northwest India) ಸರಾಸರಿಯಾಗಿ 265 ಎಂಎಂ ಮಳೆಯಾಗಿದೆ. 2001ರ ನಂತರ ಈ ಭಾಗಗಳಲ್ಲಿ ಆಗಸ್ಟ್ ತಿಂಗಳಲ್ಲಿ ಕಂಡ ಅತಿಹೆಚ್ಚು ಮಳೆ ಇದು. 124 ವರ್ಷಗಳ ಬಳಿಕ, ಅಂದರೆ 1901ರ ನಂತರ ಆಗಸ್ಟ್ ತಿಂಗಳಲ್ಲಿ ದಾಖಲಾದ ಅತಿಹೆಚ್ಚು ಮಳೆಯಲ್ಲಿ ಇದು 13ನೇ ಸ್ಥಾನ ಪಡೆಯುತ್ತದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: 5,000 ಮೀಟರ್ ಸಮುದ್ರದಾಳದಲ್ಲಿ ಭಾರತೀಯರು; ವಿಶ್ವದ ಕೆಲವೇ ದೇಶಗಳ ಸಾಲಿಗೆ ಭಾರತ

ಈ ಬಾರಿಯ ಮುಂಗಾರು ಸೀಸನ್​ನ ಎಲ್ಲಾ ಮೂರು ತಿಂಗಳಲ್ಲೂ ಈ ವಾಯವ್ಯ ಪ್ರದೇಶಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯೇ ಆಗಿದೆ. ಜೂನ್​ನಲ್ಲಿ 111 ಎಂಎಂ, ಜುಲೈನಲ್ಲಿ 237.4 ಎಂಎಂ ಮತ್ತು ಆಗಸ್ಟ್​ನಲ್ಲಿ 265 ಎಂಎಂ ಮಳೆಯಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಸೆಪ್ಟೆಂಬರ್ ತಿಂಗಳಲ್ಲಿ ಈ ಭಾಗಗಳಲ್ಲಿ ಮಳೆ ಶಾಂತಗೊಳ್ಳಬಹುದು. ವಾಡಿಕೆಗಿಂತ ತುಸು ಕಡಿಮೆ ಮಳೆಯಾಗಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ