AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುಗಿಸುವ ಚಳಿ ಮಧ್ಯೆ ಈಶಾನ್ಯ ರಾಜ್ಯಗಳಲ್ಲಿ ಮಳೆಯ ಮುನ್ಸೂಚನೆ; ಹಿಮಪಾತವೂ ತಪ್ಪಿದ್ದಲ್ಲ

ಎರಡನೇ ಪಾಶ್ಚಿಮಾತ್ಯ ಅಡಚಣೆ ಸಕ್ರಿಯವಾಗಿದ್ದು, ಬಯಲು ಪ್ರದೇಶದಲ್ಲಿ ಚದುರಿದ ಮತ್ತು ಲಘು ಮಳೆಗೆ ಕಾರಣವಾಗಬಹುದು. ಮುಂಬರುವ ಪಾಶ್ಚಿಮಾತ್ರ ಅಡೆತಡೆಗಳಿಂದಾಗಿ, ಇದೀಗ ಉಂಟಾಗಿರುವ ಶೀತ ಅಲೆಗಳನ್ನು ಡಿ.22ರಿಂದ 27ರವರೆಗೆ ಸ್ಥಗಿತಗೊಳ್ಳಬಹುದು ಎಂದು ಐಎಂಡಿ ಹೇಳಿದೆ.

ನಡುಗಿಸುವ ಚಳಿ ಮಧ್ಯೆ ಈಶಾನ್ಯ ರಾಜ್ಯಗಳಲ್ಲಿ ಮಳೆಯ ಮುನ್ಸೂಚನೆ; ಹಿಮಪಾತವೂ ತಪ್ಪಿದ್ದಲ್ಲ
ಸಾಂದರ್ಭಿಕ ಚಿತ್ರ (ಪಿಟಿಐ ಫೋಟೋ)
TV9 Web
| Edited By: |

Updated on:Dec 21, 2021 | 9:41 AM

Share

ದೆಹಲಿ: ದೇಶದಲ್ಲೀಗ ಚಳಿಯ ಆರ್ಭಟ ಶುರುವಾಗಿದೆ. ರಾಷ್ಟ್ರದ ಬಹುತೇಕ ಭಾಗಗಳಲ್ಲಿ ವಿಪರೀತ ಚಳಿ ಬೀಳುತ್ತಿದ್ದು, ದೆಹಲಿಯಲ್ಲಿ ಕನಿಷ್ಠ ತಾಪಮಾನ 4 ಡಿಗ್ರಿ ಸೆಲ್ಸಿಯಸ್​ಗೆ ತಲುಪಿದ್ದು, ಜನರು ನಡುಗುತ್ತಿದ್ದಾರೆ. ಸೋಮವಾರ ಸಫ್ದರ್​ಜಂಗ್​ನಲ್ಲಿ ಕನಿಷ್ಠ ತಾಪಮಾನ ದಾಖಲಾಗಿದೆ. ಅಲ್ಲಿ 3.2 ಡಿಗ್ರಿ ಸೆಲ್ಸಿಯಸ್​​ನಷ್ಟು ಶೀತಗಾಳಿ ಬೀಸುತ್ತಿದೆ. ಲೋಧಿ ರಸ್ತೆಯಲ್ಲಿ 3.1 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ. ಈ ಮಧ್ಯೆ ಬುಧವಾರದವರೆಗೂ ವಾಯುವ್ಯ ಭಾರತದ ಭಾಗಗಳಲ್ಲಿ ಗಂಭೀರ ಸ್ವರೂಪದ ಚಳಿ(Severe Cold)ಯ ವಾತಾವರಣ ಮುಂದುವರಿಯಲಿದೆ. ವಾತಾವರಣ ಏನೇ ಬದಲಾವಣೆಯಾಗುವುದಿದ್ದರೂ ಅದು ಬುಧವಾರದ ನಂತರವೇ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎರಡು ಪಾಶ್ಚಿಮಾತ್ರ ಅಡಚಣೆಗಳು ಹಿಮಾಲಯದ ಪಶ್ಚಿಮ ಭಾಗಗಳ ಮೇಲೆ ಪರಿಣಾಮ ಬೀರಲಿದ್ದು, ಆ ಪ್ರದೇಶಗಳಲ್ಲಿ ಹಗುರ ಮತ್ತು ಚದುರಿದ ಮಳೆಯನ್ನೂ ತರಲಿವೆ. ಈ ಮಳೆಯಿಂದ ಶೀತ ಅಲೆಗಳು ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಐಎಂಡಿ ಮಾಹಿತಿ ನೀಡಿದೆ.  ವಾಯುವ್ಯ, ಮಧ್ಯ ಮತ್ತು ಪೂರ್ವ ಭಾರತದಲ್ಲಿ ಮುಂದಿನ ಎರಡು ದಿನಗಳ ಕಾಲ ಹವಾಮಾನದಲ್ಲಿ ಯಾವುದೇ ಬದಲಾವಣೆಯೂ ಕಂಡುಬರುವುದಿಲ್ಲ ಎಂದು ಹೇಳಿದೆ. ಅದರಲ್ಲೂ ವಾಯುವ್ಯ ಭಾರತದಾದ್ಯಂತ ಕನಿಷ್ಠ ತಾಪಮಾನ 3 ರಿಂದ 5ಡಿಗ್ರಿ ಸೆಲ್ಸಿಯಸ್​ಗೆ ಮತ್ತು ಪೂರ್ವ ಭಾರತದಲ್ಲಿ 2 ರಿಂದ 4 ಡಿಗ್ರಿ ಸೆಲ್ಸಿಯಸ್​ಗೆ ಏರಿಕೆಯಾಗಬಹುದು ಎಂದು ಅಂದಾಜಿಸಲಾಗಿದೆ.  

ಎರಡನೇ ಪಾಶ್ಚಿಮಾತ್ಯ ಅಡಚಣೆ ಸಕ್ರಿಯವಾಗಿದ್ದು, ಬಯಲು ಪ್ರದೇಶದಲ್ಲಿ ಚದುರಿದ ಮತ್ತು ಲಘು ಮಳೆಗೆ ಕಾರಣವಾಗಬಹುದು. ಮುಂಬರುವ ಪಾಶ್ಚಿಮಾತ್ರ ಅಡೆತಡೆಗಳಿಂದಾಗಿ, ಇದೀಗ ಉಂಟಾಗಿರುವ ಶೀತ ಅಲೆಗಳನ್ನು ಡಿ.22ರಿಂದ 27ರವರೆಗೆ ಸ್ಥಗಿತಗೊಳ್ಳಬಹುದು. ಆದರೆ ಮೋಡಗಳಿಂದಾಗಿ ದಿನದ ತಾಪಮಾನವು ಸಾಮಾನ್ಯಕ್ಕಿಂತಲೂ ಕಡಿಮೆ ಇರುತ್ತದೆ.  ಹೀಗಾಗಿ ಶೀತಗಾಳಿ ಎಷ್ಟರಮಟ್ಟಿಗೆ ಕಡಿಮೆಯಾಗುತ್ತದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂದು  ರಾಷ್ಟ್ರೀಯ ಹವಾಮಾನ ಮುನ್ಸೂಚನಾ ಕೇಂದ್ರದ ಹಿರಿಯ ವಿಜ್ಞಾನಿ ಆರ್​.ಕೆ.ಜೇನಾಮನಿ ತಿಳಿಸಿದ್ದಾರೆ.

ಮುಂದುವರಿಯಲಿದೆ ಮಳೆ ಬುಧವಾರದಿಂದ ಶನಿವಾರದವರೆಗೂ ಹಿಮಾಲಯ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ಅಲ್ಲಲ್ಲಿ ಚದುರಿದ ಮಳೆ, ಹಿಮಪಾತ ಮುಂದುವರಿಯಲಿದೆ ಎಂದು ಐಎಂಡಿ ತಿಳಿಸಿದೆ. ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶ, ಆಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಝೋರಾಂ ಮತ್ತು ತ್ರಿಪುರಗಳಲ್ಲಿ ಇಂದಿನಿಂದ ಶುಕ್ರವಾರದವರೆಗೆ ಗುಡುಗು ಸಹಿತ ಹಗುರ, ಚದುರಿದ, ಕೆಲವೊಮ್ಮೆ ಜೋರಾದ ಮಳೆಯಾಗುವ ಮುನ್ಸೂಚನೆಯನ್ನೂ ನೀಡಿದೆ.  ಒಟ್ಟಾರೆ ದೇಶದಲ್ಲಿ ವಿಪರೀತ ಚಳಿಯ ನಡುವೆಯೂ ಮಳೆಯೂ ಬೀಳಲಿದೆ.

ಇದನ್ನು ಓದಿ: Union Budget 2022: ವಿವಿಧ ಉದ್ಯಮಿಗಳ ಜತೆ ಪೂರ್ವ ಬಜೆಟ್​ ಸಂವಾದ ನಡೆಸಿದ ಪ್ರಧಾನಿ ಮೋದಿ; ಹೂಡಿಕೆ ಉತ್ತೇಜನಕ್ಕೆ ಸಿಇಒಗಳಿಂದ ಸಲಹೆ

Published On - 9:35 am, Tue, 21 December 21

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ