AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Asani: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಅಬ್ಬರ; ವಿಮಾನ ಸಂಚಾರ ರದ್ದು, ತೀರ ಪ್ರದೇಶಗಳಲ್ಲಿ ಜನರ ತೆರವು

ಒಡಿಶಾ ಮತ್ತು ಆಂಧ್ರ ಪ್ರದೇಶದ ಕರಾವಳಿಯತ್ತ ಧಾವಿಸಿ ಬಂದ ಚಂಡಮಾರುತ ನಿಧಾನವಾಗಿ ವೇಗ ಕಳೆದುಕೊಂಡಿದೆ

Cyclone Asani: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಅಬ್ಬರ; ವಿಮಾನ ಸಂಚಾರ ರದ್ದು, ತೀರ ಪ್ರದೇಶಗಳಲ್ಲಿ ಜನರ ತೆರವು
ಚಂಡಮಾರುತ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:May 10, 2022 | 11:17 AM

Share

ಚೆನ್ನೈ: ಭಾರತದ ಪೂರ್ವ ಕರಾವಳಿ ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಅಸಾನಿ ಚಂಡಮಾರುತದಿಂದ ಭಾರಿ ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. ಒಡಿಶಾ ಮತ್ತು ಆಂಧ್ರ ಪ್ರದೇಶದ ಕರಾವಳಿಯತ್ತ ಧಾವಿಸಿ ಬಂದ ಚಂಡಮಾರುತ ನಿಧಾನವಾಗಿ ವೇಗ ಕಳೆದುಕೊಂಡಿದೆ. ತೀರ ಪ್ರದೇಶದಲ್ಲಿ ಬಿರುಗಾಳಿ ಬೀಸದಿದ್ದರೂ ವ್ಯಾಪಕವಾಗಿ ಮಳೆ ಸುರಿಯಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಮೊದಲು ಚಂಡಮಾರುತವು ಒಡಿಶಾ ಅಥವಾ ಆಂಧ್ರ ಪ್ರದೇಶದ ಕಡಲ ತೀರದಲ್ಲಿ ನೆಲಕ್ಕೆ ಅಪ್ಪಳಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಮಂಗಳವಾರ ನಸುಕಿನ ನಂತರ ಚಂಡಮಾರುತವು ಪೂರ್ವ ತೀರಕ್ಕೆ ಸಮಾನಾಂತರವಾಗಿ ಸಂಚರಿಸಿ ಭಾರೀ ಮಳೆಗೆ ಕಾರಣವಾಗಬಹುದು ಎಂದು ಹವಾಮಾನ ಇಲಾಖೆಯ ಪ್ರಧಾನ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ತಿಳಿಸಿದರು. ಈ ನಡುವೆ ಚೆನ್ನೈಗೆ ಬರುತ್ತಿದ್ದ 10 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ. ಹೈದರಾಬಾದ್, ವಿಶಾಖಪಟ್ಟಣ, ಜೈಪುರ ಮತ್ತು ಮುಂಬೈ ನಗರಗಳಿಂದ ಈ ವಿಮಾನಗಳು ಚೆನ್ನೈಗೆ ಬರಬೇಕಿತ್ತು. ವಿಮಾನಗಳು ರದ್ದುಪಡಿಸಿರುವ ಕುರಿತು ಪ್ರಯಾಣಿಕರಿಗೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಪ್ರಕ್ಷುಬ್ಧ ಕಡಲಿನಲ್ಲಿ ಸಿಲುಕಿದ್ದ 11 ಮೀನುಗಾರರನ್ನು ಕರಾವಳಿ ಕಾವಲು ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ. ಮೇ 7ರಂದು ಈ ಮೀನುವಾರರು ಆಂಧ್ರ ಪ್ರದೇಶದ ವಿಶಾಖಪಟ್ಟಣಂದಿಂದ ಹೊಸದಾಗಿ ಮೀನುಗಾರಿಕೆ ದೋಣಿ ಖರೀದಿಸಿ ತಮ್ಮ ಊರಿಗೆ ಹಿಂದಿರುಗುತ್ತಿದ್ದರು. ಈ ಸಂದರ್ಭದಲ್ಲಿ ದೋಣಿಯಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತ್ತು.

ಚಂಡಮಾರುತದಿಂದ ಹಾನಿಯಾಗುವ ಸಾಧ್ಯತೆಯಿರುವ ನಾಲ್ಕು ಕರಾವಳಿ ಜಿಲ್ಲೆಗಳಿಂದ ಜನರನ್ನು ಸ್ಥಳಾಂತರಿಸಲು ಒಡಿಶಾ ಸರ್ಕಾರ ಮುಂದಾಗಿದೆ. ರಾಜ್ಯದ ಯಾವುದೇ ಬಂದರು ಸಮೀಪಕ್ಕೆ ಹಡಗುಗಳು ಬರಬಾರದು ಎಂದು ಸರ್ಕಾರ ಸೂಚನೆ ನೀಡಿದೆ. ಆಂಧ್ರ ಪ್ರದೇಶ, ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್​ ರಾಜ್ಯಗಳಲ್ಲಿಯೂ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಚಂಡಮಾರುತ ಪ್ರಭಾವದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೈದರಾಬಾದ್​ನ ಹವಾಮಾನ ಮುನ್ಸೂಚನಾ ಕೇಂದ್ರ ಎಚ್ಚರಿಸಿದೆ.

ಪಶ್ಚಿಮ ಬಂಗಾಳದ ಕೊಲ್ಕತ್ತಾ, ಹೌರಾ, ಪೂರ್ವ ಮೇದಿನಿಪುರ, ಉತ್ತರ ಮತ್ತು ದಕ್ಷಿಣ 24 ಪರಗಣ ಹಾಗೂ ನಾಡಿಯಾ ಜಿಲ್ಲೆಗಳಲ್ಲಿ ಗುರುವಾರದವರೆಗೆ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಕೊಲ್ಕತ್ತಾ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಸೋಮವಾರದಿಂದಲೇ ಭಾರೀ ಮಳೆಯಾಗುತ್ತಿದ್ದು, ನಗರದ ವಿವಿಧೆಡೆ ನೀರು ನಿಂತಿದೆ. ಹಲವೆಡೆ ಟ್ರಾಫಿಕ್ ಜಾಮ್​ ಉಂಟಾಗಿ ಜನರು ಮನೆಗಳನ್ನು ತಲುಪಲು ಪರದಾಡಬೇಕಾಯಿತು. ಜಾರ್ಖಂಡ್​ನಲ್ಲಿ ಗುಡುಗು, ಸಿಡಿಲಿನ ಆರ್ಭಟ ಹೆಚ್ಚಾಗಿರಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: Cyclone Asani: ಅಸಾನಿ ಚಂಡಮಾರುತ ಅಬ್ಬರ; ಒಡಿಶಾ, ಬಂಗಾಳ, ಆಂಧ್ರ ಪ್ರದೇಶದಲ್ಲಿ ಭಾರೀ ಮಳೆ

ಇದನ್ನೂ ಓದಿ: Karnataka Rain: ಬೆಂಗಳೂರು, ಮಲೆನಾಡು, ಕರಾವಳಿಯಲ್ಲಿ ಇನ್ನೆರಡು ದಿನ ಮಳೆ; ಒಡಿಶಾದಲ್ಲಿ ಚಂಡಮಾರುತದ ಎಚ್ಚರಿಕೆ

Published On - 11:16 am, Tue, 10 May 22

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ