AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​​ನಲ್ಲಿ ತೀವ್ರ ಉಷ್ಣ ಅಲೆ ವಾತಾವರಣ; ರಾಜ್ಯಾದ್ಯಂತ ಹಳದಿ ಅಲರ್ಟ್​ ಘೋಷಿಸಿದ ಹವಾಮಾನ ಇಲಾಖೆ

ಉಷ್ಣ ಅಲೆ ಹೆಚ್ಚಳದ ಬಗ್ಗೆ ಎಚ್ಚರಿಕೆ ನೀಡಿದ ಗುಜರಾತ್​ ಹವಾಮಾನ ಇಲಾಖೆ ನಿರ್ದೇಶಕಿ ಮನೋರಮಾ ಮೊಹಂತಿ, ಗುಜರಾತ್​​ನಾದ್ಯಂತ ಇನ್ನು ಕೆಲವು ದಿನಗಳಲ್ಲಿ ಬೇಸಿಗೆಯ ತೀವ್ರತೆ ಇನ್ನಷ್ಟು ಹೆಚ್ಚಲಿದೆ ಎಂದು ಹೇಳಿದ್ದಾರೆ.

ಗುಜರಾತ್​​ನಲ್ಲಿ ತೀವ್ರ ಉಷ್ಣ ಅಲೆ ವಾತಾವರಣ; ರಾಜ್ಯಾದ್ಯಂತ ಹಳದಿ ಅಲರ್ಟ್​ ಘೋಷಿಸಿದ ಹವಾಮಾನ ಇಲಾಖೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Mar 17, 2022 | 9:28 AM

Share

ಗುಜರಾತ್​​ನಲ್ಲಿ ಉಷ್ಣ ಅಲೆ (Heat Wave) ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಅಲ್ಲಿ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್​ ಘೋಷಿಸಿದೆ. ದೇಶಾದ್ಯಂತ ಬೇಸಿಗೆ ಶುರುವಾಗಿದೆ. ಅದರಲ್ಲೂ ಗುಜರಾತ್​​ನಲ್ಲಿ ದಾಖಲೆಯ ತಾಪಮಾನ ಈಗಲೇ ಕಾಣಿಸಿಕೊಂಡಿದೆ. ರಾಜ್ಯದ ಸುಮಾರು 10 ನಗರಗಳಲ್ಲಿ, ಉಷ್ಣತೆ  40 ಡಿಗ್ರಿ ಸೆಲ್ಸಿಯಸ್​ ದಾಟಿದೆ.  20 ವರ್ಷಗಳಲ್ಲಿ ಇದೇ ಮೊದಲಬಾರಿಗೆ ಅಹ್ಮದಾಬಾದ್​​ನಲ್ಲಿ, ಮಾರ್ಚ್ 15ರಂದು ಉಷ್ಣತೆ 41.5 ಡಿಗ್ರಿ ಸೆಲ್ಸಿಯಸ್​ ದಾಟಿತ್ತು.ಸುರೇಂದ್ರನಗರದಲ್ಲಿ ಗರಿಷ್ಠ 41.7 ಡಿಗ್ರಿ ಸೆಲ್ಸಿಯಸ್​ ಆಗಿತ್ತು. 

ಉಷ್ಣ ಅಲೆ ಹೆಚ್ಚಳದ ಬಗ್ಗೆ ಎಚ್ಚರಿಕೆ ನೀಡಿದ ಗುಜರಾತ್​ ಹವಾಮಾನ ಇಲಾಖೆ ನಿರ್ದೇಶಕಿ ಮನೋರಮಾ ಮೊಹಂತಿ, ಗುಜರಾತ್​​ನಾದ್ಯಂತ ಇನ್ನು ಕೆಲವು ದಿನಗಳಲ್ಲಿ ಬೇಸಿಗೆಯ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಜನರು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು ಇರಬೇಕು, ತಾಪಮಾನದಿಂದ ಆದಷ್ಟು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ. ಗುಜರಾತ್​​ನಲ್ಲಿ ತೀವ್ರ ಉಷ್ಣ ಅಲೆ ಪರಿಸ್ಥಿತಿ ಇನ್ನಷ್ಟು ದಿನಗಳ ಕಾಲ ಇರಲಿದೆ. ಅದರಲ್ಲಿ ಸೌರಾಷ್ಟ್ರ ಮತ್ತು ಕುಚ್​ ಪ್ರದೇಶದಲ್ಲಿ ಇನ್ನು 24 ಗಂಟೆಗಳ ಕಾಲ ಇದೇ ಪರಿಸ್ಥಿತಿ ಇರಲಿದ್ದು ಉತ್ತರ ಗುಜರಾತ್​​ನಲ್ಲಿ ಇನ್ನೆರಡು ದಿನ ಗರಿಷ್ಠ ಉಷ್ಣತೆ ಇರಲಿದೆ. ಅದಾದ ಬಳಿಕ ಉಷ್ಣ ಅಲೆ ಸ್ವಲ್ಪ ದುರ್ಬಲಗೊಂಡರೂ, ತಾಪಮಾನ ಕಡಿಮೆಯಾಗುವುದಿಲ್ಲ ಎಂದು ಮೊಹಂತಿ ಎಚ್ಚರಿಸಿದ್ದಾರೆ.

ಮಾರ್ಚ್​ 16ರಂದು ಟ್ವೀಟ್ ಮಾಡಿರುವ ಭಾರತೀಯ ಹವಾಮಾನ ಇಲಾಖೆ, ಇನ್ನೆರಡು ದಿನಗಳ ಕಾಲ ರಾಜಸ್ಥಾನದಲ್ಲಿ ಗಂಭೀರ ಸ್ವರೂಪದ ಉಷ್ಣ ಅಲೆ ಮತ್ತು ಜಮ್ಮು ವಿಭಾಗ, ಹಿಮಾಚಲ ಪ್ರದೇಶ, ಗುಜರಾತ್​, ಕೊಂಕಣ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ತೆಲಂಗಾಣ ಮತ್ತು ಒಡಿಶಾಗಳಲ್ಲಿ ಸಾಮಾನ್ಯ ಉಷ್ಣ ಅಲೆ ಏಳಲಿದೆ ಎಂದು ಎಚ್ಚರಿಕೆ ನೀಡಿತ್ತು.

ಇದನ್ನೂ ಓದಿ: Cyclone Asani: ಮುಂದಿನವಾರ ಅಪ್ಪಳಿಸಲಿದೆ ಅಸನಿ ಚಂಡಮಾರುತ; ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ