AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​​ನಲ್ಲಿ ತೀವ್ರ ಉಷ್ಣ ಅಲೆ ವಾತಾವರಣ; ರಾಜ್ಯಾದ್ಯಂತ ಹಳದಿ ಅಲರ್ಟ್​ ಘೋಷಿಸಿದ ಹವಾಮಾನ ಇಲಾಖೆ

ಉಷ್ಣ ಅಲೆ ಹೆಚ್ಚಳದ ಬಗ್ಗೆ ಎಚ್ಚರಿಕೆ ನೀಡಿದ ಗುಜರಾತ್​ ಹವಾಮಾನ ಇಲಾಖೆ ನಿರ್ದೇಶಕಿ ಮನೋರಮಾ ಮೊಹಂತಿ, ಗುಜರಾತ್​​ನಾದ್ಯಂತ ಇನ್ನು ಕೆಲವು ದಿನಗಳಲ್ಲಿ ಬೇಸಿಗೆಯ ತೀವ್ರತೆ ಇನ್ನಷ್ಟು ಹೆಚ್ಚಲಿದೆ ಎಂದು ಹೇಳಿದ್ದಾರೆ.

ಗುಜರಾತ್​​ನಲ್ಲಿ ತೀವ್ರ ಉಷ್ಣ ಅಲೆ ವಾತಾವರಣ; ರಾಜ್ಯಾದ್ಯಂತ ಹಳದಿ ಅಲರ್ಟ್​ ಘೋಷಿಸಿದ ಹವಾಮಾನ ಇಲಾಖೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Mar 17, 2022 | 9:28 AM

Share

ಗುಜರಾತ್​​ನಲ್ಲಿ ಉಷ್ಣ ಅಲೆ (Heat Wave) ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಅಲ್ಲಿ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್​ ಘೋಷಿಸಿದೆ. ದೇಶಾದ್ಯಂತ ಬೇಸಿಗೆ ಶುರುವಾಗಿದೆ. ಅದರಲ್ಲೂ ಗುಜರಾತ್​​ನಲ್ಲಿ ದಾಖಲೆಯ ತಾಪಮಾನ ಈಗಲೇ ಕಾಣಿಸಿಕೊಂಡಿದೆ. ರಾಜ್ಯದ ಸುಮಾರು 10 ನಗರಗಳಲ್ಲಿ, ಉಷ್ಣತೆ  40 ಡಿಗ್ರಿ ಸೆಲ್ಸಿಯಸ್​ ದಾಟಿದೆ.  20 ವರ್ಷಗಳಲ್ಲಿ ಇದೇ ಮೊದಲಬಾರಿಗೆ ಅಹ್ಮದಾಬಾದ್​​ನಲ್ಲಿ, ಮಾರ್ಚ್ 15ರಂದು ಉಷ್ಣತೆ 41.5 ಡಿಗ್ರಿ ಸೆಲ್ಸಿಯಸ್​ ದಾಟಿತ್ತು.ಸುರೇಂದ್ರನಗರದಲ್ಲಿ ಗರಿಷ್ಠ 41.7 ಡಿಗ್ರಿ ಸೆಲ್ಸಿಯಸ್​ ಆಗಿತ್ತು. 

ಉಷ್ಣ ಅಲೆ ಹೆಚ್ಚಳದ ಬಗ್ಗೆ ಎಚ್ಚರಿಕೆ ನೀಡಿದ ಗುಜರಾತ್​ ಹವಾಮಾನ ಇಲಾಖೆ ನಿರ್ದೇಶಕಿ ಮನೋರಮಾ ಮೊಹಂತಿ, ಗುಜರಾತ್​​ನಾದ್ಯಂತ ಇನ್ನು ಕೆಲವು ದಿನಗಳಲ್ಲಿ ಬೇಸಿಗೆಯ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಜನರು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು ಇರಬೇಕು, ತಾಪಮಾನದಿಂದ ಆದಷ್ಟು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ. ಗುಜರಾತ್​​ನಲ್ಲಿ ತೀವ್ರ ಉಷ್ಣ ಅಲೆ ಪರಿಸ್ಥಿತಿ ಇನ್ನಷ್ಟು ದಿನಗಳ ಕಾಲ ಇರಲಿದೆ. ಅದರಲ್ಲಿ ಸೌರಾಷ್ಟ್ರ ಮತ್ತು ಕುಚ್​ ಪ್ರದೇಶದಲ್ಲಿ ಇನ್ನು 24 ಗಂಟೆಗಳ ಕಾಲ ಇದೇ ಪರಿಸ್ಥಿತಿ ಇರಲಿದ್ದು ಉತ್ತರ ಗುಜರಾತ್​​ನಲ್ಲಿ ಇನ್ನೆರಡು ದಿನ ಗರಿಷ್ಠ ಉಷ್ಣತೆ ಇರಲಿದೆ. ಅದಾದ ಬಳಿಕ ಉಷ್ಣ ಅಲೆ ಸ್ವಲ್ಪ ದುರ್ಬಲಗೊಂಡರೂ, ತಾಪಮಾನ ಕಡಿಮೆಯಾಗುವುದಿಲ್ಲ ಎಂದು ಮೊಹಂತಿ ಎಚ್ಚರಿಸಿದ್ದಾರೆ.

ಮಾರ್ಚ್​ 16ರಂದು ಟ್ವೀಟ್ ಮಾಡಿರುವ ಭಾರತೀಯ ಹವಾಮಾನ ಇಲಾಖೆ, ಇನ್ನೆರಡು ದಿನಗಳ ಕಾಲ ರಾಜಸ್ಥಾನದಲ್ಲಿ ಗಂಭೀರ ಸ್ವರೂಪದ ಉಷ್ಣ ಅಲೆ ಮತ್ತು ಜಮ್ಮು ವಿಭಾಗ, ಹಿಮಾಚಲ ಪ್ರದೇಶ, ಗುಜರಾತ್​, ಕೊಂಕಣ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ತೆಲಂಗಾಣ ಮತ್ತು ಒಡಿಶಾಗಳಲ್ಲಿ ಸಾಮಾನ್ಯ ಉಷ್ಣ ಅಲೆ ಏಳಲಿದೆ ಎಂದು ಎಚ್ಚರಿಕೆ ನೀಡಿತ್ತು.

ಇದನ್ನೂ ಓದಿ: Cyclone Asani: ಮುಂದಿನವಾರ ಅಪ್ಪಳಿಸಲಿದೆ ಅಸನಿ ಚಂಡಮಾರುತ; ಹವಾಮಾನ ಇಲಾಖೆಯಿಂದ ಎಚ್ಚರಿಕೆ

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!