AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​​ನಲ್ಲಿ ತೀವ್ರ ಉಷ್ಣ ಅಲೆ ವಾತಾವರಣ; ರಾಜ್ಯಾದ್ಯಂತ ಹಳದಿ ಅಲರ್ಟ್​ ಘೋಷಿಸಿದ ಹವಾಮಾನ ಇಲಾಖೆ

ಉಷ್ಣ ಅಲೆ ಹೆಚ್ಚಳದ ಬಗ್ಗೆ ಎಚ್ಚರಿಕೆ ನೀಡಿದ ಗುಜರಾತ್​ ಹವಾಮಾನ ಇಲಾಖೆ ನಿರ್ದೇಶಕಿ ಮನೋರಮಾ ಮೊಹಂತಿ, ಗುಜರಾತ್​​ನಾದ್ಯಂತ ಇನ್ನು ಕೆಲವು ದಿನಗಳಲ್ಲಿ ಬೇಸಿಗೆಯ ತೀವ್ರತೆ ಇನ್ನಷ್ಟು ಹೆಚ್ಚಲಿದೆ ಎಂದು ಹೇಳಿದ್ದಾರೆ.

ಗುಜರಾತ್​​ನಲ್ಲಿ ತೀವ್ರ ಉಷ್ಣ ಅಲೆ ವಾತಾವರಣ; ರಾಜ್ಯಾದ್ಯಂತ ಹಳದಿ ಅಲರ್ಟ್​ ಘೋಷಿಸಿದ ಹವಾಮಾನ ಇಲಾಖೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Mar 17, 2022 | 9:28 AM

Share

ಗುಜರಾತ್​​ನಲ್ಲಿ ಉಷ್ಣ ಅಲೆ (Heat Wave) ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಅಲ್ಲಿ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್​ ಘೋಷಿಸಿದೆ. ದೇಶಾದ್ಯಂತ ಬೇಸಿಗೆ ಶುರುವಾಗಿದೆ. ಅದರಲ್ಲೂ ಗುಜರಾತ್​​ನಲ್ಲಿ ದಾಖಲೆಯ ತಾಪಮಾನ ಈಗಲೇ ಕಾಣಿಸಿಕೊಂಡಿದೆ. ರಾಜ್ಯದ ಸುಮಾರು 10 ನಗರಗಳಲ್ಲಿ, ಉಷ್ಣತೆ  40 ಡಿಗ್ರಿ ಸೆಲ್ಸಿಯಸ್​ ದಾಟಿದೆ.  20 ವರ್ಷಗಳಲ್ಲಿ ಇದೇ ಮೊದಲಬಾರಿಗೆ ಅಹ್ಮದಾಬಾದ್​​ನಲ್ಲಿ, ಮಾರ್ಚ್ 15ರಂದು ಉಷ್ಣತೆ 41.5 ಡಿಗ್ರಿ ಸೆಲ್ಸಿಯಸ್​ ದಾಟಿತ್ತು.ಸುರೇಂದ್ರನಗರದಲ್ಲಿ ಗರಿಷ್ಠ 41.7 ಡಿಗ್ರಿ ಸೆಲ್ಸಿಯಸ್​ ಆಗಿತ್ತು. 

ಉಷ್ಣ ಅಲೆ ಹೆಚ್ಚಳದ ಬಗ್ಗೆ ಎಚ್ಚರಿಕೆ ನೀಡಿದ ಗುಜರಾತ್​ ಹವಾಮಾನ ಇಲಾಖೆ ನಿರ್ದೇಶಕಿ ಮನೋರಮಾ ಮೊಹಂತಿ, ಗುಜರಾತ್​​ನಾದ್ಯಂತ ಇನ್ನು ಕೆಲವು ದಿನಗಳಲ್ಲಿ ಬೇಸಿಗೆಯ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಜನರು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು ಇರಬೇಕು, ತಾಪಮಾನದಿಂದ ಆದಷ್ಟು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ. ಗುಜರಾತ್​​ನಲ್ಲಿ ತೀವ್ರ ಉಷ್ಣ ಅಲೆ ಪರಿಸ್ಥಿತಿ ಇನ್ನಷ್ಟು ದಿನಗಳ ಕಾಲ ಇರಲಿದೆ. ಅದರಲ್ಲಿ ಸೌರಾಷ್ಟ್ರ ಮತ್ತು ಕುಚ್​ ಪ್ರದೇಶದಲ್ಲಿ ಇನ್ನು 24 ಗಂಟೆಗಳ ಕಾಲ ಇದೇ ಪರಿಸ್ಥಿತಿ ಇರಲಿದ್ದು ಉತ್ತರ ಗುಜರಾತ್​​ನಲ್ಲಿ ಇನ್ನೆರಡು ದಿನ ಗರಿಷ್ಠ ಉಷ್ಣತೆ ಇರಲಿದೆ. ಅದಾದ ಬಳಿಕ ಉಷ್ಣ ಅಲೆ ಸ್ವಲ್ಪ ದುರ್ಬಲಗೊಂಡರೂ, ತಾಪಮಾನ ಕಡಿಮೆಯಾಗುವುದಿಲ್ಲ ಎಂದು ಮೊಹಂತಿ ಎಚ್ಚರಿಸಿದ್ದಾರೆ.

ಮಾರ್ಚ್​ 16ರಂದು ಟ್ವೀಟ್ ಮಾಡಿರುವ ಭಾರತೀಯ ಹವಾಮಾನ ಇಲಾಖೆ, ಇನ್ನೆರಡು ದಿನಗಳ ಕಾಲ ರಾಜಸ್ಥಾನದಲ್ಲಿ ಗಂಭೀರ ಸ್ವರೂಪದ ಉಷ್ಣ ಅಲೆ ಮತ್ತು ಜಮ್ಮು ವಿಭಾಗ, ಹಿಮಾಚಲ ಪ್ರದೇಶ, ಗುಜರಾತ್​, ಕೊಂಕಣ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ತೆಲಂಗಾಣ ಮತ್ತು ಒಡಿಶಾಗಳಲ್ಲಿ ಸಾಮಾನ್ಯ ಉಷ್ಣ ಅಲೆ ಏಳಲಿದೆ ಎಂದು ಎಚ್ಚರಿಕೆ ನೀಡಿತ್ತು.

ಇದನ್ನೂ ಓದಿ: Cyclone Asani: ಮುಂದಿನವಾರ ಅಪ್ಪಳಿಸಲಿದೆ ಅಸನಿ ಚಂಡಮಾರುತ; ಹವಾಮಾನ ಇಲಾಖೆಯಿಂದ ಎಚ್ಚರಿಕೆ

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ