AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​​ನಲ್ಲಿ ತೀವ್ರ ಉಷ್ಣ ಅಲೆ ವಾತಾವರಣ; ರಾಜ್ಯಾದ್ಯಂತ ಹಳದಿ ಅಲರ್ಟ್​ ಘೋಷಿಸಿದ ಹವಾಮಾನ ಇಲಾಖೆ

ಉಷ್ಣ ಅಲೆ ಹೆಚ್ಚಳದ ಬಗ್ಗೆ ಎಚ್ಚರಿಕೆ ನೀಡಿದ ಗುಜರಾತ್​ ಹವಾಮಾನ ಇಲಾಖೆ ನಿರ್ದೇಶಕಿ ಮನೋರಮಾ ಮೊಹಂತಿ, ಗುಜರಾತ್​​ನಾದ್ಯಂತ ಇನ್ನು ಕೆಲವು ದಿನಗಳಲ್ಲಿ ಬೇಸಿಗೆಯ ತೀವ್ರತೆ ಇನ್ನಷ್ಟು ಹೆಚ್ಚಲಿದೆ ಎಂದು ಹೇಳಿದ್ದಾರೆ.

ಗುಜರಾತ್​​ನಲ್ಲಿ ತೀವ್ರ ಉಷ್ಣ ಅಲೆ ವಾತಾವರಣ; ರಾಜ್ಯಾದ್ಯಂತ ಹಳದಿ ಅಲರ್ಟ್​ ಘೋಷಿಸಿದ ಹವಾಮಾನ ಇಲಾಖೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Mar 17, 2022 | 9:28 AM

Share

ಗುಜರಾತ್​​ನಲ್ಲಿ ಉಷ್ಣ ಅಲೆ (Heat Wave) ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಅಲ್ಲಿ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್​ ಘೋಷಿಸಿದೆ. ದೇಶಾದ್ಯಂತ ಬೇಸಿಗೆ ಶುರುವಾಗಿದೆ. ಅದರಲ್ಲೂ ಗುಜರಾತ್​​ನಲ್ಲಿ ದಾಖಲೆಯ ತಾಪಮಾನ ಈಗಲೇ ಕಾಣಿಸಿಕೊಂಡಿದೆ. ರಾಜ್ಯದ ಸುಮಾರು 10 ನಗರಗಳಲ್ಲಿ, ಉಷ್ಣತೆ  40 ಡಿಗ್ರಿ ಸೆಲ್ಸಿಯಸ್​ ದಾಟಿದೆ.  20 ವರ್ಷಗಳಲ್ಲಿ ಇದೇ ಮೊದಲಬಾರಿಗೆ ಅಹ್ಮದಾಬಾದ್​​ನಲ್ಲಿ, ಮಾರ್ಚ್ 15ರಂದು ಉಷ್ಣತೆ 41.5 ಡಿಗ್ರಿ ಸೆಲ್ಸಿಯಸ್​ ದಾಟಿತ್ತು.ಸುರೇಂದ್ರನಗರದಲ್ಲಿ ಗರಿಷ್ಠ 41.7 ಡಿಗ್ರಿ ಸೆಲ್ಸಿಯಸ್​ ಆಗಿತ್ತು. 

ಉಷ್ಣ ಅಲೆ ಹೆಚ್ಚಳದ ಬಗ್ಗೆ ಎಚ್ಚರಿಕೆ ನೀಡಿದ ಗುಜರಾತ್​ ಹವಾಮಾನ ಇಲಾಖೆ ನಿರ್ದೇಶಕಿ ಮನೋರಮಾ ಮೊಹಂತಿ, ಗುಜರಾತ್​​ನಾದ್ಯಂತ ಇನ್ನು ಕೆಲವು ದಿನಗಳಲ್ಲಿ ಬೇಸಿಗೆಯ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಜನರು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು ಇರಬೇಕು, ತಾಪಮಾನದಿಂದ ಆದಷ್ಟು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ. ಗುಜರಾತ್​​ನಲ್ಲಿ ತೀವ್ರ ಉಷ್ಣ ಅಲೆ ಪರಿಸ್ಥಿತಿ ಇನ್ನಷ್ಟು ದಿನಗಳ ಕಾಲ ಇರಲಿದೆ. ಅದರಲ್ಲಿ ಸೌರಾಷ್ಟ್ರ ಮತ್ತು ಕುಚ್​ ಪ್ರದೇಶದಲ್ಲಿ ಇನ್ನು 24 ಗಂಟೆಗಳ ಕಾಲ ಇದೇ ಪರಿಸ್ಥಿತಿ ಇರಲಿದ್ದು ಉತ್ತರ ಗುಜರಾತ್​​ನಲ್ಲಿ ಇನ್ನೆರಡು ದಿನ ಗರಿಷ್ಠ ಉಷ್ಣತೆ ಇರಲಿದೆ. ಅದಾದ ಬಳಿಕ ಉಷ್ಣ ಅಲೆ ಸ್ವಲ್ಪ ದುರ್ಬಲಗೊಂಡರೂ, ತಾಪಮಾನ ಕಡಿಮೆಯಾಗುವುದಿಲ್ಲ ಎಂದು ಮೊಹಂತಿ ಎಚ್ಚರಿಸಿದ್ದಾರೆ.

ಮಾರ್ಚ್​ 16ರಂದು ಟ್ವೀಟ್ ಮಾಡಿರುವ ಭಾರತೀಯ ಹವಾಮಾನ ಇಲಾಖೆ, ಇನ್ನೆರಡು ದಿನಗಳ ಕಾಲ ರಾಜಸ್ಥಾನದಲ್ಲಿ ಗಂಭೀರ ಸ್ವರೂಪದ ಉಷ್ಣ ಅಲೆ ಮತ್ತು ಜಮ್ಮು ವಿಭಾಗ, ಹಿಮಾಚಲ ಪ್ರದೇಶ, ಗುಜರಾತ್​, ಕೊಂಕಣ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ತೆಲಂಗಾಣ ಮತ್ತು ಒಡಿಶಾಗಳಲ್ಲಿ ಸಾಮಾನ್ಯ ಉಷ್ಣ ಅಲೆ ಏಳಲಿದೆ ಎಂದು ಎಚ್ಚರಿಕೆ ನೀಡಿತ್ತು.

ಇದನ್ನೂ ಓದಿ: Cyclone Asani: ಮುಂದಿನವಾರ ಅಪ್ಪಳಿಸಲಿದೆ ಅಸನಿ ಚಂಡಮಾರುತ; ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ