ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಯೂತ್ ಕಾಂಗ್ರೆಸ್ ಮುಖ್ಯಸ್ಥ ಬಿವಿ ಶ್ರೀನಿವಾಸ್‌ಗೆ ಸುಪ್ರೀಂಕೋರ್ಟ್ ಜಾಮೀನು

ಏಪ್ರಿಲ್ 18 ರಂದು ದತ್ತಾ ತನ್ನ ವಿರುದ್ಧ ಆರು ತಿಂಗಳ ಕಾಲ ಮಾನಸಿಕವಾಗಿ ನಿಂದನೆ ಮತ್ತು ತಾರತಮ್ಯ ಎಸಗಿದ್ದಾರೆ ಎಂದು ಆರೋಪಿಸಿದ ನಂತರ ಯುವ ಕಾಂಗ್ರೆಸ್ ನಾಯಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಯೂತ್ ಕಾಂಗ್ರೆಸ್ ಮುಖ್ಯಸ್ಥ ಬಿವಿ ಶ್ರೀನಿವಾಸ್‌ಗೆ ಸುಪ್ರೀಂಕೋರ್ಟ್ ಜಾಮೀನು
ಶ್ರೀನಿವಾಸ್ ಬಿವಿ
ರಶ್ಮಿ ಕಲ್ಲಕಟ್ಟ

Updated on: May 17, 2023 | 3:15 PM

ಲೈಂಗಿಕ ಕಿರುಕುಳ ಪ್ರಕರಣದಲ್ಲಿ(Sexual harassment case) ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿವಿ (Srinivas BV) ಅವರಿಗೆ ಸುಪ್ರೀಂಕೋರ್ಟ್ ಇಂದು (ಮೇ17 ರಂದು) ನಿರೀಕ್ಷಣಾ ಜಾಮೀನು (anticipatory bail) ನೀಡಿದೆ. ರಾಜ್ಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಅಂಗಿತಾ ದತ್ತಾ ಅವರನ್ನು ನಿಂದಿಸಿ, ಕಿರುಕುಳ ನೀಡಿದ ಆರೋಪದಲ್ಲಿ ಶ್ರೀನಿವಾಸ್ ಅವರನ್ನು ಏಪ್ರಿಲ್ 22 ರಂದು ಬಂಧಿಸಲಾಗಿತ್ತು.ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಿಷಯವನ್ನು ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದನ್ನು ನಿಷೇಧಿಸುವ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67 ಅನ್ನು ಉಲ್ಲಂಘಿಸಿದ ಆರೋಪವನ್ನೂ ಶ್ರೀನಿವಾಸ್ ವಿರುದ್ಧ ಹೊರಿಸಲಾಗಿದೆ.

ಗೌಹಾಟಿ ಹೈಕೋರ್ಟ್ ಮೇ 4 ರಂದು ಪ್ರಥಮ ಮಾಹಿತಿ ವರದಿಯನ್ನು ನಿಗ್ರಹಿಸುವಂತೆ ಅವರ ಮನವಿಯನ್ನು ನಿರಾಕರಿಸಿತು. ಹೈಕೋರ್ಟ್ ಕೂಡ ನಿರೀಕ್ಷಣಾ ಪರಿಹಾರಕ್ಕಾಗಿ ಅವರ ಮನವಿಯನ್ನು ನಿರಾಕರಿಸಿತ್ತು, ಆದ್ದರಿಂದ ಅವರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದರು.
ಏಪ್ರಿಲ್ 18 ರಂದು ದತ್ತಾ ತನ್ನ ವಿರುದ್ಧ ಆರು ತಿಂಗಳ ಕಾಲ ಮಾನಸಿಕವಾಗಿ ನಿಂದನೆ ಮತ್ತು ತಾರತಮ್ಯ ಎಸಗಿದ್ದಾರೆ ಎಂದು ಆರೋಪಿಸಿದ ನಂತರ ಯುವ ಕಾಂಗ್ರೆಸ್ ನಾಯಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆಕೆ ಮೌನವಾಗಿರಲು ಸಲಹೆ ನೀಡಲಾಯಿತು ಮತ್ತು ತನ್ನ ಆರೋಪಗಳ ಬಗ್ಗೆ ಯಾವುದೇ ತನಿಖೆಯನ್ನು ಪ್ರಾರಂಭಿಸಲಿಲ್ಲ ಎಂದು ಅವರು ಹೇಳಿದ್ದಾರೆ. ಶಂಕಿತ ಪಕ್ಷ ವಿರೋಧಿ ನಡವಳಿಕೆಗಾಗಿ ಏಪ್ರಿಲ್ 22 ರಂದು ದತ್ತಾ ಅವರನ್ನು ಆರು ವರ್ಷಗಳ ಕಾಲ ಸಂಘಟನೆಯ ಪ್ರಮುಖ ಸದಸ್ಯತ್ವದಿಂದ ವಜಾಗೊಳಿಸಲಾಯಿತು.

ಬುಧವಾರ ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಸಂಜಯ್ ಕರೋಲ್ ಅವರ ವಿಭಾಗೀಯ ಪೀಠವು ರಾಯಪುರದಲ್ಲಿ ಫೆಬ್ರವರಿ 24 ಮತ್ತು 26 ರ ನಡುವೆ ಈ ಘಚನೆ ನಡೆದಿದೆ ಮತ್ತು ಏಪ್ರಿಲ್‌ನಲ್ಲಿ ಅಸ್ಸಾಂನಲ್ಲಿ ದೂರು ದಾಖಲಿಸಲಾಗಿದೆ ಎಂದು ಗಮನಿಸಿತು.

ಇದನ್ನೂ ಓದಿ: ಮುಖ್ಯಮಂತ್ರಿ ಆಯ್ಕೆ ತೀರ್ಮಾನ ಅಂತಿಮವಾಗಿಲ್ಲ; ರಣದೀಪ್ ಸುರ್ಜೇವಾಲ

ಎಫ್‌ಐಆರ್ ದಾಖಲಿಸಲು ಎರಡು ತಿಂಗಳ ವಿಳಂಬವನ್ನು ಪರಿಗಣಿಸಿ, ಅರ್ಜಿದಾರರಿಗೆ ಮಧ್ಯಂತರ ರಕ್ಷಣೆಗೆ ಅರ್ಹರಾಗಿರುತ್ತಾರೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಬಂಧನದ ಸಂದರ್ಭದಲ್ಲಿ, ಅರ್ಜಿದಾರರನ್ನು ರೂ 50,000 ಶ್ಯೂರಿಟಿಗಳನ್ನು ಒದಗಿಸುವ ಮೇಲೆ ನಿರೀಕ್ಷಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ನಾವು ನಿರ್ದೇಶಿಸುತ್ತೇವೆ ಎಂದು ಕೋರ್ಟ್ ಹೇಳಿದೆ.

ಶ್ರೀನಿವಾಸ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಮೊಕದ್ದಮೆ ದಾಖಲಿಸುವ ಮುನ್ನ ದತ್ತಾ ಮಾಡಿದ ಟ್ವೀಟ್‌ಗಳು ಪಕ್ಷದಲ್ಲಿನ ಪೂರ್ವಾಗ್ರಹಕ್ಕೆ ವಿರುದ್ಧವಾಗಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಮೊಕದ್ದಮೆ ಹೂಡುವ ಮೊದಲು ಅವರು ಆರು ಮಾಧ್ಯಮ ಸಂದರ್ಶನಗಳನ್ನು ನೀಡಿದ್ದರು, ಆದರೆ ಲೈಂಗಿಕ ಕಿರುಕುಳದ ಬಗ್ಗೆ ಯಾವುದೇ ದೂರು ನೀಡಿಲ್ಲ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us