AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Saligrama Shile: ಅಯೋಧ್ಯೆಗೆ ಬಂದಿಳಿದ 2 ಪವಿತ್ರ ಸಾಲಿಗ್ರಾಮ ಶಿಲೆಗಳು; ನೇಪಾಳ ಬಿಟ್ಟರೆ ಬೇರೆಲ್ಲೂ ಸಿಗದ ಅಮೂಲ್ಯ ಶಿಲೆಗಳಿವು

Lord Ram's Idol: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದಲ್ಲಿ ಶ್ರೀರಾಮ ಮತ್ತು ಸೀತೆಯ ವಿಗ್ರಹಗಳಿಗಾಗಿ ನೇಪಾಳದಿಂದ ತರಿಸಲಾಗಿರುವ ಎರಡು ಸಾಲಿಗ್ರಾಮ ಶಿಲೆಗಳು ಇಂದು ಗುರುವಾರ ಅಯೋಧ್ಯೆ ತಲುಪಿವೆ. ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕೆ ಬಳಕೆಯಾಗುವ ಸಾಮಗ್ರಿಗಳ ಸಂಗ್ರಹಸ್ಥಳವಾದ ರಾಮ್ ಸೇವಕ್ ಪುರಂ ಎಂಬಲ್ಲಿ ಈ ಶಿಲೆಗಳನ್ನು ಇಡಲಾಗಿದೆ.

Saligrama Shile: ಅಯೋಧ್ಯೆಗೆ ಬಂದಿಳಿದ 2 ಪವಿತ್ರ ಸಾಲಿಗ್ರಾಮ ಶಿಲೆಗಳು; ನೇಪಾಳ ಬಿಟ್ಟರೆ ಬೇರೆಲ್ಲೂ ಸಿಗದ ಅಮೂಲ್ಯ ಶಿಲೆಗಳಿವು
ಸಾಲಿಗ್ರಾಮ ಶಿಲೆಗಳು
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ|

Updated on: Feb 02, 2023 | 12:49 PM

Share

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದಲ್ಲಿ (Ayodhya Sri Rama Temple) ಶ್ರೀರಾಮ ಮತ್ತು ಸೀತೆಯ ವಿಗ್ರಹಗಳಿಗಾಗಿ ನೇಪಾಳದಿಂದ ತರಿಸಲಾಗಿರುವ ಎರಡು ಸಾಲಿಗ್ರಾಮ ಶಿಲೆಗಳು (Saligrama Stones) ಇಂದು ಗುರುವಾರ ಅಯೋಧ್ಯೆ ತಲುಪಿವೆ. ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕೆ ಬಳಕೆಯಾಗುವ ಸಾಮಗ್ರಿಗಳ ಸಂಗ್ರಹಸ್ಥಳವಾದ ರಾಮ್ ಸೇವಕ್ ಪುರಂ ಎಂಬಲ್ಲಿ ಈ ಶಿಲೆಗಳನ್ನು ಇಡಲಾಗಿದೆ. ಇಂದು ಬೆಳಗ್ಗೆ 10:30ಕ್ಕೆ ಈ ಪವಿತ್ರ ಶಿಲೆಗಳಿಗೆ ಪೂಜೆ ಮಾಡಲಾಗಿದೆ. ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಎಎನ್​ಐ ಸುದ್ದಿ ಸಂಸ್ಥೆಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ..

ಈಗ ತರಲಾಗಿರುವ ಎರಡು ಸಾಲಿಗ್ರಾಮ ಶಿಲೆಗಳು ನೇಪಾಳದ ಕಾಳಿ ಗಂಡಕಿ ನದಿಯ ಜಲಪಾತವೊಂದರಿಂದ ಆಯ್ದುಕೊಂಡು ಬರಲಾಗಿದೆ.

ಕೆಲವು ದೇವಸ್ಥಾನಗಳಲ್ಲಿ ವಿಷ್ಣು ದೇವರ ಅಮೂರ್ತ ರೂಪದ ವಿಗ್ರಹಗಳನ್ನು (Non-anthropomorphic Image) ಸಾಲಿಗ್ರಾಮ ಶಿಲೆಗಳಿಂದಲೇ ಕಡೆಯಲಾಗಿರುತ್ತದೆ. ಈಗ ತಂದಿರುವ ಎರಡು ಕಲ್ಲುಗಳಲ್ಲಿ ಒಂದು ಕಲ್ಲು 26 ಟನ್​ನದ್ದಾದರೆ ಮತ್ತೊಂದು ಕಲ್ಲು 14 ಟನ್ ತೂಗುತ್ತದೆ. ರಾಮನ ಮೂರ್ತಿ 5.5 ಅಡಿ ಇರಲಿದ್ದು, ಇಂದಿನಿಂದಲೇ ವಿಗ್ರಹ ಕೆತ್ತನೆ ನಡೆಯಲಿದೆ.

ಇದನ್ನೂ ಓದಿ: Divorce: ಮುಸ್ಲಿಂ ಮಹಿಳೆಯರು ವಿಚ್ಛೇದನಕ್ಕಾಗಿ ಕೌಟುಂಬಿಕ ನ್ಯಾಯಾಲಯವನ್ನು ಮಾತ್ರ ಸಂಪರ್ಕಿಸಬೇಕು: ಮದ್ರಾಸ್ ಹೈಕೋರ್ಟ್

ಸಾಲಿಗ್ರಾಮ ಶಿಲೆಗಳ ವಿಶೇಷತೆ:

ವೈಜ್ಞಾನಿಕವಾಗಿ ಈ ಸಾಲಿಗ್ರಾಮ ಕಲ್ಲುಗಳು ಒಂದು ರೀತಿಯಲ್ಲಿ ಪಳೆಯುಳಿಕೆ ಶಿಲೆಗಳಾಗಿವೆ (Fossilised Stone). ಇದು ನೇಪಾಳದ ಕಾಳಿ ಗಂಡಕಿ ನದಿ ತೀರಗಳಲ್ಲಿ ಮಾತ್ರ ಸಿಗುವ ಅಪರೂಪದ ಶಿಲೆಗಳು. 6ರಿಂದ 40 ಕೋಟಿ ವರ್ಷದಷ್ಟು ಪುರಾತನವಾದ (Devonian-Cretaceous period) ಪಳೆಯುಳಿಕೆ ಶಿಲೆಗಳಿವು.

ಹಿಂದೂ ಧರ್ಮದಲ್ಲಿ ಇವುಗಳಿಗೆ ಪವಿತ್ರ ಸ್ಥಾನ ಇದೆ. ಇದನ್ನು ದೈವ ಶಿಲೆ ಎಂದೂ ಪರಿಗಣಿಸಲಾಗುತ್ತದೆ. ಈ ಕಲ್ಲು ವಿಷ್ಣುವಿನ ಗುರುತಾದ ಶಂಖವನ್ನು ಹೋಲುತ್ತದೆ. ಐತಿಹ್ಯದ ಪ್ರಕಾರ, ವ್ಯಾಸದೇವರಿಂದ ಈ ಪವಿತ್ರ ಕಲ್ಲನ್ನು ಮಧ್ವಾಚಾರ್ಯರು ಪಡೆದಿದ್ದರಂತೆ. ರಾಮನು ವಿಷ್ಣುವಿನ ಅವತಾರವೆಂದು ನಂಬಲಾಗಿರುವುದರಿಂದ ನೇಪಾಳದಿಂದ ಸಾಲಿಗ್ರಾಮ ಶಿಲೆಗಳನ್ನು ಅಯೋಧ್ಯೆಯ ರಾಮನ ವಿಗ್ರಹ ಕೆತ್ತನೆಗೆಂದು ತರಲಾಗಿದೆ.

ಉಡುಪಿಯ ಕೃಷ್ಣ ಮಠದಲ್ಲಿರುವ ಕೃಷ್ಣನ ವಿಗ್ರಹ, ವೃಂದಾವನದ ರಾಧಾ ರಮಣ ದೇವಸ್ಥಾನದ ಮೂರ್ತಿ, ತಿರುವನಂತಪುರಂ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ವಿಷ್ಣು ವಿಗ್ರಹ ಮತ್ತು ಗಡವಾಲ್​ನ ಬದ್ರೀನಾಥ ಮಂದಿರದ ವಿಷ್ಣು ವಿಗ್ರಹವನ್ನು ಸಾಲಿಗ್ರಾಮ ಶಿಲೆಗಳಿಂದ ನಿರ್ಮಿಸಲಾಗಿದೆ.

ಇದನ್ನೂ ಓದಿ: ಇಂದಿರಾಗಾಂಧಿ ಹಾಗೂ ರಾಜೀವ್ ಗಾಂಧಿ ಹುತಾತ್ಮರಾಗಿಲ್ಲ ಅದೊಂದು ಅಪಘಾತವಷ್ಟೇ ಎಂದ ಬಿಜೆಪಿ ಸಚಿವ

ನೇಪಾಳದಿಂದ ಅಯೋಧ್ಯೆಗೆ ಶೀಲ ಯಾತ್ರೆ ಮೂಲಕ ತರಲಾಗಿರುವ ಸಾಲಿಗ್ರಾಮ ಶಿಲೆಗಳನ್ನು ಮಾರ್ಗಮಧ್ಯೆ ಹಲವು ಸ್ಥಳಗಳಲ್ಲಿ ಸಾರ್ವಜನಿಕ ವೀಕ್ಷಣೆಗಾಗಿ ಪ್ರದರ್ಶನಕ್ಕಿಡಲಾಗಿತ್ತು. ಹಲವು ಕಡೆ ಈ ಶಿಲೆಗೆ ಪೂಜೆಗಳು ನಡೆದಿವೆ. ನೇಪಾಳದಿಂದ ಅಲ್ಲಿನ ನಿಯೋಗವೊಂದರ ಐವರು ಸದಸ್ಯರು ಹಾಗೂ ವಿಶ್ವ ಹಿಂದೂಪರಿಷತ್​ನ ನೂರು ಮಂದಿ ಪ್ರತಿನಿಧಿಗಳು ಶೀಲಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಬಾಬ್ರಿ ಮಸೀದಿ ಇದ್ದ ಜಾಗವನ್ನು ಶ್ರೀರಾಮನ ಜನ್ಮಸ್ಥಳವೆಂದು ನಂಬಲಾಗಿದೆ. ನ್ಯಾಯಾಲಯ ಕೂಡ ಈ ಜಾಗದಲ್ಲಿ ಮಂದಿರ ನಿರ್ಮಾಣಕ್ಕೆ ಅನುಮತಿ ಕೊಟ್ಟಿದೆ. ಈಗಾಗಲೇ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಮುಂದಿನ ವರ್ಷದ ಜನವರಿಯೊಳಗೆ ಪೂರ್ಣ ಸಿದ್ಧಗೊಂಡು ಉದ್ಘಾಟನೆಯಾಗುವ ನಿರೀಕ್ಷೆ ಇದೆ. ಮುಂಬರುವ ಉತ್ತರ ಪ್ರದೇಶ ಮತ್ತು ಲೋಕಸಭಾ ಚುನಾವಣೆಗಳಿಗೆ ಅಯೋಧ್ಯೆ ರಾಮ ಮಂದಿರದ ವಿಚಾರವು ಬಿಜೆಪಿಯ ಪ್ರಮುಖ ಅಸ್ತ್ರಗಳಲ್ಲಿ ಒಂದಾಗಿರಲಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ