AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India: ಶಂಕರ್ ಮಿಶ್ರಾಗೆ ಶಿಕ್ಷೆ, ಜೌಹರ್ ಅಲಿಖಾನ್‌ಗೆ ಜಾಮೀನು, ಈ ತಾರತಮ್ಯ ಏಕೆ ಎಂದು ಪ್ರಶ್ನಿಸಿದ ಬಿಜೆಪಿ ನಾಯಕ

ದೆಹಲಿಯ ವಿಮಾನ ನಿಲ್ದಾಣದಲ್ಲಿ ನಡೆದ ಮೂತ್ರ ವಿಸರ್ಜನೆಯ ಹೊಸ ಪ್ರಕರಣಕ್ಕೂ ಹಾಗೂ 2022 ನವೆಂಬರ್​ನಲ್ಲಿ ಏರ್ ಇಂಡಿಯಾದಲ್ಲಿ ನಡೆದ ಮೂತ್ರ ವಿಸರ್ಜನೆಯ ಪ್ರಕರಣದ ನಡುವಿನ ಹೋಲಿಕೆಯು ಅಪರಾಧಿಗಳ ಧರ್ಮದ ವಿಚಾರಗಳಿಗೆ ಈಗ ಕಾರಣವಾಗಿದೆ. 

Air India: ಶಂಕರ್ ಮಿಶ್ರಾಗೆ ಶಿಕ್ಷೆ, ಜೌಹರ್ ಅಲಿಖಾನ್‌ಗೆ ಜಾಮೀನು, ಈ ತಾರತಮ್ಯ ಏಕೆ ಎಂದು ಪ್ರಶ್ನಿಸಿದ ಬಿಜೆಪಿ ನಾಯಕ
ಸಾಂದರ್ಭಿಕ ಚಿತ್ರ Image Credit source: HT
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Jan 12, 2023 | 11:52 AM

ದೆಹಲಿಯ ವಿಮಾನ ನಿಲ್ದಾಣದಲ್ಲಿ (delhi airport) ನಡೆದ ಮೂತ್ರ ವಿಸರ್ಜನೆಯ ಹೊಸ ಪ್ರಕರಣಕ್ಕೂ ಹಾಗೂ 2022 ನವೆಂಬರ್​ನಲ್ಲಿ ಏರ್ ಇಂಡಿಯಾದಲ್ಲಿ (Air India) ನಡೆದ ಮೂತ್ರ ವಿಸರ್ಜನೆಯ ಪ್ರಕರಣದ ನಡುವಿನ ಹೋಲಿಕೆಯು ಅಪರಾಧಿಗಳ ಧರ್ಮದ ವಿಚಾರಗಳಿಗೆ ಈಗ ಕಾರಣವಾಗಿದೆ. ಇತ್ತೀಚೆಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಜೌಹರ್ ಅಲಿಖಾನ್‌ಗೆ ಬಂಧನ ಮಾಡಿ ಅದೇ ದಿನ ದೆಹಲಿ ಪೊಲೀಸರು ಜಾಮೀನು ನೀಡಿದ್ದು ಏಕೆ ಎಂದು ಪ್ರಶ್ನಿಸಿದ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಇದೇ ರೀತಿಯ ಘಟನೆ ಈ ಹಿಂದೆ ಏರ್ ಇಂಡಿಯಾ ನಡೆದಿತ್ತು, ಆದರೆ ಆರೋಪಿ ಶಂಕರ್ ಮಿಶ್ರಾಗೆ ಜಾಮೀನು ನೀಡುವುದನ್ನು ವಿರೋಧಿಸಿದ್ದಾರೆ ಎಂದು ಹೇಳಿದ್ದಾರೆ. ಇದೀಗ ಈ ವಿಚಾರ ಭಾರೀ ಚರ್ಚೆ ಕಾರಣವಾಗಿದೆ. ನ್ಯೂಯಾರ್ಕ್-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ನವೆಂಬರ್‌ನಲ್ಲಿ ಮೊದಲ ಮೂತ್ರ ವಿಸರ್ಜನೆ ಪ್ರಕರಣ ನಡೆದಿತ್ತು. ನಂತರ ದೆಹಲಿಯಲ್ಲಿ ಮತ್ತೊಬ್ಬ ವ್ಯಕ್ತಿ ವಿಮಾನ ನಿಲ್ದಾಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

ಈ ಬಗ್ಗೆ ಯಾವುದೇ ಮಾಧ್ಯಮಗಳು ಅಥವಾ ನಾಯಕರು ಮಾತನಾಡುತ್ತಿಲ್ಲ ಎಂದು ಹೇಳಿದ್ದಾರೆ. ಜೌಹರ್ ಅವರನ್ನು ಕೆಲಸದಿಂದ ಏಕೆ ವಜಾಗೊಳಿಸಿಲ್ಲ ಆದರೆ ಶಂಕರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ? ಎಂದು ಬಿಜೆಪಿ ನಾಯಕರು ಟ್ವೀಟ್ ಮಾಡಿದ್ದಾರೆ.

ಏರ್ ಇಂಡಿಯಾ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಶ್ರಾ ತಂದೆ ವಾಟ್ಸಾಪ್ ಸಂದೇಶ ಕಳುಹಿಸಿದ್ದರು ಎಂದು ದೂರುದಾರರು ಹೇಳಿದ್ದಾರೆ. ಇಲ್ಲಿಯವರೆಗೆ ಮೂರು ಮೂತ್ರ ವಿಸರ್ಜನೆಯ ಘಟನೆಗಳು ವರದಿಯಾಗಿವೆ. ಮೊದಲನೆಯದು ಕಳೆದ ವರ್ಷ ನವೆಂಬರ್‌ನಲ್ಲಿ ಏರ್ ಇಂಡಿಯಾ ವಿಮಾನದಲ್ಲಿ ನಡೆದ ಘಟನೆ ಮತ್ತು ಮಹಿಳಾ ಪ್ರಯಾಣಿಕರ ದೂರಿನ ನಂತರ ವರದಿಯಾದ ನಂತರ ಆತನಿಗೆ ನೋಟಿಸ್ ನೀಡಲಾಗಿತ್ತು. ಕುಡಿದ ಅಮಲಿನಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಕ್ಕಾಗಿ ಆರೋಪಿ ಶಂಕರ್ ಮಿಶ್ರಾ ಅವರನ್ನು ಬಂಧಿಸಿ ಕೆಲಸದಿಂದ ವಜಾಗೊಳಿಸಲಾಗಿತ್ತು.

ಇದನ್ನು ಓದಿ:Air India: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿ ಶಂಕರ್ ಮಿಶ್ರಾಗೆ 14 ದಿನ ನ್ಯಾಯಾಂಗ ಬಂಧನ

ಕಳೆದ ವರ್ಷ ಡಿಸೆಂಬರ್ 6ರಂದು ಪ್ಯಾರಿಸ್-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಎರಡನೇ ಘಟನೆ ವರದಿಯಾಗಿದೆ. ಕುಡಿದ ಅಮಲಿನಲ್ಲಿದ್ದ ಪ್ರಯಾಣಿಕನನ್ನು ಬಂಧಿಸಲಾಯಿತು ಆದರೆ ಅವರು ಲಿಖಿತ ಕ್ಷಮೆಯಾಚಿಸಿದ ನಂತರ ಯಾವುದೇ ಕ್ರಮವನ್ನು ತೆಗೆದುಕೊಳ್ಳಲಿಲ್ಲ.

ಮೂರನೇ ಘಟನೆ ಜನವರಿ 8 ರಂದು ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 3ರ ನಿರ್ಗಮನ ಗೇಟ್ 6ರ ಮುಂದೆ ದಮ್ಮಾಮ್‌ಗೆ ಪ್ರಯಾಣಿಸುತ್ತಿದ್ದ ಜೌಹರ್ ಅಲಿ ಖಾನ್ ಮೂತ್ರ ವಿಸರ್ಜನೆ ಮಾಡಿದ ಘಟನೆ. ಬಿಹಾರ ನಿವಾಸಿ ಖಾನ್ ಅವರನ್ನು ಅದೇ ದಿನ ಬಂಧಿಸಿ ಜಾಮೀನು ಬಾಂಡ್ ಮೇಲೆ ಬಿಡುಗಡೆ ಮಾಡಲಾಯಿತು. ವೈದ್ಯಕೀಯ ಪರೀಕ್ಷೆಯಲ್ಲಿ ಮದ್ಯ ಸೇವಿಸಿರುವುದು ದೃಢಪಟ್ಟಿದೆ. ಮೊದಲ ಘಟನೆಯ ಬಗ್ಗೆ ದೊಡ್ಡ ದೊಡ್ಡ ಚರ್ಚೆಗಳು ನಡೆದಿತ್ತು. ಅದು ಭಾರೀ ಚರ್ಚೆ ಕೂಡ ಕಾರಣವಾಗಿತ್ತು. ಅವರ ಪ್ರಕರಣದ ತೀರ್ಪನ್ನು ಕಾಯ್ದಿರಿಸಲಾಗಿದೆ ಮತ್ತು ನ್ಯಾಯಾಧೀಶರು ವಯಸ್ಸಾದ ಮಹಿಳೆಯ ಮೇಲೆ ಮೂತ್ರ ವಿಸರ್ಜನೆಯ ಕೃತ್ಯವನ್ನು ಅತ್ಯಂತ ಅಸಹ್ಯಕರ ಮತ್ತು ಎಂದು ಹೇಳಿದರು.

ಮೊದಲ ಏರ್ ಇಂಡಿಯಾ ಘಟನೆ ವರದಿಯಾದ ಕೂಡಲೇ ಆರೋಪಿಯ ಧರ್ಮದ ವಿಷಯವು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯಾಗಿದೆ . ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಟ್ವೀಟ್‌ನಲ್ಲಿ, ಶೇಖರ್ ಮಿಶ್ರಾ, ಮಿಶ್ರಾ ಅಲ್ಲ ಆದರೆ ಖಾನ್ ಆಗಿದ್ದರೆ ಏನಾಗುತ್ತಿತ್ತು ಎಂದು ಆಶ್ಚರ್ಯಪಟ್ಟಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶದ ಕಾರ್ಟ್‌ವೀಲ್‌ಗಳನ್ನು ಯಾರು ಮಾಡುತ್ತಾರೆ ಎಂದು ಊಹಿಸಿ? ಒಬ್ಬ ಮಿಶ್ರಾ ಅಥವಾ ಖಾನ್, ಕಾನೂನು ಎಲ್ಲರಿಗೂ ಒಂದೇ ಆಗಿರಬೇಕು. ಒಪ್ಪುತ್ತೀರಾ? ಟ್ವೀಟ್​​ನಲ್ಲಿ ಬರೆದುಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಚಿತ್ರ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ, ಕಾನೂನು ಎಲ್ಲರಿಗೂ ಒಂದೇ… ಮಾಧ್ಯಮಗಳು ತಾರತಮ್ಯ ಮಾಡುತ್ತವೆ. ಖಾನ್ ಆಗಿದ್ದರೆ ಇಷ್ಟೊತ್ತಿಗೆ ಅವರನ್ನು ಬಲಿಪಶು ಎಂದು ಕರೆಯುತ್ತಿದ್ದಿರಿ ಎಂದು ನನಗೆ ಗೊತ್ತು. ದಯವಿಟ್ಟು ಯೋಚಿಸಿ ಎಂದು ಅಗ್ನಿಹೋತ್ರಿ ಟ್ವೀಟ್ ಮಾಡಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:50 am, Thu, 12 January 23

ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್