AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಹುದ್ದೆಯ ಸಭ್ಯತೆ ಕಾಪಾಡಿಕೊಳ್ಳಿ; ಅಮಿತ್ ಶಾ ವಿರುದ್ಧ ಶರದ್ ಪವಾರ್ ಆಕ್ರೋಶ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧದ ಹೇಳಿಕೆಗಳಿಗೆ ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಇಂದು ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವು 1978ರಲ್ಲಿ ತಾವು ಆರಂಭಿಸಿದ ದ್ರೋಹದ ರಾಜಕೀಯವನ್ನು ಕೊನೆಗೊಳಿಸಿದೆ ಎಂದು ಅಮಿತ್ ಶಾ ಭಾನುವಾರ ಹೇಳಿದ್ದರು. ಕೇಂದ್ರ ಸಚಿವ ಅಮಿತ್ ಶಾ 'ಗೃಹ ಸಚಿವ ಹುದ್ದೆಯ ಗೌರವ' ಕಾಯ್ದುಕೊಳ್ಳಬೇಕೆಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ನಿಮ್ಮ ಹುದ್ದೆಯ ಸಭ್ಯತೆ ಕಾಪಾಡಿಕೊಳ್ಳಿ; ಅಮಿತ್ ಶಾ ವಿರುದ್ಧ ಶರದ್ ಪವಾರ್ ಆಕ್ರೋಶ
Sharad Pawar
ಸುಷ್ಮಾ ಚಕ್ರೆ
|

Updated on: Jan 14, 2025 | 5:07 PM

Share

ಮುಂಬೈ: ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ತಮ್ಮ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಶರದ್ ಪವಾರ್ ಅವರು 40 ಶಾಸಕರನ್ನು ಹೊಂದಿರುವ ವಸಂತದಾದಾ ಪಾಟೀಲ್ ನೇತೃತ್ವದ ಸರ್ಕಾರವನ್ನು ತೊರೆದು ನಂತರ 1978ರಲ್ಲಿ ಸ್ವತಃ ಮುಖ್ಯಮಂತ್ರಿಯಾದ ಬಗ್ಗೆ ಅಮಿತ್ ಶಾ ತಮ್ಮ ಹೇಳಿಕೆಗಳಲ್ಲಿ ಉಲ್ಲೇಖಿಸಿದ್ದರು. ಅಮಿತ್ ಶಾ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಶರದ್ ಪವಾರ್, ಅಮಿತ್ ಶಾ ತಮ್ಮ ಹುದ್ದೆಯ ಸಭ್ಯತೆಯನ್ನು ಕಾಪಾಡಿಕೊಳ್ಳಬೇಕು ಎಂದಿದ್ದಾರೆ.

ಭಾನುವಾರ ಶಿರಡಿಯಲ್ಲಿ ನಡೆದ ಬಿಜೆಪಿಯ ರಾಜ್ಯಮಟ್ಟದ ಸಮಾವೇಶದಲ್ಲಿ ಅಮಿತ್ ಶಾ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವು 1978ರಿಂದ ಶರದ್ ಪವಾರ್ ಆರಂಭಿಸಿದ ಮೋಸದ ರಾಜಕೀಯವನ್ನು ಕೊನೆಗೊಳಿಸಿದೆ ಎಂದು ಹೇಳಿದ್ದರು. ಇದಕ್ಕೆ ಶರದ್ ಪವಾರ್ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ‘ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ’; ಮಹಾರಾಷ್ಟ್ರ ಚುನಾವಣೆಗೂ ಮುನ್ನ ಶರದ್ ಪವಾರ್ ಮಹತ್ವದ ಘೋಷಣೆ

ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ ಶರದ್ ಪವಾರ್, “ಅಮಿತ್ ಶಾ ಅವರ ಟೀಕೆ ನನ್ನ ಮೇಲೆ ಪರಿಣಾಮ ಬೀರುವುದಿಲ್ಲ. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಅವರ ವಿಧಾನವು ವಿಭಿನ್ನವಾಗಿತ್ತು. ಅದರ ಫಲಿತಾಂಶವನ್ನು ಏನೆಂದು ನಾವೆಲ್ಲರೂ ನೋಡಿದ್ದೇವೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲೂ ಅವರ ಪ್ರಯತ್ನಗಳು ನಿರೀಕ್ಷೆಗೆ ತಕ್ಕಂತೆ ಇರಲಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಎನ್​ಸಿಪಿ ಸಭೆಯಲ್ಲಿ ಆರ್​ಎಸ್​ಎಸ್​ಗೆ ಶರದ್ ಪವಾರ್ ಪ್ರಶಂಸೆ

“ನಾನು 1978ರಲ್ಲಿ ಮುಖ್ಯಮಂತ್ರಿಯಾಗಿದ್ದೆ. ಆಗ ಅಮಿತ್ ಶಾ ಎಲ್ಲಿದ್ದರು ಎಂದು ನನಗೆ ತಿಳಿದಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ, ಜನಸಂಘದ ಉತ್ತಮರಾವ್ ಪಾಟೀಲ್ ಅವರಂತಹವರು ಕೂಡ ನಾನು ಸಿಎಂ ಆಗಿದ್ದಾಗ ಸಂಪುಟದಲ್ಲಿ ಇದ್ದರು. ಈ ದೇಶವು ಅನೇಕ ಅತ್ಯುತ್ತಮ ಗೃಹ ಮಂತ್ರಿಗಳನ್ನು ಕಂಡಿದೆ, ಆದರೆ ಅವರಲ್ಲಿ ಯಾರನ್ನೂ ಅವರ ರಾಜ್ಯದಿಂದ ಹೊರಹಾಕಲಾಗಿಲ್ಲ” ಎಂದು ಅಮಿತ್ ಶಾ ವಿರುದ್ಧ ಶರದ್ ಪವಾರ್ ತೀವ್ರ ವಾಗ್ದಾಳಿ ನಡೆಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ